Don't Miss!
- Automobiles ಹೊಸ ಸುಜುಕಿ V-Strom 800 DE ಬೈಕ್ ಬಿಡುಗಡೆ: ಬೆಲೆ ರೂ.10.30 ಲಕ್ಷ
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಕರ್ನಾಟಕಕ್ಕೆ ಮಾತ್ರವಲ್ಲ, ಭಾರತಕ್ಕೆ ಸ್ಪೂರ್ತಿ ಎಂದ ಯೋಗಗುರು
ವರನಟ, ಗಾನ ಗಂಧರ್ವ, ನಟ ಸಾರ್ವಭೌಮ ''ಡಾ.ರಾಜ್ ಕುಮಾರ್ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಅವರು ಇಡೀ ಭಾರತಕ್ಕೆ ಸ್ಪೂರ್ತಿ''......ಹೀಗೆಂದು ಹೇಳಿದವರು ಬೇರೆ ಯಾರು ಅಲ್ಲಾ, ಯೋಗಗುರು ಬಾಬಾ ರಾಮ್ ದೇವ್.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ಡ್ಯಾನ್ಸ್ ರಿಯಾಲಿಟಿ ಶೋ 'ಡ್ಯಾನ್ಸ್ ಡ್ಯಾನ್ಸ್ ಜ್ಯೂನಿಯರ್ಸ್' ಕಾರ್ಯಕ್ರಮಕ್ಕೆ ಈ ವಾರ ಯೋಗಗುರು ಬಾಬಾ ರಾಮ್ ದೇವ್ ಅತಿಥಿಯಾಗಿ ಆಗಮಿಸಿದ್ದಾರೆ. ಈ ವೇಳೆ 'ಡ್ಯಾನ್ಸ್ ಡ್ಯಾನ್ಸ್ ಜ್ಯೂನಿಯರ್ಸ್' ಮಕ್ಕಳಿಗೆ ಹಾಗೂ ವೀಕ್ಷಕರಿಗೆ ಯೋಗದ ಬಗ್ಗೆ ಮತ್ತು ಅದರ ಮಹತ್ವ ಬಗ್ಗೆ ಅನೇಕ ಮಾಹಿತಿಯನ್ನ ತಿಳಿಸಿಕೊಟ್ಟರು.
ಯೋಗದ ಬಗ್ಗೆ ಮಾತನಾಡುವಾಗ ''ಡಾ.ರಾಜ್ ಕುಮಾರ್ ಅವರು ನಮಗೆ ಸ್ಪೂರ್ತಿ. ಅವರು ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ಭಾರತಕ್ಕೆ ಸ್ಪೂರ್ತಿ ಎಂದರು. ರಾಜ್ ಕುಮಾರ್ ಅವರು ನಮ್ಮನ್ನ ಬಿಟ್ಟು ಹೋಗಿಲ್ಲ. ಈ ಮಕ್ಕಳ ಮುಖಾಂತರ ರಾಜ್ ಕುಮಾರ್ ಅವರು ಇನ್ನು ಇದ್ದಾರೆ. ಕರ್ನಾಟಕಕ್ಕೆ ಮಾತ್ರವಲ್ಲ, ಭಾರತ ದೇಶಕ್ಕೆ ದೇವರು ಕೊಟ್ಟ ವರದಾನ ಡಾ.ರಾಜ್ ಕುಮಾರ್'' ಎಂದು ಕನ್ನಡದ ಚಿತ್ರರಂಗದ ಅಣ್ಣಾವ್ರ ಬಗ್ಗೆ ಅಭಿಮಾನದ ಮಾತುಗಳನ್ನಾಡಿದರು.
ಇದು ಕೇವಲ ಪ್ರೋಮೋ ಮಾತ್ರ, ಈ ಎಪಿಸೋಡ್ ಇಂದು ರಾತ್ರಿ 8 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತೆ. ಮಿಸ್ ಮಾಡ್ದೆ ನೋಡಿ......ಪ್ರೋಮೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ