Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಕರ್ನಾಟಕಕ್ಕೆ ಮಾತ್ರವಲ್ಲ, ಭಾರತಕ್ಕೆ ಸ್ಪೂರ್ತಿ ಎಂದ ಯೋಗಗುರು
ವರನಟ, ಗಾನ ಗಂಧರ್ವ, ನಟ ಸಾರ್ವಭೌಮ ''ಡಾ.ರಾಜ್ ಕುಮಾರ್ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಅವರು ಇಡೀ ಭಾರತಕ್ಕೆ ಸ್ಪೂರ್ತಿ''......ಹೀಗೆಂದು ಹೇಳಿದವರು ಬೇರೆ ಯಾರು ಅಲ್ಲಾ, ಯೋಗಗುರು ಬಾಬಾ ರಾಮ್ ದೇವ್.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ಡ್ಯಾನ್ಸ್ ರಿಯಾಲಿಟಿ ಶೋ 'ಡ್ಯಾನ್ಸ್ ಡ್ಯಾನ್ಸ್ ಜ್ಯೂನಿಯರ್ಸ್' ಕಾರ್ಯಕ್ರಮಕ್ಕೆ ಈ ವಾರ ಯೋಗಗುರು ಬಾಬಾ ರಾಮ್ ದೇವ್ ಅತಿಥಿಯಾಗಿ ಆಗಮಿಸಿದ್ದಾರೆ. ಈ ವೇಳೆ 'ಡ್ಯಾನ್ಸ್ ಡ್ಯಾನ್ಸ್ ಜ್ಯೂನಿಯರ್ಸ್' ಮಕ್ಕಳಿಗೆ ಹಾಗೂ ವೀಕ್ಷಕರಿಗೆ ಯೋಗದ ಬಗ್ಗೆ ಮತ್ತು ಅದರ ಮಹತ್ವ ಬಗ್ಗೆ ಅನೇಕ ಮಾಹಿತಿಯನ್ನ ತಿಳಿಸಿಕೊಟ್ಟರು.
ಯೋಗದ ಬಗ್ಗೆ ಮಾತನಾಡುವಾಗ ''ಡಾ.ರಾಜ್ ಕುಮಾರ್ ಅವರು ನಮಗೆ ಸ್ಪೂರ್ತಿ. ಅವರು ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ಭಾರತಕ್ಕೆ ಸ್ಪೂರ್ತಿ ಎಂದರು. ರಾಜ್ ಕುಮಾರ್ ಅವರು ನಮ್ಮನ್ನ ಬಿಟ್ಟು ಹೋಗಿಲ್ಲ. ಈ ಮಕ್ಕಳ ಮುಖಾಂತರ ರಾಜ್ ಕುಮಾರ್ ಅವರು ಇನ್ನು ಇದ್ದಾರೆ. ಕರ್ನಾಟಕಕ್ಕೆ ಮಾತ್ರವಲ್ಲ, ಭಾರತ ದೇಶಕ್ಕೆ ದೇವರು ಕೊಟ್ಟ ವರದಾನ ಡಾ.ರಾಜ್ ಕುಮಾರ್'' ಎಂದು ಕನ್ನಡದ ಚಿತ್ರರಂಗದ ಅಣ್ಣಾವ್ರ ಬಗ್ಗೆ ಅಭಿಮಾನದ ಮಾತುಗಳನ್ನಾಡಿದರು.
ಇದು ಕೇವಲ ಪ್ರೋಮೋ ಮಾತ್ರ, ಈ ಎಪಿಸೋಡ್ ಇಂದು ರಾತ್ರಿ 8 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತೆ. ಮಿಸ್ ಮಾಡ್ದೆ ನೋಡಿ......ಪ್ರೋಮೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ