Don't Miss!
- News Lok Sabha Election: ಗೂಗಲ್ನಲ್ಲೂ ಪ್ರಜಾಪ್ರಭುತ್ವದ ಹಬ್ಬದ ಸಂಭ್ರಮ
- Automobiles Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಮೀರ್ ಮುಂದಿಟ್ಟುಕೊಂಡು ಕನ್ನಡಿಗರ ಟೀಕಿಸಿದ ಠಾಕ್ರೆ
ಅವರು ಶಿವಸೇನೆ ಮುಖಂಡ 86 ವರ್ಷದ ಬಾಳಾ ಠಾಕ್ರೆ. ತಮ್ಮ ಸಾಮ್ನಾ ಪತ್ರಿಕೆಯಲ್ಲಿ ಅಮೀರ್ ಖಾನ್ ಅವರ ರಿಯಾಲಿಟಿ ಶೋ 'ಸತ್ಯಮೇವ ಜಯತೆ' ಕಾರ್ಯಕ್ರಮವನ್ನು ಕನ್ನಡದಲ್ಲಿ ಡಬ್ ಮಾಡಿ ಕನ್ನಡಿಗರಿಗೆ ದೊರೆಯುವಂತಾಗಬೇಕು ಎಂದು ವಾದಿಸಿದ್ದಾರೆ. ಭಾರತದಲ್ಲಿರುವ ಜನರ ಸಮಸ್ಯೆಗಳ ಭಂಡಾರವನ್ನು ತೆರೆದಿಡುವ ಈ ಕಾರ್ಯಕ್ರಮ ಸ್ಟಾರ್ ಪ್ಲಸ್ ಚಾನಲ್ನಲ್ಲಿ ಪ್ರತಿ ಭಾನುವಾರ ಬೆಳಿಗ್ಗೆ 11ರಿಂದ 12ರವರೆಗೆ ಪ್ರಸಾರವಾಗುತ್ತದೆ.
ಬಾಳಾ ಠಾಕ್ರೆ ಅವರು ಮಂಡಿಸಿರುವ ವಾದದಲ್ಲಿ, ಕನ್ನಡಪರ ಧೋರಣೆಗಿಂತ ಬಾಲಿವುಡ್ ನಟ ಅಮೀರ್ ಖಾನ್ ಅವರ ಕಾರ್ಯಕ್ರಮ ಜನರಿಗೆ ದೊರೆಯಬೇಕು ಎಂಬ ಅಂಶಕ್ಕೆ ಒತ್ತು ನೀಡಲಾಗಿದೆ. ಜೊತೆಗೆ ಡಬ್ಬಿಂಗ್ ವಿರೋಧಿಸುತ್ತಿರುವ ಸಿನೆಮಾ ಇಂಡಸ್ಟ್ರಿಯ ಜನರನ್ನು ಠಾಕ್ರೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಅಮೀರ್ ಖಾನ್ ಅವರ ಚಿತ್ರ ಮತ್ತು ಕಾರ್ಯಕ್ರಮಗಳಲ್ಲಿ ದೇಶಭಕ್ತಿ ಮತ್ತು ದೇಶದ ಬಗ್ಗೆ ಪ್ರೀತಿ ಮೆರೆದಾಡುತ್ತಿರುತ್ತದೆ ಎಂದು ಹಾಡಿ ಹೊಗಳಿರುವ ಠಾಕ್ರೆ, ದೇಶಪ್ರೇಮವನ್ನು ಬದಿಗಿಟ್ಟು ಡಬ್ಬಿಂಗ್ ವಿರೋಧಿಸುತ್ತಿರುವ ಕನ್ನಡ ಚಿತ್ರರಂಗದವರು ಸ್ವಾರ್ಥ ಸಾಧಿಸುತ್ತಿದ್ದಾರೆ ಎಂದು ತೆಗಳಿದ್ದಾರೆ. ಡಬ್ಬಿಂಗ್ ವಿರೋಧದ ಕಾರಣ ಮುಂದಿಟ್ಟುಕೊಂಡು ಠಾಕ್ರೆ ಅವರು ಕರ್ನಾಟಕದ ಧೋರಣೆಯನ್ನು ತೀಕ್ಷ್ಣವಾಗಿ ಟೀಕಿಸಿದ್ದಾರೆ.