Don't Miss!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳ ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉದಯ ಟಿವಿಯಲ್ಲಿ 'ಸೇವಂತಿ': ಕಿರುತೆರೆಯಲ್ಲಿ ಮತ್ತೆ ಭಾರತಿ ವಿಷ್ಣುವರ್ಧನ್
ಕನ್ನಡದ ಮನರಂಜನಾ ಕ್ಷೇತ್ರದಲ್ಲಿ ಇಪ್ಪತ್ತೈದು ಯಶಸ್ವಿ ವರ್ಷಗಳನ್ನು ಸದ್ಯದಲ್ಲಿಯೇ ಪೂರೈಸುತ್ತಿರುವ ಉದಯ ಟಿವಿ ವಿಭಿನ್ನ ಧಾರಾವಾಹಿಗಳಿಂದಲೇ ಮನೆಮಾತಾಗಿದೆ. ಒಂದಕ್ಕಿಂತ ಒಂದು ವಿಭಿನ್ನ ಕಥೆಗಳನ್ನು ಕನ್ನಡದ ವೀಕ್ಷಕರಿಗೆ ನೀಡಿದೆ. ಈ ಸಾಲಿನಲ್ಲಿ ಈಗ ಹೊಸ ಸೇರ್ಪಡೆ 'ಸೇವಂತಿ'.
ಕನ್ನಡದ ಮನರಂಜನಾ ವಾಹಿನಿಗಳ ವ್ಯಾಪ್ತಿ ದಿನದಿಂದ ದಿನಕ್ಕೆ ವಿಸ್ತಾರವಾಗುತ್ತಿದೆ. ಹೊಸ ತಂತ್ರಜ್ಞಾನ, ವಿನೂತನ ಕಥಾ ಹಂದರ, ನವಿರಾದ ನಿರೂಪಣೆ ಎಲ್ಲವನ್ನೂ ಒಳಗೊಂಡು ಕನ್ನಡದ ವೀಕ್ಷಕರಿಗೆ ಹೊಸ ಧಾರಾವಾಹಿಯನ್ನು ಉಣ ಬಡಿಸಲು ಸಿದ್ಧತೆ ನಡೆಸಿದೆ ಉದಯ ಟಿವಿ.
'ಸೇವಂತಿ' ಎಂಬ ಈ ಸುಂದರ ಧಾರಾವಾಹಿ ಫೆಬ್ರವರಿ 25 ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7.30ಕ್ಕೆ ಪ್ರಸಾರವಾಗಲಿದೆ. ವಿಶೇಷ ಅಂದ್ರೆ ಇದೇ ಧಾರಾವಾಹಿಯಲ್ಲಿ ಭಾರತಿ ವಿಷ್ಣುವರ್ಧನ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಮುಂದೆ ಓದಿರಿ...
'ಸೇವಂತಿ' ಕಥಾಹಂದರ
ಒಂದಾಗಬೇಕೆಂದುಕೊಂಡಾಗ ದೂರವಾಗುವ, ದೂರವಾಗಬೇಕೆಂದುಕೊಂಡಾಗ ಒಂದಾಗಲು ಬಯಸುವ ಹುಡುಗಿಯ ಕಥೆ ‘ಸೇವಂತಿ' - ಒಂದು ದೃಶ್ಯ ವೈಭವವಾಗಿ ವೀಕ್ಷಕರ ಮುಂದೆ ಬರಲಿದೆ.
ಸುವರ್ಣ ಧಾರಾವಾಹಿಯಲ್ಲಿ ಅನ್ನಪೂರ್ಣೆಯಾಗಿ ಭಾರತಿ
ಸೀರಿಯಲ್ ಹೀರೋ-ಹೀರೋಯಿನ್
ಚೆಂದುಳ್ಳಿ ಚೆಲುವೆ ನಟಿ ಪಲ್ಲವಿ ಗೌಡ 'ಸೇವಂತಿ' ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ. ಇವರ ಜೋಡಿಯಾಗಿ ಹ್ಯಾಂಡ್ಸಮ್ ಶಿಶಿರ್ ಅವರು ನಾಯಕ ಅರ್ಜುನ್ ಆಗಿ ವೀಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ.
ಅದ್ಧೂರಿ ಸೆಟ್ ನಲ್ಲಿ 'ಮಾನಸ ಸರೋವರ' ಚಿತ್ರೀಕರಣ: 250 ಸಂಚಿಕೆಗಳನ್ನು ಪೂರೈಸಿದ ಧಾರಾವಾಹಿ
ಮತ್ತೆ ಕಿರುತೆರೆ ಕಡೆಗೆ ಭಾರತಿ ವಿಷ್ಣುವರ್ಧನ್
ಈ ಹಿಂದೆ 'ಭಾಗ್ಯವಂತರು', 'ಜನನಿ' ಧಾರಾವಾಹಿಗಳಲ್ಲಿ ನಟಿಸಿದ್ದ ಭಾರತಿ ವಿಷ್ಣುವರ್ಧನ್ ಇದೀಗ ಬಹಳ ದಿನಗಳ ನಂತರ ಮತ್ತೆ ಕಿರುತೆರೆಗೆ ಆಗಮಿಸುತ್ತಿದ್ದಾರೆ. 'ಸೇವಂತಿ' ಸೀರಿಯಲ್ ನಲ್ಲಿ ನಟಿ ಭಾರತಿ ವಿಷ್ಣುವರ್ಧನ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.
ಕನ್ನಡ ಕಿರುತೆರೆಯಲ್ಲಿ ರಾಧಿಕಾ ಶರತ್ ಕುಮಾರ್: ಉದಯ ಟಿವಿಯಲ್ಲಿ ಹೊಸ ಸೀರಿಯಲ್ 'ಚಂದ್ರಕುಮಾರಿ'
ಡೈರೆಕ್ಟರ್ ಯಾರು.?
ಪ್ರಸಿದ್ಧ ನಿರ್ಮಾಣ ಸಂಸ್ಥೆ ಸರೆಗಮ ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದು, ವಿನೋದ್ ನಿರ್ದೇಶನ ಮಾಡುತ್ತಿದ್ದಾರೆ. ಮಂಜುನಾಥ್ ಭಟ್, ಹಂಸ, ಮೈಕೋ ಶಿವು, ಕೃಷ್ಣ ಅಡಿಗ, ಸಂಗೀತ, ಗಿರೀಶ್ 'ಸೇವಂತಿ' ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.