Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ ಬಾಸ್ ಸ್ಪರ್ಧಿ ಜುಬೈರ್ ವಿರುದ್ಧ ಬಿತ್ತು ಎಫ್ಐಆರ್ !
ಬಿಗ್ ಬಾಸ್ 11ರ ನಿರೂಪಕ ಸಲ್ಮಾನ್ ಖಾನ್ ಅವರು ರಾಷ್ಟ್ರೀಯ ವಾಹಿನಿಯಲ್ಲಿ ನನ್ನ ಮಾನ ಕಳೆದಿದ್ದಾರೆ. ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸಲ್ಮಾನ್ ವಿರುದ್ಧ ಸ್ಪರ್ಧಿ ಜುಬೈರ್ ಅವರು ದೂರು ನೀಡಿದ್ದಾರೆ ಎಂಬ ವರದಿ ಬಂದಿರುವ ಬೆನ್ನಲ್ಲೇ ಜುಬೈರ್ ವಿರುದ್ಧ ಎಫ್ಐಆರ್ ದಾಖಲಾಗಿರುವ ಸುದ್ದಿ ಬಂದಿದೆ.
ಬಿಗ್ ಬಾಸ್: ಎಲಿಮಿನೇಟ್ ಆಗಿದ್ದಕ್ಕೆ ಸಲ್ಮಾನ್ ವಿರುದ್ಧ ದೂರಿತ್ತ ಸ್ಪರ್ಧಿ
ಅಕ್ಟೋಬರ್ 01ರಿಂದ ಆರಂಭವಾದ ಬಿಗ್ ಬಾಸ್ 11ನೇ ಆವೃತ್ತಿಯಲ್ಲಿ 18 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆ ಪ್ರವೇಶಿಸಿದ್ದರು. 18 ಮಂದಿ ಪೈಕಿ 12 ಮಂದಿ ಜನ ಸಾಮಾನ್ಯರು ಹಾಗೂ 6 ಸೆಲೆಬ್ರಿಟಿಗಳು ಕಣಕ್ಕಿಳಿದಿದ್ದಾರೆ. ಈಗ ಅಧಿಕೃತವಾಗಿ ಮನೆಯ ಮೊದಲ ಎಲಿಮಿನೇಷನ್ ರೂಪದಲ್ಲಿ ಜುಬೈರ್ ಖಾನ್ ಬಿಗ್ ಬಾಸ್ ಮನೆಯಿಂದ ಅಲ್ಲಲ್ಲ ಆಸ್ಪತ್ರೆಯಿಂದ ತಮ್ಮ ಮನೆಗೆ ತೆರಳಿದ್ದಾರೆ.
ನಿಂದನೆ ತಾಳಲಾರದೆ ಮಾತ್ರೆ ನುಂಗಿದ್ನೆ ಜುಬೈರ್
ಸ್ಪರ್ಧಿಗಳಾದ ಶಿಲ್ಪಾ ಶಿಂಧೆ, ಅರ್ಶಿ ಖಾನ್, ಜ್ಯೋತಿ ಕುಮಾರ್, ಬಂದ್ಗಿ ಕರ್ಲಾ ಮತ್ತು ಜುಬೈರ್ ಖಾನ್ ಪೈಕಿ ಯಾರು ಮನೆಯಿಂದ ಹೊರಕ್ಕೆ ಹೋಗುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಶಿಲ್ಪಾ ಶಿಂಧೆ ಎಲಿಮಿನೇಟ್ ಆಗುತ್ತಾಳೆ ಎಂಬ ನಿರೀಕ್ಷೆ ಎಲ್ಲರಲ್ಲೂ ಇತ್ತು.
ಆದರೆ, ವಾರಾಂತ್ಯಕ್ಕೂ ಮೊದಲೇ ಜುಬೈರ್ ಎಲಿಮಿನೇಟ್ ಆಗಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿತು. ನಂತರದ ಬೆಳವಣಿಗೆಯಲ್ಲಿ ಜುಬೈರ್ ಅವರು ಸಲ್ಮಾನ್ ವಿರುದ್ಧ ದೂರು ದಾಖಲಿಸಿದರು. ಆದರೆ, ಜುಬೈರ್ ವಿರುದ್ದ ಕೂಡಾ ದೂರು ದಾಖಲಾಗಿದೆಯಂತೆ.. ವಿವರ ಮುಂದಿದೆ..
ಜುಬೈರ್ ಆಸ್ಪತ್ರೆಯಿಂದ ತನ್ನ ಮನೆಗೆ
ಬಿಗ್ ಬಾಸ್ 11ರ'ಡೌವ್ ರಾಜ' ಜುಬೈರ್ ನಿದ್ದೆ ಮಾತ್ರೆ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ, ನಂತರ ಮತ್ತೆ ಮನೆಗೆ ಬರುತ್ತಾನೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಕಡಿಮೆ ವೋಟ್ಸ್ ಮತ್ತು ಕಳಪೆ ವರ್ತನೆ ಹೊಂದಿರುವ ಕಾರಣಕ್ಕೆ ಜುಬೈರ್ ಮತ್ತೆ ಮನೆಗೆ ಪ್ರವೇಶಿಸುವಂತಿಲ್ಲ ಎಂದು ಸಲ್ಮಾನ್ ಸ್ಪಷ್ಟಪಡಿಸಿದರು. ಜುಬೈರ್ ಜತೆಗೆ ಪ್ರಿಯಾಂಕ್ ಶರ್ಮಾ ಕೂಡಾ ಎಲಿಮಿನೇಟ್ ಆಗಿದ್ದಾರೆ.
ಜುಬೈರ್ ನೀಡಿದ ದೂರು
ನಿರೂಪಕ ಸಲ್ಮಾನ್ ಖಾನ್ ಅವರು ರಾಷ್ಟ್ರೀಯ ವಾಹಿನಿಯಲ್ಲಿ ನನ್ನ ಮಾನ ಕಳೆದಿದ್ದಾರೆ. ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸಲ್ಮಾನ್ ವಿರುದ್ಧ ಜುಬೈರ್ ಅವರು ದೂರು ನೀಡಿದ್ದಾರೆ. ಆದರೆ, ಪೊಲೀಸರು ಎಫ್ ಐಆರ್ ದಾಖಲಿಸಲಿ ನಿರಾಕರಿಸಿದ್ದು, ಸರಿಯಾದ ಸಾಕ್ಷಿ ಇಲ್ಲ ಎಂದಿದ್ದಾರೆ.
ಸಲ್ಮಾನ್ ವಿರುದ್ಧದ ದೂರಿನ ಪ್ರತಿ
ನಂತರ ಎನ್ ಜಿಒವೊಂದರ ನೆರವು ಪಡೆದುಕೊಂಡು ಮತ್ತೊಮ್ಮೆ ಸಲ್ಮಾನ್ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಜುಬೈರ್ ಹೇಳಿಕೊಂಡಿದ್ದಾರೆ. Image Source: Twitter
ಜುಬೈರ್ ವಿರುದ್ಧವೂ ದೂರು
ಡಾನ್ ದಾವೂದ್ ಇಬ್ರಾಹಿಂ ಸೋದರಿಯ ಮಗಳ ಅಳಿಯ ಎಂದು ಕೊಚ್ಚಿಕೊಂಡಿದ್ದ ಜುಬೈರ್ ವಿರುದ್ಧ ವಿರುದ್ಧ ಅಕ್ಟೋಬರ್ 07ರ ಎಪಿಸೋಡಿನಲ್ಲಿ ನಿರೂಪಕ ಸಲ್ಮಾನ್ ಭಾರಿ ಜೋರಾಗಿ ಅವಾಜ್ ಹಾಕಿದ್ದರು. ಇದರಿಂದ ಬೇಸತ್ತು ಸಲ್ಮಾನ್ ವಿರುದ್ಧ ಜುಬೈರ್ ದೂರು ನೀಡಿದ್ದರು. ಆದರೆ, ದಾವೂದ್ ಅವರ ಕುಟುಂಬಸ್ಥರಲ್ಲಿ ಒಬ್ಬರಾದ ನಿರ್ಮಾಪಕ (ಹಸೀನಾ ಪಾರ್ಕರ್ ಚಿತ್ರ) ಸಮೀರ್ ಅಂತುಳೆ ಅವರು ಜುಬೈರ್ ವಿರುದ್ಧ ದೂರು ದಾಖಲಿಸಿದ್ದು ಎಫ್ ಐಆರ್ ಹಾಕಿರುವ ಸುದ್ದಿ ಬಂದಿದೆ.
ಬಿಗ್ ಬಾಸ್ ಸ್ಕ್ರಿಪ್ಟೆಡ್
ಬಿಗ್ ಬಾಸ್ 11ರಲ್ಲಿ ಎಲ್ಲವೂ ಪೂರ್ವ ನಿಯೋಜಿತವಾಗಿರುತ್ತದೆ. ಸಲ್ಮಾನ್ ಅವರು ಬಾಡಿಗಾರ್ಡ್ ಗಳಿಲ್ಲದೆ ನನ್ನನ್ನು ಭೇಟಿ ಮಾಡಲಿ ಎಂದು ಜುಬೈರ್ ಅವರು ಮಾಧ್ಯಮವೊಂದರ ಜತೆ ಮಾತನಾಡುತ್ತಾ ಹೇಳಿದ್ದಾರೆ.