Don't Miss!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ ಬಾಸ್ ಸ್ಪರ್ಧಿಯ ಕಾರು ಅಪಘಾತ; ರಸ್ತೆ ಪಕ್ಕದ ಪ್ರಪಾತಕ್ಕೆ ಉರುಳಿ ಬಿದ್ದ ನಿಶಾಂತ್
ಕಿರುತೆರೆ ನಟ ಮತ್ತು ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಸಿಂಗ್ ಮಲ್ಖಾನಿ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ನಿಶಾಂತ್ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರನ್ನು ನಟ ನಿಶಾಂತ್ ಚಲಾಯಿಸುತ್ತಿದ್ದು, ಎದುರುಗಡೆಯಿಂದ ರಾಂಗ್ ಸೈಡ್ ನಲ್ಲಿ ಬಂದ ವಾಹನವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ರಸ್ತೆಯ ಪಕ್ಕದ ಪ್ರಪಾತಕ್ಕೆ ಬಿದ್ದ ಕಾರನ್ನು ಕ್ರೇನ್ ಬಳಸಿ ಮೇಲೆತ್ತಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಕಾರಿನಲ್ಲಿ ನಿಶಾಂತ್ ಮತ್ತು ಸ್ನೇಹಿತರು ರಾಜಸ್ಥಾನಕ್ಕೆ ತೆರಳುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿರುವ ನಿಶಾಂತ, ಯಾರು ಭಯಪಡುವ ಅವಶ್ಯಕತೆ ಇಲ್ಲ. ಸಣ್ಣ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತಾಯಿಯ ಆಶೀರ್ವಾದ ಮತ್ತು ದೇವರ ದಯೆಯಿಂದ ಏನು ಆಗಿಲ್ಲ ಎಂದಿದ್ದಾರೆ.
ಬಿಗ್ಬಾಸ್ ಸ್ಪರ್ಧಿಗೆ ಖುಲಾಯಿಸಿದ ಅದೃಷ್ಟ: 'ಕನಸು-ನನಸಾಯಿತು' ಎಂದ ದಿವಿ
ಕಾರು ನಾನೆ ಚಲಾಯಿಸುತ್ತಿದ್ದೆ. ಎದುರು ರಾಂಗ್ ಸೈಡ್ ನಿಂದ ವ್ಯಾನ್ ಬರ್ತಿರೊದನ್ನು ನೋಡಿ ಸೈಡ್ ತೆಗೆದುಕೊಳ್ಳಲು ಹೋಗಿ ಕೆಳಗೆ ಉರುಳಿದೆವು. ರಸ್ತೆ ತುಂಬಾ ಕಿರಿದಾಗಿತ್ತು. ನನ್ನ ಜೊತೆ ಇದ್ದ ಸ್ನೇಹಿತರು ಸುರಕ್ಷಿತರಾಗಿದ್ದಾರೆ. ಆದರೆ ನಮ್ಮ ಕಾರಿಗೆ ಹೊಡೆದ ಗಾಡಿ ತಕ್ಷಣ ಎಸ್ಕೇಪ್ ಆಗಿದೆ. ಕಾರಿನನಿಂದ ಹೊರಬಂದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದೆವು' ಎಂದು ನಿಶಾಂತ್ ಅಪಘಾತದ ಬಗ್ಗೆ ವಿವರಿಸಿದ್ದಾರೆ.
ನಿಶಾಂತ್ ಕಳೆದ ವರ್ಷ ಹಿಂದಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮನೆಯಿಂದ ಬೇಗ ಔಟ್ ಆಗಿ ಭಾರಿ ಬೇಸರ ಮಾಡಿಕೊಂಡಿದ್ದರು. ಬಿಗ್ ಮನೆಯಿಂದ ಹೊರಬಂದ ಬಳಿಕ ಬಿಗ್ ಬಾಸ್ ಸಹ ಸ್ಪರ್ಧಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಅಪಘಾತದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.