Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್ ಕನ್ನಡ-4' ಆಟದಿಂದ ಹೊರಬಿದ್ದ ನಿರ್ದೇಶಕ ಓಂ ಪ್ರಕಾಶ್ ರಾವ್
'ಬಿಗ್ ಬಾಸ್ ಕನ್ನಡ-4' ಆಟದಿಂದ ನಿರ್ದೇಶಕ ಓಂ ಪ್ರಕಾಶ್ ರಾವ್ ಹೊರಬಿದ್ದಿದ್ದಾರೆ. ಅನಾರೋಗ್ಯದ ಸಮಸ್ಯೆಯಿಂದ ಎರಡು ದಿನಗಳ ಹಿಂದೆ 'ಬಿಗ್ ಬಾಸ್' ಮನೆಯಿಂದ ಹೊರ ಬಂದಿದ್ದ ನಿರ್ದೇಶಕ ಓಂ ಪ್ರಕಾಶ್ ರಾವ್ ರವರನ್ನ ಎಲಿಮಿನೇಟ್ ಮಾಡಲಾಗಿದೆ.
'ಬಿಗ್ ಬಾಸ್' ಮನೆಯಿಂದ ಏಳನೇ ವಾರ ನಟಿ ಸಂಜನಾ ನಿರ್ಗಮಿಸುತ್ತಾರೆ ಎಂಬ ಗಾಸಿಪ್ ನಿನ್ನೆ ಎಲ್ಲಾ ಕಡೆ ಹಬ್ಬಿತ್ತು. ಆದ್ರೆ, ಕಡೆಗೆ ಓಂ ಪ್ರಕಾಶ್ ರಾವ್ ರವರನ್ನ ಔಟ್ ಮಾಡಲಾಗಿದೆ ಅಂತ ಕಿಚ್ಚ ಸುದೀಪ್ ಘೋಷಿಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಓಂ ಪ್ರಕಾಶ್ ರಾವ್
ವಿಪರೀತ ಕಾಲು ನೋವು ಕಾಣಿಸಿಕೊಂಡ ಪರಿಣಾಮ, ನಿರ್ದೇಶಕ ಓಂ ಪ್ರಕಾಶ್ ರಾವ್ ರವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಓಂ ಪ್ರಕಾಶ್ ರಾವ್ ಚಿಕಿತ್ಸೆ ಪಡೆಯುತ್ತಿದ್ದಾರೆ. ['ಬಿಗ್ ಬಾಸ್' ಮನೆಗೆ 'ಕರೆಂಟ್' ಬಂದ ಹಾಗೆ ಬಂದ ಓಂ ಪ್ರಕಾಶ್ ರಾವ್.!]
ಏಳು ಮಂದಿ ನಾಮಿನೇಟ್ ಆಗಿದ್ದರು.!
ಈ ವಾರ 'ಬಿಗ್ ಬಾಸ್' ಮನೆಯಿಂದ ಹೊರ ಹೋಗಲು ಏಳು ಮಂದಿ ನಾಮಿನೇಟ್ ಆಗಿದ್ದರು. [ಓಂ ಪ್ರಕಾಶ್ ರಾವ್ ಮುಂಗೋಪಿ: ತಲೆ ಕೆಟ್ಟರೆ, ಒದೆ ಗ್ಯಾರೆಂಟಿ.!]
ಯಾರ್ಯಾರು.?
ಪ್ರಥಮ್, ಸಂಜನಾ, ನಿರಂಜನ್ ದೇಶಪಾಂಡೆ, ಮಾಳವಿಕಾ, ರೇಖಾ, ಮೋಹನ್ ಮತ್ತು ಓಂ ಪ್ರಕಾಶ್ ರಾವ್ ಈ ವಾರ ನಾಮಿನೇಟ್ ಆಗಿದ್ದರು. ['ಬಿಗ್ ಬಾಸ್ ಕನ್ನಡ-4': ಈ ವಾರ ಯಾರು ಔಟ್ ಆಗ್ಬೇಕು.?]
ಕಡಿಮೆ ಎಸ್.ಎಂ.ಎಸ್ ಪಡೆದಿದ್ದ ಓಂ ಪ್ರಕಾಶ್ ರಾವ್
ವೀಕ್ಷಕರಿಂದ ಕಡಿಮೆ ಎಸ್.ಎಂ.ಎಸ್ ಪಡೆದಿದ್ದರಿಂದ ಓಂ ಪ್ರಕಾಶ್ ರಾವ್ ರವರಿಗೆ ಗೇಟ್ ಪಾಸ್ ಸಿಕ್ಕಿದೆ.
'ಕಿರಿಕ್' ಕೀರ್ತಿ ಕಾರಣ.!
'ಕಿರಿಕ್' ಕೀರ್ತಿ ಮತ್ತು ಸಂಜನಾ ಜೋಡಿ ಮಾತ್ರ ಈ ವಾರ ನಿರ್ದೇಶಕ ಓಂ ಪ್ರಕಾಶ್ ರಾವ್ ರವರನ್ನ ನಾಮಿನೇಟ್ ಮಾಡಿದ್ದರು. ಒಂದು ವೋಟ್ ನಿಂದ ಡೇಂಜರ್ ಝೋನ್ ಗೆ ಬಂದಿದ್ದ ಓಂ ಪ್ರಕಾಶ್ ರಾವ್ 'ಬಿಗ್ ಬಾಸ್' ಮನೆಯಿಂದ ನಿರ್ಗಮಿಸುವಂತಾಯ್ತು.
ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಪ್ರವೇಶ
'ಬಿಗ್ ಬಾಸ್ ಕನ್ನಡ-4' ಕಾರ್ಯಕ್ರಮ ಶುರು ಆದ ಒಂದು ವಾರ ಬಳಿಕ ನಿರ್ದೇಶಕ ಓಂ ಪ್ರಕಾಶ್ ರಾವ್ 'ಬಿಗ್ ಬಾಸ್' ಮನೆ ಪ್ರವೇಶಿಸಿದರು. ಯಾವುದೇ ವಿವಾದ, ಜಗಳಗಳಿಗೆ ನಾಂದಿ ಹಾಡದೆ ತಮ್ಮ ಪಾಡಿಗೆ ತಾವು ಇದ್ದರು ನಿರ್ದೇಶಕ ಓಂ ಪ್ರಕಾಶ್ ರಾವ್