Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಪ್ರಕರಣ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ವರ್ಣಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ ಎಂದು ತಿಳಿಯದ ಜಗನ್.!
Recommended Video
ಕರ್ನಾಟಕದಲ್ಲಿ ಹುಟ್ಟಿ ಬೆಳೆದು... ಕನ್ನಡದ 'ಕಲರ್ಸ್ ಕನ್ನಡ' ವಾಹಿನಿಯ 'ಗಾಂಧಾರಿ' ಧಾರಾವಾಹಿ ಮೂಲಕ ಖ್ಯಾತಿ ಪಡೆದ ಕನ್ನಡಿಗ ಜಗನ್ನಾಥ್ ಚಂದ್ರಶೇಖರ್ ಅವರಿಗೆ ಕನ್ನಡ ವರ್ಣಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ ಅನ್ನೋದೇ ಗೊತ್ತಿಲ್ಲ.!
ಹೌದು, 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಆರನೇ ವಾರ ಕ್ಯಾಪ್ಟನ್ ಟಾಸ್ಕ್ ಅನುಸಾರವಾಗಿ ಸ್ಪರ್ಧಿಗಳ ಸಾಮಾನ್ಯ ಜ್ಞಾನವನ್ನ 'ಬಿಗ್ ಬಾಸ್' ಪರೀಕ್ಷಿಸಿದರು.
ಗಣರಾಜ್ಯ ಅಂದ್ರೇನು, 'ಬಾಹುಬಲಿ' ಅಂದ್ರೆ ಯಾರು ಅನ್ನೋದೇ ಆಶಿತಾಗೆ ಗೊತ್ತಿಲ್ಲ.!
ಅದರಂತೆ, ''ಕನ್ನಡ ವರ್ಣಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ'' ಎಂಬ ಪ್ರಶ್ನೆಯನ್ನ 'ಬಿಗ್ ಬಾಸ್' ಜಗನ್ ಗೆ ಕೇಳಿದರು. ಪ್ರಶ್ನೆ ಕೇಳಿದ ಕೂಡಲೆ ಉತ್ತರ ಗೊತ್ತಾಗದೆ ''ಯಾಕೆ ಉಗಿಸುತ್ತೀರಾ ಜನರ ಕೈಯಲ್ಲಿ ನನ್ನನ್ನ.?'' ಎನ್ನುತ್ತಾ ''32'' ಎಂದು ತಪ್ಪು ಉತ್ತರ ಕೊಟ್ಟರು ಜಗನ್.
ಜಗನ್, ಆಶಿತಾ ಕಂಡ್ರೆ ಉರಿದು ಬೀಳ್ತಿದ್ದಾರೆ 'ಬಿಗ್ ಬಾಸ್' ವೀಕ್ಷಕರು.!
ಹಾಗೇ, ''ಮಿಸ್ ಯೂನಿವರ್ಸ್ ಪಟ್ಟವನ್ನು ಮೊದಲು ಮುಡಿಗೇರಿಸಿಕೊಂಡ ಮೊದಲ ಭಾರತೀಯ ಮಹಿಳೆ ಯಾರು.?'' ಎಂಬ ಪ್ರಶ್ನೆಗೂ ''ಐಶ್ವರ್ಯ ರೈ'' ಎಂದು ತಪ್ಪು ಉತ್ತರ ನೀಡಿ ಕ್ಯಾಪ್ಟನ್ ರೇಸ್ ನಿಂದ ಹೊರಬಿದ್ದರು ಜಗನ್ನಾಥ್ ಚಂದ್ರಶೇಖರ್.