Don't Miss!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಮೀರಾಚಾರ್ಯಗೆ ಸೀರಿಯಸ್ನೆಸ್ ಇಲ್ಲ ಎಂದ 'ಗಾಂಧಾರಿ' ಜಗನ್.!
Recommended Video
'ದೊಡ್ಮನೆ'ಯೊಳಗೆ ತಮ್ಮ ಆಚಾರ-ವಿಚಾರಗಳ ಜೊತೆಗೆ 'ಬಿಗ್ ಬಾಸ್' ನೀಡುತ್ತಿರುವ ಟಾಸ್ಕ್ ಗಳನ್ನ ತಮ್ಮ ಕೈಲಾದಷ್ಟು ಮಾಡುತ್ತಿರುವ ಸಮೀರಾಚಾರ್ಯ ರವರಿಗೆ ಸೀರಿಯಸ್ನೆಸ್ ಇಲ್ಲವಂತೆ.!
ಹಾಗಂತ ಹೇಳಿದವರು 'ಗಾಂಧಾರಿ' ಧಾರಾವಾಹಿ ಖ್ಯಾತಿಯ ಜಗನ್ನಾಥ್.!
ಯಾರು ಏನೇ ಹೇಳಿದರೂ, ಜನರ ಬೆಂಬಲ ಮಾತ್ರ ಜನಸಾಮಾನ್ಯರಿಗೆ.!
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಎರಡನೇ ವಾರ 'ಮೊಟ್ಟೆ'ಯನ್ನು ಕಾಪಾಡಿಕೊಳ್ಳುವ ಟಾಸ್ಕ್ ನೀಡಲಾಗಿದೆ. ಇದೇ ಟಾಸ್ಕ್ ವಿಚಾರವಾಗಿ ಮನೆಯೊಳಗೆ ಗದ್ದಲ-ಗಲಾಟೆ ಕೂಡ ನಡೆದಿದೆ.
ಈ ಎಲ್ಲದರ ನಡುವೆ ಟಾಸ್ಕ್ ನಲ್ಲಿ ಸಮೀರಾಚಾರ್ಯ ರವರಿಗೆ ಸೀರಿಯಸ್ನೆಸ್ ಇಲ್ಲ ಅಂತ ಜಗನ್ನಾಥ್ ಹೇಳಿದ್ದಾರೆ. ಸಮೀರಾಚಾರ್ಯ ಜೊತೆಗೆ ಮಾತನಾಡುತ್ತಿರುವಾಗಲೇ, ''ಟಾಸ್ಕ್ ನ ಎಲ್ಲರೂ ಸೀರಿಯಸ್ ಆಗಿ ತೆಗೆದುಕೊಳ್ಳಬೇಕು. ನಿಮಗೆ ಸೀರಿಯಸ್ ನೆಸ್ ಇಲ್ಲ. ಟಾಸ್ಕ್ ನಡೆಯುವಾಗ ನಮಗೂ ಹೊಟ್ಟೆ ಹಸಿವು ಇತ್ತು. ಆದ್ರೂ, ನಾವು ಹೋಗಿ ಊಟ ಮಾಡಿಲ್ಲ'' ಎಂದು ಜಗನ್ನಾಥ್ ಹೇಳಿದರು.
'ಬಿಗ್ ಬಾಸ್' ಸ್ಪರ್ಧಿ ಸಮೀರಾಚಾರ್ಯ ಅವರ ಬಗ್ಗೆ ನಿಮಗೆಷ್ಟು ತಿಳಿದಿದೆ?
''ಇಡೀ 'ಬಿಗ್ ಬಾಸ್' ಗೇಮ್ ನ ನೀವು ಸೀರಿಯಸ್ ಆಗಿ ತೆಗೆದುಕೊಳ್ಳಬೇಕು. ನನಗೂ ನನ್ನ ಆಚಾರ ಇದೆ. ಸ್ನಾನ ಮಾಡುವವರೆಗೂ ನಾನು ತಿಂಡಿ ತಿನ್ನಲ್ಲ. ಆದ್ರೆ, ಇಲ್ಲಿ ಅದೆಲ್ಲ ಮಾಡಲು ಆಗಲ್ಲ, ಬಿಡಲೇಬೇಕು. ಹಾಗಂತ ದೇವರು ನಮ್ಮ ಮೇಲೆ ಮುನಿಸಿಕೊಳ್ಳುವುದಿಲ್ಲ'' ಎಂದು ಸಮೀರಾಚಾರ್ಯ ರವರಿಗೆ ಜಗನ್ನಾಥ್ ಕಿವಿಮಾತು ಹೇಳಿದ್ದಾರೆ.