Don't Miss!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್' ಮನೆಯಲ್ಲಿ ಆದ ಎಡವಟ್ಟಿಗೆ ಕ್ಷಮೆ ಕೇಳಿದ ಸಿಹಿ ಕಹಿ ಚಂದ್ರು
Recommended Video
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಸಿಹಿ ಕಹಿ ಚಂದ್ರು ಕ್ಷಮೆ ಕೇಳಿದ್ದಾರೆ. ತಮ್ಮಿಂದ ಆದ ಎಡವಟ್ಟಿಗೆ ಸಿಹಿ ಕಹಿ ಚಂದ್ರು ತಲೆ ಬಾಗಿದ್ದಾರೆ.
ಅಷ್ಟಕ್ಕೂ, ಆಗಿದ್ದೇನು ಅಂದ್ರೆ ಕಳೆದ ವಾರ ಪ್ರಸಾರ ಆದ 'ಬಿಗ್ ಬಾಸ್' ಸಂಚಿಕೆಯಲ್ಲಿ 'ಸೇಲ್ಸ್ ಮ್ಯಾನ್' ದಿವಾಕರ್ ಗೆ 'ವಡ್ಡ' ಎಂದುಬಿಟ್ಟಿದ್ದರು ಸಿಹಿ ಕಹಿ ಚಂದ್ರು.
ಸಿಹಿ ಕಹಿ ಚಂದ್ರು 'ವಡ್ಡ' ಎಂದು ಬಳಸಿದಕ್ಕೆ 'ಅಖಿಲ ಕರ್ನಾಟಕ (ಭೋವಿ) ವಡ್ಡರ ಯುವ ವೇದಿಕೆ' ಕಾರ್ಯಕರ್ತರು ಕುಪಿತಗೊಂಡಿದ್ದರು. ಜೊತೆಗೆ 'ಬಿಗ್ ಬಾಸ್' ಕಾರ್ಯಕ್ರಮ ನಡೆಯುತ್ತಿರುವ 'ಇನ್ನೋವೇಟಿವ್ ಫಿಲ್ಮ್ ಸಿಟಿ' ಎದುರು ಪ್ರತಿಭಟನೆ ನಡೆಸಿದ್ದರು.
'ಬಿಗ್ ಬಾಸ್- 5' ಸ್ಫರ್ಧಿ ಸಿಹಿ ಕಹಿ ಚಂದ್ರು ವಿರುದ್ದ ಪ್ರತಿಭಟನೆ
ಪ್ರತಿಭಟನೆಯ ಗಂಭೀರತೆ ಅರಿತ 'ಬಿಗ್ ಬಾಸ್' ಆಯೋಜಕರು, 'ದೊಡ್ಮನೆ'ಯೊಳಗಿದ್ದ ಸಿಹಿ ಕಹಿ ಚಂದ್ರುಗೆ ಘಟನೆಯನ್ನ ವಿವರಿಸಿದರು. ಬಳಿಕ ಸಿಹಿ ಕಹಿ ಚಂದ್ರು ಕ್ಷಮೆ ಕೇಳಿದರು.
''ಕಳೆದ ವಾರ ನಾನು ಉದ್ದೇಶ ಇಲ್ಲದೆ ಆಡಿದ ಮಾತು ಒಂದು ಜನಾಂಗಕ್ಕೆ ನೋವುಂಟು ಮಾಡಿದೆ ಅಂತ ತಿಳಿಯಿತು. ಅದರಿಂದ ನನಗೂ ನೋವಾಗಿದೆ. ಹಂಗಿಸುವ ಉದ್ದೇಶದಿಂದ ನಾನು ಆ ಮಾತನ್ನು ಹೇಳಲಿಲ್ಲ. ಆ ಪದ ಬಳಸಿದ್ದು ನನ್ನ ತಪ್ಪು. ಹೀಗಾಗಿ ನಾನು ಕ್ಷಮೆ ಕೇಳುತ್ತೇನೆ'' ಎಂದು ಕೈಮುಗಿದು ಕೇಳಿಕೊಂಡರು ಸಿಹಿ ಕಹಿ ಚಂದ್ರು.