Don't Miss!
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್' ಮನೆಯಿಂದ ಹೊರಬಂದ ಚಂದ್ರು ಬಗ್ಗೆ ಪ್ರಥಮ್ ಹೇಳಿದ್ದೇನು.?
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಿಂದ ಸಿಹಿ ಕಹಿ ಚಂದ್ರು ಔಟ್ ಆಗಿದ್ದಾರೆ. ಸಿಹಿ ಕಹಿ ಚಂದ್ರು ಎಲಿಮಿನೇಟ್ ಆಗಿರುವುದು ಯಾರಿಗೆ ಬೇಸರ ಆಗಿದ್ಯೋ, ಇಲ್ವೋ... ಆದ್ರೆ, 'ಬಿಗ್ ಬಾಸ್ ಕನ್ನಡ-4' ವಿಜೇತ 'ಒಳ್ಳೆ ಹುಡುಗ' ಪ್ರಥಮ್ ಗೆ ಮಾತ್ರ ಸಿಕ್ಕಾಪಟ್ಟೆ ಬೇಜಾರು ಆಗಿದೆ.
''ಇವತ್ತು ನಮ್ಮ ಚಿತ್ರರಂಗವನ್ನ ಆಳುತ್ತ ಇರುವ ಎಷ್ಟೋ ಸ್ಟಾರ್ ಗಳು ನಿಮ್ಮ ಗರಡಿಯಲ್ಲಿ ಬೆಳೆದಿದ್ದು ಅಂತ ಗೊತ್ತಿದ್ರೂ, ಯಾವತ್ತೂ ಎಲ್ಲಿಯೂ ಹೇಳಿಕೊಂಡಿಲ್ಲ ನೀವು... ಇದೊಂದು ಕಾರಣಕ್ಕೆ ನನಗೆ ಬಹಳ ನೋವಿದೆ ನಿಮ್ಮ ಎಲಿಮಿನೇಷನ್. ಫೋಟೋಗೆ ಪೋಸ್ ಕೊಡಬೇಕಾದರೆ, ನಗುತಾ ಇರಬಹುದು ನಾನು. ವೈಯುಕ್ತಿಕವಾಗಿ ನೋವಿದೆ. ನಿಮ್ಮ ಮೇಲೆ ಹೆಮ್ಮೆ ಇದೆ ಸರ್'' ಎಂದು ಸಿಹಿ ಕಹಿ ಚಂದ್ರು ಬಗ್ಗೆ ತಮ್ಮ ಫೇಸ್ ಬುಕ್ ಪುಟದಲ್ಲಿ ಪ್ರಥಮ್ ಬರೆದುಕೊಂಡಿದ್ದಾರೆ.
'ಬಿಗ್' ಶಾಕ್: 'ಬಿಗ್ ಬಾಸ್' ಮನೆಯಿಂದ ಸಿಹಿ ಕಹಿ ಚಂದ್ರು ಔಟ್.!
ಜೊತೆಗೆ ಸಿಹಿ ಕಹಿ ಚಂದ್ರು ಜೊತೆಗೆ ಕ್ಲಿಕ್ ಮಾಡಿಕೊಂಡ ಸೆಲ್ಫಿಯನ್ನೂ ಪೋಸ್ಟ್ ಮಾಡಿದ್ದಾರೆ.
ಇಬ್ಬರು ಘಟಾನುಘಟಿಗಳು ಹೊರಬಿದ್ದಾಯ್ತು.! ಮುಂದಿನ ಟಾರ್ಗೆಟ್ ಯಾರು.?
ಅಂದ್ಹಾಗೆ, 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದ ಐವತ್ತನೇ ದಿನ ಸಂಭ್ರಮಾಚರಣೆಯಲ್ಲಿ ಪ್ರಥಮ್ ಕೂಡ ಪಾಲ್ಗೊಂಡಿದ್ದಾರೆ. ಪ್ರಥಮ್ ಜೊತೆಗೆ 'ಬಿಗ್ ಬಾಸ್ ಕನ್ನಡ-2' ವಿನ್ನರ್ ಅಕುಲ್ ಬಾಲಾಜಿ, 'ಬಿಗ್ ಬಾಸ್ ಕನ್ನಡ-3' ವಿನ್ನರ್ ಶ್ರುತಿ ಕೂಡ ಭಾಗವಹಿಸಿದ್ದಾರೆ. ಅದರ ಸಂಚಿಕೆ ಇಂದು ರಾತ್ರಿ ಪ್ರಸಾರ ಆಗಲಿದೆ.