Don't Miss!
- News Women voters: ರಾಜ್ಯದ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳೆಯರದ್ದೇ ಪಾರುಪತ್ಯ!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರೆದು ಇಟ್ಕೊಂಡ್ರೂ, ಜಯಶ್ರೀನಿವಾಸನ್ ಹೇಳಿದ್ದು ಸುಳ್ಳಾಯ್ತು.!
Recommended Video
''ಬರೆದು ಇಟ್ಕೋ, ಇವತ್ತು ಲಕ್ಕಿ ಡೇಟ್... ನಾನು ಮತ್ತು ನಿವೇದಿತಾ ಈ ಮನೆಯಲ್ಲಿ ಹಂಡ್ರೆಡ್ ಡೇಸ್ ಇರುವುದು ಗ್ಯಾರೆಂಟಿ'' ಎಂದು ದಿವಾಕರ್ ಮುಂದೆ ಸಂಖ್ಯಾಶಾಸ್ತ್ರಜ್ಞ ಜಯಶ್ರೀನಿವಾಸನ್ ಕಡ್ಡಿ ತುಂಡು ಮಾಡಿದ ಹಾಗೆ ಹೇಳಿದ್ದರು.
ಆದ್ರೆ, ಅಂದು ಜಯಶ್ರೀನಿವಾಸನ್ ನುಡಿದ ಭವಿಷ್ಯ ಸುಳ್ಳಾಗಿದೆ. 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಿಂದ ಹನ್ನೊಂದನೇ ವಾರಕ್ಕೆ ಸಂಖ್ಯಾಶಾಸ್ತ್ರಜ್ಞ ಜಯಶ್ರೀನಿವಾಸನ್ ಔಟ್ ಆಗಿದ್ದಾರೆ.
ಹಾಗ್ನೋಡಿದ್ರೆ, ಜಯಶ್ರೀನಿವಾಸನ್ ಆಡಿರುವ ಮಾತಿನಲ್ಲಿ ಸದ್ಯ ಅರ್ಧ ಮಾತ್ರ ಸುಳ್ಳಾಗಿದೆ. ನಿವೇದಿತಾ ಇನ್ನೂ 'ಬಿಗ್ ಬಾಸ್' ಮನೆಯೊಳಗೇ ಇದ್ದಾರೆ. ಟಾಪ್ 5 ಹಂತಕ್ಕೆ ನಿವೇದಿತಾ ಗೌಡ ತಲುಪಿದರೂ ಅಚ್ಚರಿ ಪಡಬೇಕಿಲ್ಲ. ಮುಂದೆ ಓದಿರಿ...
ದಿವಾಕರ್ ಕೂಡ ಭವಿಷ್ಯ ನುಡಿದಿದ್ದರು.!
ನಿಜ ಹೇಳ್ಬೇಕಂದ್ರೆ, ''ನಾನು ಮತ್ತು ನಿವೇದಿತಾ ಈ ಮನೆಯಲ್ಲಿ ಹಂಡ್ರೆಡ್ ಡೇಸ್ ಇರುವುದು ಗ್ಯಾರೆಂಟಿ'' ಅಂತ ಜಯಶ್ರೀನಿವಾಸನ್ ಯಾವತ್ತು ಹೇಳಿದ್ದರೋ, ಅವತ್ತೇ ''ನೀವು ನೂರು ದಿನ ಇರಲ್ಲ'' ಎಂದು ದಿವಾಕರ್ ನುಡಿದಿದ್ದರು.
ಬರೆದು ಇಟ್ಕೊಳ್ಳಿ.. 'ಬಿಗ್ ಬಾಸ್'ನಲ್ಲಿ ಜಯಶ್ರೀನಿವಾಸನ್, ನಿವೇದಿತಾ 100 ದಿನ ಇರೋದು ಪಕ್ಕಾ.!
ಅಂದು ದಿವಾಕರ್ ಹೇಳಿದ್ದೇನು.?
''ದೇವ್ರಾಣೆ ನೀವು ಹಂಡ್ರೆಡ್ ಡೇಸ್ ಇರಲ್ಲ. ನೀವೇ ಗೆಲ್ಲುವ ಹಾಗಿದ್ದರೆ, ಕಷ್ಟ ಪಟ್ಟಿರುವವರು ಎಷ್ಟು ಜನ ಇದ್ದಾರೆ ಈ ಮನೆಯಲ್ಲಿ... ಅವರ ಕಥೆ ಏನಾಗಬೇಕು.? ಸುಖವಾಗಿ ಬಂದವರೆಲ್ಲ ಗೆಲ್ಲಲು ಆಗಲ್ಲ. ಇದು ನನ್ನ ಅನಿಸಿಕೆ'' ಎಂದು ದಿವಾಕರ್ ಅಂದು ಹೇಳಿದ್ದರು.
ಅಚ್ಚರಿ ಬೆಳವಣಿಗೆ: ದಿವಾಕರ್ ಸೀಕ್ರೆಟ್ ರೂಮ್ ಗೆ, ಜಯಶ್ರೀನಿವಾಸನ್ ಮನೆಗೆ.!
ಜಯಶ್ರೀನಿವಾಸನ್ ವಿಫಲ
ಅಂದು ದಿವಾಕರ್ ಹೇಳಿದಂತೆ, 'ಬಿಗ್ ಬಾಸ್' ಮನೆಯೊಳಗೆ ನೂರು ದಿನ ಇರಲು ಜಯಶ್ರೀನಿವಾಸನ್ ವಿಫಲರಾಗಿದ್ದಾರೆ. ವೀಕ್ಷಕರ ಬೆಂಬಲ ಇಲ್ಲ ಅಂದ್ರೆ 'ಬಿಗ್ ಬಾಸ್' ಮನೆಯೊಳಗೆ ಜಯಶ್ರೀನಿವಾಸನ್ ನೂರು ದಿನ ಇರುವುದಾದರೂ ಹೇಗೆ.?
ಈ ಮೂವರ ಮುಖ ನೋಡಲು ಆಗ್ತಿಲ್ಲ ಎಂದ ಜಯಶ್ರೀನಿವಾಸನ್
ಕೋಪ ಕಮ್ಮಿ ಮಾಡಿದಿದ್ರೆ.?
''ಇನ್ಮೇಲೆ ನಾನು ಕಿತ್ತಾಡದೆ, ಸ್ವಲ್ಪ ಸ್ಮಾರ್ಟ್ ಆಗಿರುತ್ತೇನೆ'' ಎಂದು ಜಯಶ್ರೀನಿವಾಸನ್ ಒಮ್ಮೆ ನಿರ್ಧಾರ ಮಾಡಿದ್ದರು. ಆದ್ರೆ, ದಿವಾಕರ್, ಸಮೀರಾಚಾರ್ಯ ಹಾಗೂ ಚಂದನ್ ಶೆಟ್ಟಿ ಜೊತೆ ಜಯಶ್ರೀನಿವಾಸನ್ ವಾಕ್ಸಮರಕ್ಕಿಳಿದರು. ಇದೇ ಅವರ ನೂರು ದಿನಗಳ ಜರ್ನಿಗೆ ಮುಳ್ಳಾಯ್ತಾ.? 'ಬಿಗ್ ಬಾಸ್' ಬಲ್ಲ.!