Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಡೀ ರಾತ್ರಿ ನಿದ್ದೆಗೆಟ್ಟು ಎರಡನೇ ಬಾರಿ ಕ್ಯಾಪ್ಟನ್ ಆದ ಸಮೀರಾಚಾರ್ಯ
'ಬಿಗ್ ಬಾಸ್' ಕಾರ್ಯಕ್ರಮದಲ್ಲಿ ಒಂದು ಬಾರಿ ಕ್ಯಾಪ್ಟನ್ ಆಗುವುದೇ ದೊಡ್ಡ ವಿಷಯ. ಅಂಥದ್ರಲ್ಲಿ ರಿಯಾಝ್ ಎರಡನೇ ಬಾರಿಗೆ ಕ್ಯಾಪ್ಟನ್ ಆಗಿ ಕಳೆದ ವಾರ ಆಯ್ಕೆ ಆಗಿದ್ದರು.
ಈಗ ರಿಯಾಝ್ ಆಪ್ತ ಗೆಳೆಯ ಸಮೀರಾಚಾರ್ಯ ಎರಡನೇ ಬಾರಿಗೆ 'ಬಿಗ್ ಬಾಸ್' ಮನೆಯ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ನೀಡಲಾದ ಚಟುವಟಿಕೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸಮೀರಾಚಾರ್ಯ, ರಾತ್ರಿ ಪೂರ್ತಿ ನಿದ್ದೆಗೆಟ್ಟು ಕ್ಯಾಪ್ಟನ್ ಪಟ್ಟ ಅಲಂಕರಿಸಿದ್ದಾರೆ.
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದ ಹನ್ನೆರಡನೇ ವಾರದ ಕ್ಯಾಪ್ಟನ್ ಆಗಿರುವುದರಿಂದ ಈ ವಾರದ ಎಲಿಮಿನೇಷನ್ ಪ್ರಕ್ರಿಯೆಯಿಂದ ಸಮೀರಾಚಾರ್ಯ ಸೇಫ್ ಆಗಿದ್ದಾರೆ. ಮುಂದೆ ಓದಿರಿ...
'ಬಿಗ್ ಬಾಸ್' ನೀಡಿದ್ದ ಟಾಸ್ಕ್ ಏನು.?
ಗಾರ್ಡನ್ ಏರಿಯಾದಲ್ಲಿ ಕ್ಯಾಪ್ಟನ್ ಕೋಣೆಯ ಮಂಚದ ಪ್ರತಿಕೃತಿಯನ್ನ ಇರಿಸಲಾಗಿತ್ತು. ಅದರ ಮೇಲೆ ಕೊಡಲಾಗಿರುವ ಕೀಲಿಗಳನ್ನು ಅಲುಗಾಡಿಸದೇ ಅತಿ ಹೆಚ್ಚು ಕಾಲ ಯಾರು ಇರುತ್ತಾರೋ, ಅವರು ಕ್ಯಾಪ್ಟನ್ ಆಗಿ ಆಯ್ಕೆ ಆಗುತ್ತಿದ್ದರು.
ಸಮೀರಾಚಾರ್ಯ ಮೇಲೆ ಸಂಯುಕ್ತಾ ಹಲ್ಲೆ: ಪತ್ನಿ ಶ್ರಾವಣಿ ಆಕ್ರೋಶ
ಇಡೀ ರಾತ್ರಿ ನಿದ್ದೆಗೆಟ್ಟ ಸಮೀರಾಚಾರ್ಯ
ಸಂಜೆ 7.45 ರ ಸುಮಾರಿಗೆ ಟಾಸ್ಕ್ ಗೆ ಚಾಲನೆ ನೀಡಲಾಯಿತು. ಬೆಳಗ್ಗೆ 7 ಗಂಟೆ ವರೆಗೂ ತೂಕಡಿಸದೇ, ಕಾಲನ್ನು ನೆಲಕ್ಕೆ ತಾಗಿಸದೇ, ಕೀಲಿಯನ್ನು ಕದಲಿಸದೇ ಹಾಸಿಗೆ ಮೇಲೆ ಅತಿ ಹೆಚ್ಚು ಕಾಲ ಇದ್ದ ಸ್ಪರ್ಧಿ ಸಮೀರಾಚಾರ್ಯ. ಹೀಗಾಗಿ, ಸಮೀರಾಚಾರ್ಯ ಕ್ಯಾಪ್ಟನ್ ಪಟ್ಟ ಅಲಂಕರಿಸಿದರು.
ಸತ್ಯವನ್ನ ಸಮೀರಾಚಾರ್ಯ ಬಾಯ್ಬಿಟ್ರೆ ಶಿಕ್ಷೆ ಗ್ಯಾರೆಂಟಿ.!
ಕೊನೆ ಕ್ಷಣದಲ್ಲಿ ಕೈಬಿಟ್ಟ ಅನುಪಮಾ
ಬೆಳಗ್ಗೆ 7 ಗಂಟೆವರೆಗೂ ತೂಕಡಿಸದೇ, ಕೀಲಿಯನ್ನು ಅಲುಗಾಡಿಸದೇ ಇದ್ದ ಅನುಪಮಾ ಕೊನೆ ಕ್ಷಣದಲ್ಲಿ ಕ್ಯಾಪ್ಟನ್ ರೇಸ್ ನಿಂದ ಹೊರ ಬಿದ್ದರು.
ಅನುಪಮಾ ರನ್ನೇ ನಾಮಿನೇಟ್ ಮಾಡಿದ ಸಮೀರಾಚಾರ್ಯ
ಸಮೀರಾಚಾರ್ಯ ಕ್ಯಾಪ್ಟನ್ ಆದ ಕಾರಣ ಈ ವಾರ ಸೇಫ್ ಆದರು. ಜೊತೆಗೆ ನಾಮಿನೇಷನ್ ಪ್ರಕ್ರಿಯೆಯಲ್ಲಿ ಒಬ್ಬರನ್ನ ನೇರವಾಗಿ ನಾಮಿನೇಟ್ ಮಾಡುವ ಅಧಿಕಾರ ಕೂಡ ಅವರಿಗೆ ಇತ್ತು. ''ಅನುಪಮಾ ತಮಗೆ ಪ್ರಬಲ ಸ್ಪರ್ಧೆ ನೀಡುತ್ತಾರೆ' ಎಂಬ ಕಾರಣವನ್ನ ನೀಡಿ ಅನುಪಮಾ ರವರನ್ನೇ ಸಮೀರಾಚಾರ್ಯ ನೇರವಾಗಿ ನಾಮಿನೇಟ್ ಮಾಡಿದರು.