Just In
Don't Miss!
- Education
DFCCIL Recruitment 2021: 1099 ಜ್ಯೂನಿಯರ್ ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- News
ಕೆಜಿಎಫ್ನಲ್ಲಿ ಮಹದೇವಪುರ ಸಬ್ ಇನ್ಸ್ಪೆಕ್ಟರ್ಗೆ ಚಾಕು ಇರಿತ
- Sports
ಭಾರತ vs ಇಂಗ್ಲೆಂಡ್: ಧೋನಿ ದಾಖಲೆ ಸರಿದೂಗಿಸಿದ ವಿರಾಟ್ ಕೊಹ್ಲಿ
- Lifestyle
ಈ 7 ಬಗೆಯ ಆಹಾರಗಳು ಕೂದಲು ಉದುರುವ ಸಮಸ್ಯೆ ಹೆಚ್ಚಿಸುವುದು
- Automobiles
ಬಿಡುಗಡೆಯ ನಂತರ ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
- Finance
ಚಿನ್ನದ ಬೆಲೆ ಇಳಿಕೆ: ಗರಿಷ್ಠ ಮಟ್ಟಕ್ಕಿಂತ 11,500 ರೂ. ಕಡಿಮೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಿರ್ದೇಶಕ ದಯಾಳ್ ಗೆ 'ಕಾಮಿಡಿ ಪೀಸ್' ಎಂದುಬಿಟ್ಟ ಅನುಪಮಾ ಗೌಡ.!
'ಸರ್ಕಸ್', 'ಆಕ್ಟರ್', 'ಸತ್ಯ ಹರಿಶ್ಚಂದ್ರ' ಮುಂತಾದ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿರುವ ನಿರ್ದೇಶಕ ದಯಾಳ್ ಪದ್ಮನಾಭನ್ ಕಾಮಿಡಿ ಪೀಸ್ ಅಂತೆ.!
ಹಾಗಂತ ಹೇಳಿರುವವರು ಬೇರೆ ಯಾರೂ ಅಲ್ಲ, 'ಅಕ್ಕ' ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ.!
ಹೌದು, ನಿರ್ದೇಶಕ ದಯಾಳ್ ಪದ್ಮನಾಭನ್ 'ಕಾಮಿಡಿ ಪೀಸ್' ಅಂತ ಅನುಪಮಾ ಗೌಡ ಕಾಮೆಂಟ್ ಮಾಡಿದ್ದಾರೆ. ಅದು 'ಬಿಗ್ ಬಾಸ್' ವೇದಿಕೆ ಮೇಲೆ... ಕಿಚ್ಚ ಸುದೀಪ್ ಮುಂದೆ.!
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಿಂದ ಅನುಪಮಾ ಗೌಡ ಔಟ್ ಆಗಿದ್ದಾರೆ. ಎಲಿಮಿನೇಟ್ ಆದ್ಮೇಲೆ, ಕಿಚ್ಚ ಸುದೀಪ್ ಜೊತೆಗೆ ಹರಟಿದ ಅನುಪಮಾ ಗೌಡ ''ದಯಾಳ್ ಒಂದು ಕಾಮಿಡಿ ಪೀಸ್'' ಎಂದಿದ್ದಾರೆ. ಜೊತೆಗೆ ''ಇವರಷ್ಟು ಸ್ಟ್ರೇಟ್ ಫಾರ್ವರ್ಡ್ ಹದಿನೇಳು ಜನರಲ್ಲಿ ಯಾರೂ ಇರಲಿಲ್ಲ'' ಅಂತಲೂ ಹೇಳಿದ್ದಾರೆ.
ಹಾಗ್ನೋಡಿದ್ರೆ, 'ಬಿಗ್ ಬಾಸ್' ಮನೆಯೊಳಗೆ ದಯಾಳ್ ಗೆ ಅತ್ಯಾಪ್ತರಾಗಿದ್ದವರ ಪೈಕಿ ಅನುಪಮಾ ಗೌಡ ಕೂಡ ಒಬ್ಬರು. ದಯಾಳ್ ಹೊರಬಂದಾಗ ಅನುಪಮಾ ಗೌಡ ಕಣ್ಣೀರು ಹಾಕಿದ್ದರು. ಆದ್ರೆ ಈಗ ಅದೇ ದಯಾಳ್ ಗೆ 'ಕಾಮಿಡಿ ಪೀಸ್' ಎಂದು ಅನುಪಮಾ ಹೇಳಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.