Don't Miss!
- News EPFO: ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ, 1 ಲಕ್ಷದವರೆಗೂ ಹಣ ಬಿಡಿಸಿಕೊಳ್ಳಬಹುದು!
- Automobiles ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ದಯಾಳ್ ಗೆ 'ಕಾಮಿಡಿ ಪೀಸ್' ಎಂದುಬಿಟ್ಟ ಅನುಪಮಾ ಗೌಡ.!
'ಸರ್ಕಸ್', 'ಆಕ್ಟರ್', 'ಸತ್ಯ ಹರಿಶ್ಚಂದ್ರ' ಮುಂತಾದ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿರುವ ನಿರ್ದೇಶಕ ದಯಾಳ್ ಪದ್ಮನಾಭನ್ ಕಾಮಿಡಿ ಪೀಸ್ ಅಂತೆ.!
ಹಾಗಂತ ಹೇಳಿರುವವರು ಬೇರೆ ಯಾರೂ ಅಲ್ಲ, 'ಅಕ್ಕ' ಧಾರಾವಾಹಿ ಖ್ಯಾತಿಯ ನಟಿ ಅನುಪಮಾ ಗೌಡ.!
ಹೌದು, ನಿರ್ದೇಶಕ ದಯಾಳ್ ಪದ್ಮನಾಭನ್ 'ಕಾಮಿಡಿ ಪೀಸ್' ಅಂತ ಅನುಪಮಾ ಗೌಡ ಕಾಮೆಂಟ್ ಮಾಡಿದ್ದಾರೆ. ಅದು 'ಬಿಗ್ ಬಾಸ್' ವೇದಿಕೆ ಮೇಲೆ... ಕಿಚ್ಚ ಸುದೀಪ್ ಮುಂದೆ.!
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಿಂದ ಅನುಪಮಾ ಗೌಡ ಔಟ್ ಆಗಿದ್ದಾರೆ. ಎಲಿಮಿನೇಟ್ ಆದ್ಮೇಲೆ, ಕಿಚ್ಚ ಸುದೀಪ್ ಜೊತೆಗೆ ಹರಟಿದ ಅನುಪಮಾ ಗೌಡ ''ದಯಾಳ್ ಒಂದು ಕಾಮಿಡಿ ಪೀಸ್'' ಎಂದಿದ್ದಾರೆ. ಜೊತೆಗೆ ''ಇವರಷ್ಟು ಸ್ಟ್ರೇಟ್ ಫಾರ್ವರ್ಡ್ ಹದಿನೇಳು ಜನರಲ್ಲಿ ಯಾರೂ ಇರಲಿಲ್ಲ'' ಅಂತಲೂ ಹೇಳಿದ್ದಾರೆ.
ಹಾಗ್ನೋಡಿದ್ರೆ, 'ಬಿಗ್ ಬಾಸ್' ಮನೆಯೊಳಗೆ ದಯಾಳ್ ಗೆ ಅತ್ಯಾಪ್ತರಾಗಿದ್ದವರ ಪೈಕಿ ಅನುಪಮಾ ಗೌಡ ಕೂಡ ಒಬ್ಬರು. ದಯಾಳ್ ಹೊರಬಂದಾಗ ಅನುಪಮಾ ಗೌಡ ಕಣ್ಣೀರು ಹಾಕಿದ್ದರು. ಆದ್ರೆ ಈಗ ಅದೇ ದಯಾಳ್ ಗೆ 'ಕಾಮಿಡಿ ಪೀಸ್' ಎಂದು ಅನುಪಮಾ ಹೇಳಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.