Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಕ್ ಆಗಲ್ಲ ಅಂದವ್ರೇ ಶಾಕ್ ಆದ್ರು: ರಿಯಾಝ್ ನ ಮಿಸ್ ಮಾಡ್ತಾವ್ರೆ ಆಚಾರ್ಯರು.!
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಿಂದ ಹದಿಮೂರನೇ ವಾರ ಎಲಿಮಿನೇಟ್ ಆಗಿದ್ದು 'ಕಾಮನ್ ಮ್ಯಾನ್' ರಿಯಾಝ್ ಬಾಷಾ. ರಿಯಾಝ್ ಔಟ್ ಆಗಿದ್ದಕ್ಕೆ ವೀಕ್ಷಕರ ಬಳಗದಿಂದ ಮಿಶ್ರ ಪ್ರತಿಕ್ರಿಯೆ ಲಭ್ಯವಾಗಿದೆ. ರಿಯಾಝ್ ಇಷ್ಟು ಬೇಗ ಔಟ್ ಆಗುವ ಸ್ಪರ್ಧಿಯೇ ಅಲ್ಲ ಎಂದು ಕೆಲವರು ಅಭಿಪ್ರಾಯ ಪಟ್ಟರೆ, ಇನ್ನೂ ಕೆಲವರು ರಿಯಾಝ್ ಔಟ್ ಆಗಿದ್ದು ಒಳ್ಳೇದಾಯ್ತು ಅಂತಿದ್ದಾರೆ.
ವೀಕ್ಷಕರ ಮಾತು ಹಾಗಿರಲಿ, ''ಬಿಗ್ ಬಾಸ್' ಮನೆಯಿಂದ ಈ ವಾರ ಯಾರು ಔಟ್ ಆದರೆ ನಿಮಗೆ ಶಾಕ್ ಆಗುತ್ತೆ.?'' ಅಂತ ಸಮೀರಾಚಾರ್ಯ ಅವರಿಗೆ ಚಂದನ್ ಶೆಟ್ಟಿ ಪ್ರಶ್ನೆ ಮಾಡಿದ್ದರು. ಆಗ, ''ನಾನು, ನಿವೇದಿತಾ ಹಾಗೂ ರಿಯಾಝ್... ಔಟ್ ಆದರೆ ಏನೂ ಅನಿಸಲ್ಲ. ಶಾಕ್ ಆಗಲ್ಲ'' ಅಂತ ಸಮೀರಾಚಾರ್ಯ ಉತ್ತರಿಸಿದ್ದರು.
''ರಿಯಾಝ್ ಔಟ್ ಆದರೆ ಶಾಕ್ ಆಗಲ್ಲ'' ಅಂತ ಹೇಳಿದ್ದ ಸಮೀರಾಚಾರ್ಯ, ಅದೇ ''ರಿಯಾಝ್ ಎಲಿಮಿನೇಟ್ ಆಗಿದ್ದಾರೆ'' ಎಂದು ಸುದೀಪ್ ಘೋಷಿಸಿದಾಗ ಒಂದು ಕ್ಷಣ ಶಾಕ್ ಆದರು.
ರಿಯಾಝ್ ಔಟ್ ಆಗಿದ್ದು ಯಾಕೆ.? ವೀಕ್ಷಕರೇ ಕೊಟ್ಟ ಹತ್ತು ಕಾರಣಗಳಿವು.!
ವೀಕ್ಷಕರ ಎಸ್.ಎಂ.ಎಸ್ ಆಧಾರದ ಮೇರೆಗೆ ಬಾಟಂ 2 ತಲುಪಿದ್ದವರು ಸಮೀರಾಚಾರ್ಯ ಹಾಗೂ ರಿಯಾಝ್. ಇಬ್ಬರ ಪೈಕಿ ಸಮೀರ್ ಸೇಫ್ ಆದರು, ರಿಯಾಝ್ ಔಟ್ ಆದರು. ರಿಯಾಝ್ ಎಲಿಮಿನೇಟ್ ಆಗಿದ್ದಕ್ಕೆ ಸಮೀರಾಚಾರ್ಯ ಅವರಿಗೆ ಬೇಸರ ಆಗಿರುವುದಂತೂ ಸತ್ಯ.
ಸದ್ಯ 'ಬಿಗ್ ಬಾಸ್' ಮನೆಯೊಳಗೆ ರಿಯಾಝ್ ಅವರನ್ನ ಮಿಸ್ ಮಾಡಿಕೊಳ್ಳುತ್ತಿರುವವರು ಸಮೀರಾಚಾರ್ಯ ಮಾತ್ರ.! ಹಾಗ್ನೋಡಿದ್ರೆ, 'ಬಿಗ್ ಬಾಸ್' ಮನೆಯೊಳಗೆ ಸಮೀರಾಚಾರ್ಯ ಜೊತೆಗೆ ರಿಯಾಝ್ ಹೆಚ್ಚು ಕಾಲ ಕಳೆದಿದ್ದರು. ಈಗ ರಿಯಾಝ್ ಇಲ್ಲದ ಕಾರಣ ಸಮೀರಾಚಾರ್ಯ ಅವರಿಗೆ ಏನೋ ಕಳೆದುಕೊಂಡಂತಹ ಭಾವನೆ.