Don't Miss!
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲ್ಲರನ್ನೂ ಡೇಂಜರ್ ಝೋನ್ ಗೆ ತಳ್ಳಿ ಶಾಕ್ ಕೊಟ್ಟ 'ಬಿಗ್ ಬಾಸ್'.!
Recommended Video
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಎಲ್ಲರಿಗೂ ರುಚಿ ರುಚಿಯಾದ ಅಡುಗೆ ಮಾಡುತ್ತ, ಮನೆಯಲ್ಲಿ 'ಅಪ್ಪ'ನ ಸ್ಥಾನ ತುಂಬಿದ್ದ ಸಿಹಿ ಕಹಿ ಚಂದ್ರು ಔಟ್ ಆದ ಬಳಿಕ 'ಬಿಗ್ ಬಾಸ್' ಮನೆಯ ಎಲ್ಲ ಸದಸ್ಯರು ನೇರವಾಗಿ ನಾಮಿನೇಟ್ ಆಗಿದ್ದಾರೆ.
'ಬಿಗ್ ಬಾಸ್' ಮನೆಯಲ್ಲಿ ಪ್ರತಿ ವಾರ ನಾಮಿನೇಷನ್ ಪ್ರಕ್ರಿಯೆ ನಡೆಯುವಾಗ, ಮನೆಯ ಒಬ್ಬೊಬ್ಬ ಸದಸ್ಯರು ಕನ್ಫೆಶನ್ ರೂಮ್ ಒಳಗೆ ಹೋಗಿ ತಮಗೆ ಆಗದ ಇಬ್ಬರು ಸದಸ್ಯರನ್ನ ನಾಮಿನೇಟ್ ಮಾಡಬೇಕಿತ್ತು. ಆದ್ರೆ, ಈ ವಾರ ಹಾಗೆ ನಡೆಯಲಿಲ್ಲ.
ಇಬ್ಬರು ಘಟಾನುಘಟಿಗಳು ಹೊರಬಿದ್ದಾಯ್ತು.! ಮುಂದಿನ ಟಾರ್ಗೆಟ್ ಯಾರು.?
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಎಂಟನೇ ವಾರದ ನಾಮಿನೇಷನ್ ಪ್ರಕ್ರಿಯೆ ತದ್ವಿರುದ್ಧವಾಗಿತ್ತು. ಮನೆಯ ಸದಸ್ಯರೆಲ್ಲ ಕುಣಿದು ಕುಪ್ಪಳಿಸುತ್ತಿದ್ದಾಗ, 'ಬಿಗ್ ಬಾಸ್' ಶಾಕ್ ಟ್ರೀಟ್ಮೆಂಟ್ ಕೊಟ್ಟರು. ಮುಂದೆ ಓದಿರಿ...
ಶಾಕ್ ಕೊಟ್ಟ 'ಬಿಗ್ ಬಾಸ್'
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಐವತ್ತು ದಿನಗಳು ಕಳೆದ ಮೇಲೆ ಎಲ್ಲ ಸದಸ್ಯರನ್ನ 'ಬಿಗ್ ಬಾಸ್' ಡೇಂಜರ್ ಝೋನ್ ಗೆ ತಳ್ಳಿದ್ದಾರೆ.
ಇದಪ್ಪಾ ಆಟ ಅಂದ್ರೆ... ರಿಯಾಝ್ ಮೇಲೆ ಅನುಪಮಾಗೆ ಗೌರವ ಮೂಡಿದೆ.!
ಕ್ಯಾಪ್ಟನ್ ಮಾತ್ರ ಸೇಫ್
ಜಗನ್ನಾಥ್ ಚಂದ್ರಶೇಖರ್... 'ಬಿಗ್ ಬಾಸ್' ಮನೆಯ ಎಂಟನೇ ವಾರದ ಕ್ಯಾಪ್ಟನ್ ಆಗಿ ಆಯ್ಕೆ ಆದರು. ಹೀಗಾಗಿ, ನಾಮಿನೇಷನ್ ನಿಂದ ಜಗನ್ ಸೇಫ್ ಆದರು.
ಸಮೀರಾಚಾರ್ಯ ಮೇಲೆ ಅನುಪಮಾ ಗಂಭೀರ ಆರೋಪ ಮಾಡಿದ್ದು ಸರಿಯೇ.?
ಹೊಸ ಸ್ಪರ್ಧಿ ಕೂಡ ಸೇಫ್.!
'ಬಿಗ್ ಬಾಸ್' ಮನೆಯೊಳಗೆ ಕಾಲಿಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿ ವೈಷ್ಣವಿ ಕೂಡ ಈ ವಾರದ ನಾಮಿನೇಷನ್ ಪ್ರಕ್ರಿಯೆಯಿಂದ ಸೇಫ್ ಆಗಿದ್ದಾರೆ. ವೈಷ್ಣವಿ ಮತ್ತು ಜಗನ್ ಹೊರತು ಪಡಿಸಿದರೆ, ಬಾಕಿ ಎಲ್ಲರೂ ನಾಮಿನೇಟ್ ಆಗಿದ್ದಾರೆ.
'ಬಿಗ್' ಬ್ರೇಕಿಂಗ್: 'ಬಿಗ್ ಬಾಸ್' ಮನೆಯೊಳಗೆ ಹೊಸ ನಟಿ ಎಂಟ್ರಿ.?
ನಾಮಿನೇಟ್ ಆಗಿದ್ದಾರೆ ಹನ್ನೊಂದು ಮಂದಿ.!
ಜೆಕೆ, ಜಯಶ್ರೀನಿವಾಸನ್, ಶ್ರುತಿ ಪ್ರಕಾಶ್, ಆಶಿತಾ, ರಿಯಾಝ್, ಚಂದನ್ ಶೆಟ್ಟಿ, ಸಮೀರಾಚಾರ್ಯ, ದಿವಾಕರ್, ಅನುಪಮಾ ಗೌಡ, ನಿವೇದಿತಾ ಗೌಡ ಹಾಗೂ ಕೃಷಿ ತಾಪಂಡ ಈ ವಾರ 'ಬಿಗ್ ಬಾಸ್' ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ.
ಚಂದನ್ ಶೆಟ್ಟಿ ತಾಳ್ಮೆಗೆ ಹ್ಯಾಟ್ಸ್ ಆಫ್ ಎಂದ ಸುದೀಪ್.!
'ಬಿಗ್ ಬಾಸ್' ಹೀಗೆ ಮಾಡಲು ಕಾರಣ ಏನು.?
ಮನೆಯ ನಿಯಮದಂತೆ ಪ್ರತಿ ವಾರ ಸದಸ್ಯರ ಆಯ್ಕೆ ಮತ್ತು ಇನ್ನಿತರ ವಿಶೇಷ ನಿಯಮಗಳ ಅನುಸಾರ ಸದಸ್ಯರು ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗುತ್ತಾರೆ. ಕಳೆದ ಏಳು ವಾರಗಳಲ್ಲಿ ನಾಮಿನೇಷನ್ ಪ್ರಕ್ರಿಯೆ ಇದೇ ರೀತಿ ನಡೆದಿದೆ. ಮನೆಗೆ ಬಂದು ಐವತ್ತು ದಿನಗಳು ಕಳೆದಿದೆ. ಈ ಹಂತದಲ್ಲಿ ಮನೆಯ ಸದಸ್ಯರ ಬಗ್ಗೆ ವೀಕ್ಷಕರ ಅಭಿಪ್ರಾಯವನ್ನು ಏಕ ಕಾಲಕ್ಕೆ ತಿಳಿಯಲು ಬಿಗ್ ಬಾಸ್ ಎಲ್ಲರನ್ನೂ ನಾಮಿನೇಟ್ ಮಾಡಿದ್ದಾರೆ.
ದಿವಾಕರ್ ಗೆ ಸುದೀಪ್ ಮೊದಲ ಗುರು.! ಇನ್ಮುಂದೆ ಬದಲಾದ ದಿವಾಕರ್ ನ ನೋಡಬಹುದು.!
ಹನ್ನೊಂದು ಮಂದಿ ಪೈಕಿ ನಿಮ್ಮ ಮತ ಯಾರಿಗೆ.?
ಜೆಕೆ, ಜಯಶ್ರೀನಿವಾಸನ್, ಶ್ರುತಿ ಪ್ರಕಾಶ್, ಆಶಿತಾ, ರಿಯಾಝ್, ಚಂದನ್ ಶೆಟ್ಟಿ, ಸಮೀರಾಚಾರ್ಯ, ದಿವಾಕರ್, ಅನುಪಮಾ ಗೌಡ, ನಿವೇದಿತಾ ಗೌಡ ಹಾಗೂ ಕೃಷಿ ತಾಪಂಡ.... ಈ ಹನ್ನೊಂದು ಮಂದಿ ಪೈಕಿ 'ಬಿಗ್ ಬಾಸ್' ಮನೆಯಲ್ಲಿ ಯಾರು ಉಳಿಯಬೇಕು.? ಯಾರು ಔಟ್ ಆಗಬೇಕು ಎಂಬ ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸಿ... 'ಫಿಲ್ಮಿಬೀಟ್ ಕನ್ನಡ' ಫೇಸ್ ಬುಕ್ ಪೇಜ್ ಲೈಕ್ ಮಾಡಿ ಕಾಮೆಂಟ್ ಮಾಡಿ...