Don't Miss!
- News Neha Murder Case: ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ಎಂದ ಸಿಎಂ ಸಿದ್ದರಾಮಯ್ಯ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊಟ್ಟೆ ಹೊಡೆದ ಆಂಡಿ: ಇಡೀ ಮನೆ ಮಂದಿ ಸಿಡಿಮಿಡಿ.!
'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಲ್ಲಿ ಪ್ರತಿ ದಿನ ಏನಾದರೂ ಒಂದು ಕಿತಾಪತಿ ಮಾಡಿ ಕ್ಯಾಮರಾ ಮುಂದೆ ಕಾಣಿಸಿಕೊಳ್ಳುವಾತ ಆಂಡ್ರ್ಯೂ ಅಲಿಯಾಸ್ ಆಂಡಿ.
ಇಲ್ಲಿಯವರೆಗೂ ಬಾಯಿಗೆ ಬಂದ ಹಾಗೆ ಮಾತನಾಡಿ, ಎಲ್ಲರನ್ನೂ ಕೆಣಕುತ್ತಿದ್ದ ಆಂಡ್ರ್ಯೂ ಇದೀಗ ಒಂದು ಹೆಜ್ಜೆ ಮುಂದಕ್ಕೆ ಹೋಗಿ ವಿನಾಕಾರಣ ಇಬ್ಬರ ತಲೆ ಮೇಲೆ ಮೊಟ್ಟೆ ಹೊಡೆದಿದ್ದಾರೆ.
ಜಯಶ್ರೀ ಮತ್ತು ಸೋನು ಪಾಟೀಲ್ ಸಸ್ಯಹಾರಿಗಳು. ಈ ಬಗ್ಗೆ ತಿಳಿದಿದ್ದರೂ, ಅವರಿಬ್ಬರನ್ನೇ ಟಾರ್ಗೆಟ್ ಮಾಡಿ ಆಂಡ್ರ್ಯೂ ಮೊಟ್ಟೆ ಹೊಡೆದಿದ್ದಾರೆ. ಇದು ಎಲ್ಲರ ಕೆಂಗಣ್ಣಿಗೆ ಕಾರಣವಾಗಿದೆ. ಮಕ್ಕಳ ಚಟುವಟಿಕೆಯಲ್ಲಿ ಮಕ್ಕಳ ಹಾಗೆ ನಡೆದುಕೊಳ್ಳದೇ, ತರ್ಲೆ ಮಾಡಲು ಹೋದ ಆಂಡಿ ವಿರುದ್ಧ ಇದೀಗ ಇಡೀ ಮನೆ ಸಿಡಿಮಿಡಿಗೊಂಡಿದೆ. ಮುಂದೆ ಓದಿರಿ...
'ಬಿಗ್ ಬಾಸ್' ನೀಡಿದ್ದ ಟಾಸ್ಕ್ ಏನು.?
ಮಕ್ಕಳ ದಿನಾಚರಣೆ ಪ್ರಯುಕ್ತ ಸ್ಪರ್ಧಿಗಳಿಗೆ ಮತ್ತೆ ಮಕ್ಕಳಾಗುವ ಅವಕಾಶವನ್ನ 'ಬಿಗ್ ಬಾಸ್' ನೀಡಿದ್ದರು. ಅದು 'ಮಗು ಆಗೋಣ ಬಾ' ಟಾಸ್ಕ್ ಮೂಲಕ. ಇದರ ಅನುಸಾರ ಪ್ರತಿ ಬಾರಿ ಟಿವಿ ಪರದೆ ಮೇಲೆ ಯಾರ ಭಾವಚಿತ್ರ ಬರುತ್ತದೋ, ಅವರು ಮಗುವಿನ ಹಾಗೆ ವರ್ತಿಸಬೇಕಿತ್ತು. ಉಳಿದವರು ಮಗುವಿನ ಲಾಲನೆ-ಪಾಲನೆ ಮಾಡಬೇಕಿತ್ತು. ಈ ಟಾಸ್ಕ್ ನಲ್ಲಿ ಆಂಡ್ರ್ಯೂ ಮತ್ತು ಆಡಮ್ ಪಾಶಾ ಅವಳ-ಜವಳಿ ಮಕ್ಕಳ ಪಾತ್ರ ನಿಭಾಯಿಸಬೇಕಿತ್ತು.
ಆಂಡ್ರ್ಯೂ ಮಾಡಿದ್ದೇನು.?
''ನಾನು ಜೀವನದಲ್ಲಿ ಯಾವತ್ತೂ ತರ್ಲೆ ಮಾಡಲ್ಲ.. ನನಗೆ ಇಬ್ಬರೂ ತುಂಬಾ ಇಷ್ಟ'' ಅಂತ ಹೇಳುತ್ತಲೇ ಜೇಬಿನಲ್ಲಿ ಇದ್ದ ಮೊಟ್ಟೆಗಳನ್ನ ತೆಗೆದುಕೊಂಡು ಸೋನು ಪಾಟೀಲ್ ಮತ್ತು ಜಯಶ್ರೀ ತಲೆ ಮೇಲೆ ಆಂಡ್ರ್ಯೂ ಹೊಡೆದರು.
ಗೊತ್ತಿದ್ದೂ ಟಾರ್ಗೆಟ್ ಮಾಡಿದ್ದು ಯಾಕೆ.?
''ಜಯಶ್ರೀ ಮತ್ತು ಸೋನು ಪಾಟೀಲ್ ಮೊಟ್ಟೆ ತಿನ್ನಲ್ಲ ಅಂತ ಆಂಡ್ರ್ಯೂಗೆ ಗೊತ್ತು. ಅದಕ್ಕೆ ಹೊಡೆದಿದ್ದಾನೆ. ಇವೆಲ್ಲವೂ ಕ್ಯಾಮರಾ ಸಲುವಾಗಿ'' ಅನ್ನೋದು 'ಬಿಗ್ ಬಾಸ್' ಮನೆ ಸದಸ್ಯರ ಅಭಿಪ್ರಾಯ.
ಕಣ್ಣೀರಿಟ್ಟ ಜಯಶ್ರೀ, ಸೋನು ಪಾಟೀಲ್
ತಮ್ಮ ಭಾವನೆಗಳಿಗೆ ಧಕ್ಕೆ ಆದ ಪರಿಣಾಮ, ಜಯಶ್ರೀ ಮತ್ತು ಸೋನು ಪಾಟೀಲ್ ಕಣ್ಣೀರು ಹಾಕಿದರು. ತಮ್ಮ ತಾಯಿ ಜೊತೆಗೂ ಆಂಡ್ರ್ಯೂ ಇದೇ ರೀತಿ ನಡೆದುಕೊಳ್ಳುತ್ತಾರಾ ಅಂತ ಜಯಶ್ರೀ ಪ್ರಶ್ನಿಸಿದರು.
ಮಾನವೀಯತೆ ಇಲ್ಲ.!
''ಆಂಡಿಗೆ ಮಾನವೀಯತೆ ಇಲ್ಲ. ಈ ತರಹ ಮಾಡಿದರೆ ಮನೆಯಲ್ಲಿ ಉಳಿದುಕೊಳ್ಳಬಹುದು ಅಂತ ಅಂದುಕೊಂಡಿದ್ದಾನೆ. ಜನರೇ ಅವನಿಗೆ ಪಾಠ ಕಲಿಸುತ್ತಾರೆ'' ಅಂತಾರೆ ಶಶಿ ಕುಮಾರ್.
ಕ್ಲಾಸ್ ತೆಗೆದುಕೊಂಡ ಆಡಮ್
''ಮನೆಯಲ್ಲಿ ನೀನು ಎರಡನೇ ರಶ್ಮಿ ಆಗಿದ್ದೀಯಾ... ನೀನು ಮಾಡಿದ್ದು ಫನ್ ಆಗಿರಲಿಲ್ಲ. ಅವಮಾನ ಮಾಡಿದ ಹಾಗಿತ್ತು. ಕ್ಯಾಮರಾಗಾಗಿ ಇದನ್ನೆಲ್ಲ ಮಾಡುತ್ತಿದ್ದರೆ, ತುಂಬಾ ತಪ್ಪು'' ಎಂದು ಆಂಡ್ರ್ಯೂಗೆ ಆಡಮ್ ಕ್ಲಾಸ್ ತೆಗೆದುಕೊಂಡರು.
ಆಂಡ್ರ್ಯೂ ಕೊಟ್ಟ ಸಮಜಾಯಿಷಿ ಏನು.?
''ಟಾಸ್ಕ್ ನಲ್ಲಿ ಮೊಟ್ಟೆ ಹೊಡೆಯಲು ಮೊನ್ನೆ ಹೇಳಿದ್ದರು. ಅದು ಅವಮಾನನಾ.? ಸಸ್ಯಹಾರಿಗೆ ಮೊಟ್ಟೆ ಹೊಡೆಯಬೇಕಿತ್ತು ಅಂತ ನೀವೆಲ್ಲ ಹೇಳಿದ್ರಿ. ಅದನ್ನೇ ನಾನು ಮಾಡಿದಾಗ, ಎಲ್ಲರೂ ಉಲ್ಟಾ ಹೊಡೆದ್ರಿ. ಫನ್ ಆಗಿ ಮಾಡಿದ್ದನ್ನ, ಪರ್ಸನಲ್ ಆಗಿ ತೆಗೆದುಕೊಂಡಿದ್ದಾರೆ. ಅದಕ್ಕೆ ಧರ್ಮದ ಬಣ್ಣ ಬಳಿಯುತ್ತಾರೆ'' ಅಂತೆಲ್ಲಾ ಆಂಡ್ರ್ಯೂ ತಮ್ಮ ನಡೆಯನ್ನ ಸಮರ್ಥಿಸಿಕೊಂಡಿದ್ದಾರೆ.
ಲಿಖಿತ ರೂಪದಲ್ಲಿ ಕ್ಷಮೆ ಕೇಳಿದ ಆಂಡ್ರ್ಯೂ
ಕೊನೆಗೆ ಸೋನು ಪಾಟೀಲ್ ಮತ್ತು ಜಯಶ್ರೀಗೆ ಲಿಖಿತ ರೂಪದಲ್ಲಿ 'ಸಾರಿ' ಅಂತ ಬರೆದುಕೊಟ್ಟರೆ ವಿನಃ ನೇರವಾಗಿ ಬಂದು ಆಂಡ್ರ್ಯೂ ಕ್ಷಮೆ ಕೇಳಲಿಲ್ಲ.
ಇದು ಸರಿನಾ.?
ಆಂಡ್ರ್ಯೂ ವರ್ತನೆ ಮತ್ತು ಅದಕ್ಕೆ ಆತ ಕೊಟ್ಟ ಸಮಜಾಯಿಷಿ ಸರಿ ಅಂತ ನಿಮಗೆ ಅನಿಸುತ್ತಾ.? ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬುದನ್ನು ನಮಗೆ ತಿಳಿಸಿ, ಕೆಳಗಿರುವ ಕಾಮೆಂಟ್ ಬಾಕ್ಸ್ ಮೂಲಕ.