Don't Miss!
- News ಆಜಾನ್ ಕೂಗುತ್ತಿದ್ದಾಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ: ವಿಡಿಯೋ ಹಂಚಿಕೊಂಡು ವಿಜಯೇಂದ್ರ ಕಿಡಿ
- Automobiles BAJAJ CNG ಬೈಕ್ ಚಿತ್ರಗಳು ಸೋರಿಕೆ: ಬೆಲೆ ಕೇಳಿದರೆ ಶಾಕ್ ಆಗುವುದಂತೂ ಪಕ್ಕಾ!
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದ ಎರಡನೇ ಫೈನಲಿಸ್ಟ್ ಧನರಾಜ್.!
'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದ ಮೊದಲ ಫೈನಲಿಸ್ಟ್ ಗಾಯಕ ನವೀನ್ ಸಜ್ಜು ಅನ್ನೋದು ನಿಮಗೆಲ್ಲ ಗೊತ್ತೇ ಇದೆ. ಇದೀಗ ಎರಡನೇ ಫೈನಲಿಸ್ಟ್ ಆಗಿ ಆಯ್ಕೆ ಆಗಿರುವವರು ಕಾಮನ್ ಮ್ಯಾನ್ ಧನರಾಜ್.
'ಬಿಗ್ ಬಾಸ್' ನೀಡಿದ ವಿಶೇಷ ಸವಾಲನ್ನು ಸ್ವೀಕರಿಸಿ, ಯಶಸ್ವಿಯಾಗಿ ಪೂರ್ಣಗೊಳಿಸಿದ ನವೀನ್ ಸಜ್ಜು ಫಿನಾಲೆ ವಾರಕ್ಕೆ ಟಿಕೆಟ್ ಪಡೆದರೆ, ಇತ್ತ 'ಬಿಗ್ ಬಾಸ್' ಮನೆಗೆ ಬಂದ ವಿಶೇಷ ಅತಿಥಿಗಳ ಮನಗೆದ್ದು ಧನರಾಜ್ ಫಿನಾಲೆ ವಾರಕ್ಕೆ ಲಗ್ಗೆ ಇಟ್ಟಿದ್ದಾರೆ.
ಒಳ್ಳೆ ಹುಡುಗ ಪ್ರಥಮ್, ಕಿರಿಕ್ ಕೀರ್ತಿ, ಸಂಜನಾ, ಕೃಷಿ ತಾಪಂಡ ಮತ್ತು ಸಮೀರಾಚಾರ್ಯ 'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದಾರೆ.
'ಬಿಗ್ ಬಾಸ್' ಮನೆಯಲ್ಲಿ ವಿಶೇಷ ಅತಿಥಿಗಳು: ಇನ್ಮೇಲೆ ಇವರೇ ಗೊಂಬೆ ಆಡ್ಸೋರು.!
'ಬಿಗ್ ಬಾಸ್' ಮನೆಯಲ್ಲಿರುವ ಸ್ಪರ್ಧಿಗಳ ಪೈಕಿ ಒಬ್ಬರನ್ನು ಸೇಫ್ ಮಾಡುವ ವಿಶೇಷ ಅಧಿಕಾರವನ್ನು ವಿಶೇಷ ಅತಿಥಿಗಳಿಗೆ 'ಬಿಗ್ ಬಾಸ್' ನೀಡಿದ್ದರು. ಇದರ ಅನುಸಾರ, ಜೆಂಟಲ್ ಮ್ಯಾನ್ ಧನರಾಜ್ ರನ್ನ ವಿಶೇಷ ಅತಿಥಿಗಳು ಒಮ್ಮತದ ನಿರ್ಧಾರದ ಮೇರೆಗೆ ಸೇಫ್ ಮಾಡಿದರು.
'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದ ಮೊದಲ ಫೈನಲಿಸ್ಟ್ ಗಾಯಕ ನವೀನ್.!
ವಿಶೇಷ ಅತಿಥಿಗಳಿಗೆ ಧನರಾಜ್ ಮೇಲೆ ಯಾವುದೇ ಆಕ್ಷೇಪಣೆ ಇರಲಿಲ್ಲ. ಹೀಗಾಗಿ, ಅವರನ್ನೇ ಫಿನಾಲೆ ವಾರಕ್ಕೆ ಡೈರೆಕ್ಟ್ ಆಗಿ ಕಳುಹಿಸಿಕೊಡಲಾಯಿತು. ಬಾಕಿ ಉಳಿದ ಐವರು (ಕವಿತಾ, ರಾಕೇಶ್, ಆಂಡ್ರ್ಯೂ, ರಶ್ಮಿ ಮತ್ತು ಶಶಿ) ಸದ್ಯ ಡೇಂಜರ್ ಝೋನ್ ನಲ್ಲಿದ್ದಾರೆ. ಈ ಐವರ ಪೈಕಿ ಯಾರು ಔಟ್ ಆಗಬೇಕು.? ನಿಮ್ಮ ಆಯ್ಕೆಯನ್ನ ನಮಗೆ ತಿಳಿಸಿ.. ಕೆಳಗಿರುವ ಕಾಮೆಂಟ್ ಬಾಕ್ಸ್ ಮೂಲಕ.