Don't Miss!
- News ‘ದೇಶ ಸುರಕ್ಷಿತವಾಗಿರಲು ನರೇಂದ್ರ ಮೋದಿ ಅವರೇ ಪ್ರಧಾನಿ ಆಗಬೇಕು!’
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಕೇಶ್-ಅಕ್ಷತಾ ಹೊರಹಾಕುವಂತೆ ಮೈಸೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ
Recommended Video
ಮೈಸೂರು, ಡಿಸೆಂಬರ್ 7: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಬಿಗ್ ಬಾಸ್ ಕನ್ನಡ-6 ಕಾರ್ಯಕ್ರಮದಿಂದ ಜನತೆಗೆ ಹಾಗೂ ನೋಡುಗರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಆರೋಪಿಸಿ ಕನ್ನಡ ಕ್ರಾಂತಿ ದಳ ಇಂದು ಪ್ರತಿಭಟನೆ ನಡೆಸಿತು.
ರಾಕೇಶ್ ಎಷ್ಟೇ ಬ್ರೇನ್ ವಾಶ್ ಮಾಡಿದರೂ ಅಕ್ಷತಾ ಬಗ್ಗಲಿಲ್ಲ.!
ಅಗ್ರಹಾರ ವೃತ್ತದಲ್ಲಿ ಜಮಾಯಿಸಿ ಮಾತನಾಡಿದ ಪ್ರತಿಭಟನಾಕಾರರು, ''ಬಿಗ್ ಬಾಸ್ ನಲ್ಲಿ ಪಾಲ್ಗೊಂಡಿರುವ ಸ್ಪರ್ಧಿಗಳಾದ ಅಕ್ಷತಾ ಮತ್ತು ರಾಕೇಶ್ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಪರಂಪರೆಗೆ ವಿರುದ್ಧವಾಗಿ ನಡೆದುಕೊಳ್ಳುವುದಲ್ಲದೆ ಯುವ ಪೀಳಿಗೆಯ ಮೇಲೆ ಇದು ಪರಿಣಾಮ ಬೀರಲಿದೆ. ಭಾರತೀಯ ಪರಂಪರೆಯಲ್ಲಿ ಮದುವೆಯಾದ ಹೆಣ್ಣು ಮಕ್ಕಳು ಹೇಗೆ ನಡೆದುಕೊಳ್ಳಬೇಕೆಂದು ಎಲ್ಲರಿಗೂ ತಿಳಿದಿದೆ. ಆದರೆ ಇಡೀ ಜಗತ್ತೇ ವೀಕ್ಷಣೆ ಮಾಡುತ್ತಿರುವ ಕಾರ್ಯಕ್ರಮವೊಂದರಲ್ಲಿ ಅವರಿಬ್ಬರೂ ಅನುಚಿತವಾಗಿ ವರ್ತಿಸುತ್ತಿರುವುದು ಸರಿಯಲ್ಲ'' ಎಂದರು.
ಸುದೀಪ್ ಗೆ ಅಗೌರವ ತೋರಿದ ರಾಕೇಶ್-ಅಕ್ಷತಾ ಬಗ್ಗೆ ವೀಕ್ಷಕರು ಕೆಂಡಾಮಂಡಲ.!
''ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ಇಡೀ ವಿಶ್ವಕ್ಕೆ ಮದುವೆ ಎಂಬ ಪವಿತ್ರ ಬಂಧನವನ್ನು ಕೊಟ್ಟಿದ್ದು, ಇವರಿಬ್ಬರೂ ಅದಕ್ಕೆ ಕಿಂಚಿತ್ತು ಗೌರವ ನೀಡುತ್ತಿಲ್ಲ. ಇಬ್ಬರನ್ನು ಈ ಕಾರ್ಯಕ್ರಮದಿಂದ ಹೊರ ಹಾಕಿ'' ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸೂಕ್ಷ್ಮತೆ ಅರ್ಥೈಸಿಕೊಳ್ಳದ, ಹೇಳಿದ್ದನ್ನ ಒಪ್ಪಿಕೊಳ್ಳದ ರಾಕೇಶ್-ಅಕ್ಷತಾಗೆ ಏನನ್ನಬೇಕು.?
ಪ್ರತಿಭಟನೆಯಲ್ಲಿ ಕಾಂತ್ರಿದಳದ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸತ್ಯಪ್ಪ, ಶ್ರೀಧರ್, ನವೀನ್, ಭಾನು ಮೋಹನ್ ಸೇರಿದಂತೆ ಹಲವರು ಇದ್ದರು.