Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್' ಗೆಲ್ಲಲಿಲ್ಲ ಅಂದ್ರೇನಂತೆ, ಸುದೀಪ್ ಮನ ಗೆದ್ದ ಗಾಯಕ ನವೀನ್ ಸಜ್ಜು.!
Recommended Video
'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಲ್ಲಿನ ವೀಕ್ಷಕರ ಅಚ್ಚುಮೆಚ್ಚಿನ ಸ್ಪರ್ಧಿಗಳ ಪೈಕಿ ನವೀನ್ ಸಜ್ಜು ಕೂಡ ಒಬ್ಬರು. 'ಬಿಗ್ ಬಾಸ್' ಮನೆಯಲ್ಲಿ ಇದ್ದುಕೊಂಡು ಹಲವು ಗೀತೆಗಳನ್ನು ಹಾಡುತ್ತಾ, ವೀಕ್ಷಕರಿಗೆ ಮನೋರಂಜನೆಯನ್ನು ನೀಡುತ್ತಿದ್ದವರು ನವೀನ್ ಸಜ್ಜು. ಹೀಗಾಗಿ ಈ ಬಾರಿಯ 'ಬಿಗ್ ಬಾಸ್' ಕಾರ್ಯಕ್ರಮವನ್ನು ನವೀನ್ ಸಜ್ಜು ಗೆಲ್ಲಬಹುದು ಎಂದು ಹಲವರು ಊಹಿಸಿದ್ದರು.
ಆದರೆ, ವೀಕ್ಷಕರ ಲೆಕ್ಕಾಚಾರ ಉಲ್ಟಾಪಲ್ಟಾ ಆಯ್ತು. ಅಭಿಮಾನಿಗಳ ಆಸೆಗೆ ಬಕೆಟ್ ಗಟ್ಟಲೇ ತಣ್ಣೀರು ಎರಚಿದಂತಾಯಿತು. 'ಬಿಗ್ ಬಾಸ್' ವಿನ್ನರ್ ಆಗಬೇಕಿದ್ದ ನವೀನ್ ಸಜ್ಜು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಲ್ಲಿ 2ನೇ ಸ್ಥಾನ ಗಳಿಸಿದ ನವೀನ್ ಸಜ್ಜು ಗೆ ರನ್ನರ್ ಅಪ್ ಟ್ರೋಫಿ ಸಿಗಲಿಲ್ಲ, ಯಾವುದೇ ಬಹುಮಾನವೂ ಸಿಗಲಿಲ್ಲ. ಆದರೇನಂತೆ, ಸುದೀಪ್ ಮನ ಗೆಲ್ಲುವಲ್ಲಿ ಗಾಯಕ ನವೀನ್ ಸಜ್ಜು ಯಶಸ್ವಿಯಾಗಿದ್ದಾರೆ. ನವೀನ್ ಸಜ್ಜು ಆಸೆ ಮತ್ತು ಕನಸಿಗೆ ಬೆನ್ನೆಲುಬಾಗಿ ನಿಲ್ಲಲು ಸುದೀಪ್ ಮನಸ್ಸು ಮಾಡಿದ್ದಾರೆ. ಮುಂದೆ ಓದಿರಿ...
ನವೀನ್ ಸಜ್ಜು ಕನಸು ಏನಾಗಿತ್ತು.?
'ಬಿಗ್ ಬಾಸ್' ಗೆದ್ದರೆ ಬರುವ ಹಣದಲ್ಲಿ ಹಳ್ಳಿಗಳನ್ನು ದತ್ತು ತೆಗೆದುಕೊಳ್ಳುವುದು ಮತ್ತು ಸ್ವಂತ ಸ್ಟುಡಿಯೋ ಓಪನ್ ಮಾಡುವುದು ನವೀನ್ ಸಜ್ಜು ಕನಸಾಗಿತ್ತು. ಆದರೆ ನವೀನ್ ಸಜ್ಜು 'ಬಿಗ್ ಬಾಸ್' ಗೆಲ್ಲಲಿಲ್ಲ.
'ಮಾರ್ಡನ್ ರೈತ' ಶಶಿ ಮುಡಿಗೆ 'ಬಿಗ್ ಬಾಸ್ ಕನ್ನಡ-6' ಗೆಲುವಿನ ಗರಿ.!
ನವೀನ್ ಸಹಾಯಕ್ಕೆ ನಿಂತ ಸುದೀಪ್
''ಬಿಗ್ ಬಾಸ್' ಗೆದ್ದರೆ ಸ್ವಂತ ಸ್ಟುಡಿಯೋ ಓಪನ್ ಮಾಡುವೆ'' ಎಂದು ಟಾಸ್ಕ್ ಒಂದರಲ್ಲಿ ನವೀನ್ ಸಜ್ಜು ಹೇಳಿದ್ದು ಸುದೀಪ್ ಗೆ ಗೊತ್ತಿತ್ತು. ಹೀಗಾಗಿ ''ನವೀನ್ ಗೆ ಸಹಾಯ ಮಾಡುವೆ'' ಎಂದು 'ಬಿಗ್ ಬಾಸ್' ವೇದಿಕೆ ಮೇಲೆ ಸುದೀಪ್ ಘೋಷಿಸಿದರು.
'ಬಿಗ್ ಬಾಸ್' ನಿಮ್ಗೆ ತಲೆ ಕೆಟ್ಟಿದ್ಯಾ.? ಹೋಗಿ ಹೋಗಿ ಡವ್ ರಾಜನ್ನ ಗೆಲ್ಸಿದ್ದೀರಲ್ಲ.! ಅನ್ನದಾತರಿಗೆ ಅವಮಾನ.!
ಸುದೀಪ್ ಹೇಳಿದ್ದೇನು.?
''ನೀವು ಕನ್ನಡ ಚಿತ್ರರಂಗದ ಹೆಮ್ಮೆಯ ಸಂಗೀತ ನಿರ್ದೇಶಕರಾಗಬೇಕು. ಸ್ವಂತ ಸ್ಟುಡಿಯೋ ಮಾಡಬೇಕು ಅಂತ ಹೇಳಿದ್ರಿ. ಇದಕ್ಕಾಗಿ ನನ್ನ ಸಪೋರ್ಟ್ ನಿಮಗೆ ಇರುತ್ತದೆ. ನಿಮಗಾಗಿ ಒಂದು ಸ್ಟುಡಿಯೋ ಆಗುತ್ತೆ'' ಎಂದು ಸುದೀಪ್, ನವೀನ್ ಸಜ್ಜು ಗೆ ಭರವಸೆ ನೀಡಿದರು.
'ಬಿಗ್ ಬಾಸ್' ವೇದಿಕೆಯಲ್ಲಿ ಕಿಚ್ಚನಿಗೆ 'ಬಿಗ್' ಸರ್ಪ್ರೈಸ್: ಸುದೀಪ್ ಗೆ ಬಿ.ಎಂ.ಡಬ್ಲ್ಯೂ ಬೈಕ್ ಗಿಫ್ಟ್.!
ಭಾವುಕರಾದ ನವೀನ್ ಸಜ್ಜು
ಕಿಚ್ಚ ಸುದೀಪ್ ಆಡಿದ ಮಾತನ್ನು ಕೇಳಿ ನವೀನ್ ಸಜ್ಜು ಭಾವುಕರಾದರು. ಕಿಚ್ಚ ಸುದೀಪ್ ಗೆ ಹೃದಯಪೂರ್ವಕವಾಗಿ ನವೀನ್ ಸಜ್ಜು ಧನ್ಯವಾದ ಅರ್ಪಿಸಿದರು.