Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ಮುಂದೆ 'ಬಿಗ್ ಬಾಸ್' ಸ್ಪರ್ಧಿಗಳಿಗೆ ಸಿಗಲಿದೆ 'ಕಿಚ್ಚನ ಮೆಚ್ಚುಗೆಯ ಚಪ್ಪಾಳೆ'.!
'ಬಿಗ್ ಬಾಸ್ ಕನ್ನಡ' ಕಾರ್ಯಕ್ರಮದ ಐದು ಆವೃತ್ತಿಗಳನ್ನು ಕಿಚ್ಚ ಸುದೀಪ್ ಯಶಸ್ವಿಯಾಗಿ ನಿರೂಪಣೆ ಮಾಡಿದ್ದಾರೆ. ಆರನೇ ಆವೃತ್ತಿಯಲ್ಲೂ ಕಿಚ್ಚ ಕಮಾಲ್ ಮಾಡುತ್ತಿದ್ದಾರೆ.
ಇಲ್ಲಿಯವರೆಗೂ ಎಲ್ಲಾ ಸೀಸನ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಸ್ಪರ್ಧಿಗಳಿಗೆ ಸುದೀಪ್ ಭೇಷ್ ಎಂದಿದ್ದಾರೆ. ಆದ್ರೆ, ಇನ್ಮುಂದೆ.. ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ತೋರುವ ಸ್ಪರ್ಧಿಗಳಿಗೆ 'ಕಿಚ್ಚನ ಮೆಚ್ಚುಗೆಯ ಚಪ್ಪಾಳೆ' ಸಿಗಲಿದೆ.
ಹೌದು... 'ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದ ಬಹುದೊಡ್ಡ ವಿಶೇಷತೆ ಅಂದ್ರೆ ಇದೇ.!
ನಿವೇದಿತಾ ಗೌಡ ಕುರಿತಾದ ಅನುಮಾನಕ್ಕೆ ಕ್ಲಾರಿಟಿ ಕೊಟ್ಟ ಕಿಚ್ಚ ಸುದೀಪ್.!
''ಈ ವಾರದಿಂದ ಪ್ರತಿವಾರವೂ.. ಗಮನ ಸೆಳೆಯುವ ಆಟ ಆಡುವವರಿಗೆ, ನನ್ನ ಕಡೆಯಿಂದ ವಿಶೇಷ ಚಪ್ಪಾಳೆ ಕೊಡಬೇಕು ಅಂತ ನಾನು ಅಂದುಕೊಂಡಿದ್ದೇನೆ. ನಾಮಿನೇಷನ್, ಎಲಿಮಿನೇಷನ್, ಜನರ ವೋಟಿಂಗ್ ಗೆ ಇದು ಸಂಬಂಧ ಇಲ್ಲ. ಇದು ಬರೀ ನನಗೆ ಇಷ್ಟ ಆದ ಸ್ಪರ್ಧಿಗೆ ನಾನು ಕೊಡುವ ವಿಶೇಷ ಚಪ್ಪಾಳೆ... ಕಿಚ್ಚನ ಮೆಚ್ಚುಗೆಯ ಚಪ್ಪಾಳೆ'' ಎಂದು 'ವಾರದ ಕಥೆ ಕಿಚ್ಚನ ಜೊತೆ' ಸಂಚಿಕೆಯಲ್ಲಿ ಸುದೀಪ್ ಘೋಷಿಸಿದ್ದಾರೆ.
ಮಾತು ತಪ್ಪಿದಕ್ಕೆ ಸುದೀಪ್ ಮುಂದೆ ತಲೆ ಬಾಗಿ ಕ್ಷಮೆ ಕೇಳಿದ ಅಕ್ಷತಾ
ಕಿಚ್ಚನ ಮೆಚ್ಚುಗೆಯ ಮೊದಲ ಚಪ್ಪಾಳೆಯಂತೂ ಪಾಂಡವಪುರದ ಹುಡುಗಿ ಅಕ್ಷತಾ ಪಾಲಾಗಿದೆ. ಇನ್ಮೇಲೆ ಕಿಚ್ಚನಿಂದ ವಿಶೇಷ ಚಪ್ಪಾಳೆ ಗಿಟ್ಟಿಸಲು ಸ್ಪರ್ಧಿಗಳಲ್ಲಿ ಪೈಪೋಟಿ ಏರ್ಪಟ್ಟರೂ ಆಶ್ಚರ್ಯ ಇಲ್ಲ ಬಿಡಿ.