'ಅಸ್ಪೃಶ್ಯತೆ' ಬಗ್ಗೆ ಅವಹೇಳನ: ಚೈತ್ರ ಕೋಟೂರು ವಿರುದ್ಧ ಹೋರಾಟಕ್ಕಿಳಿದ ಅಂಬೇಡ್ಕರ್ ಸೇನೆ.!

Recommended Video

Bigg Boss Kannada 7 | Chaitra Kotur's statement has made Ambedkar Sena angry

ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟು ದಿನ 'ಬಿಗ್ ಬಾಸ್' ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ 'ಬಿಗ್ ಬಾಸ್' ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರ ಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ.

'ಬಿಗ್ ಬಾಸ್' ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಸೇನೆ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದೆ.

ಅಷ್ಟಕ್ಕೂ, ಚೈತ್ರ ಕೋಟೂರು ಏನು ಮಾಡಿದರು.? ಅಸ್ಪೃಶ್ಯತೆ ಬಗ್ಗೆ ಅವರ ಬಾಯಿಂದ ಬಂದ ಮಾತೇನು.? ಅಂಬೇಡ್ಕರ್ ಸೇನೆ ಕೋಪಿಸಿಕೊಳ್ಳಲು ಕಾರಣವೇನು ಅಂತೀರಾ.? ಸಂಪೂರ್ಣ ಮಾಹಿತಿ ಫೋಟೋ ಸ್ಲೈಡ್ ಗಳಲ್ಲಿದೆ. ಓದಿರಿ...

ಚೈತ್ರ ಕೋಟೂರು ಹೇಳಿದ್ದೇನು.?

ಚೈತ್ರ ಕೋಟೂರು ಹೇಳಿದ್ದೇನು.?

'ಬಿಗ್ ಬಾಸ್ ಕನ್ನಡ-7' ಕಾರ್ಯಕ್ರಮದಲ್ಲಿ ನಾಲ್ಕನೇ ವಾರದ ನಾಮಿನೇಷನ್ ಪ್ರಕ್ರಿಯೆ ನಡೆಯಿತು. ಓಪನ್ ನಾಮಿನೇಷನ್ ಆಗಿದ್ರಿಂದ ತಮ್ಮನ್ನ ಯಾರ್ಯಾರು ನಾಮಿನೇಟ್ ಮಾಡಿದರು ಮತ್ತು ಅವರುಗಳು ಕೊಟ್ಟ ಕಾರಣಗಳೇನು ಎಂಬುದು ಚೈತ್ರ ಕೋಟೂರುಗೆ ಸ್ಪಷ್ಟವಾಗಿ ತಿಳಿದು ಬಂತು. ನಾಮಿನೇಷನ್ ಪ್ರಕ್ರಿಯೆಯಲ್ಲಿ ಚೈತ್ರ ಕೋಟೂರು ವಿರುದ್ದ ದೀಪಿಕಾ ದಾಸ್ ವೋಟ್ ಮಾಡಿದ್ದರು. ಆ ಬಗ್ಗೆ ಹರೀಶ್ ರಾಜ್ ಬಳಿ ಚರ್ಚೆ ಮಾಡುತ್ತಿದ್ದಾಗ, ''ದೀಪಿಕಾ ದಾಸ್ ಎಲ್ಲರಿಗೂ ತಿನ್ನಿಸುತ್ತಾರೆ, ತಬ್ಬಿಕೊಳ್ಳುತ್ತಾರೆ, ಮುತ್ತು ಕೊಡುತ್ತಾರೆ. ನನ್ನ ಮಾತ್ರ ಮುಟ್ಟಲ್ಲ. ಏನು Untouchables ನಾವು.? ಅಸ್ಪೃಶ್ಯರಾ ನಾವು..'' ಎಂದು ನಗುತ್ತಾರೆ. ಇದು ನೆಟ್ಟಿಗರನ್ನು ಕೆರಳಿಸಿದೆ. ಅಂಬೇಡ್ಕರ್ ಸೇನೆಯ ಆಕ್ರೋಶಕ್ಕೆ ಚೈತ್ರ ಕೋಟೂರು ರವರ ಈ ಮಾತೇ ಕಾರಣವಾಗಿದೆ.

ಹೋರಾಟಕ್ಕೆ ಕರೆ ನೀಡಿದ ಅಂಬೇಡ್ಕರ್ ಸೇನೆ

ಹೋರಾಟಕ್ಕೆ ಕರೆ ನೀಡಿದ ಅಂಬೇಡ್ಕರ್ ಸೇನೆ

ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ ಚೈತ್ರ ಕೋಟೂರು ವಿರುದ್ಧ ಬೀದರ್ ಜಿಲ್ಲೆಯ ಅಂಬೇಡ್ಕರ್ ಸೇನೆ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದೆ. ಅಸ್ಪೃಶ್ಯತೆ ವಿರುದ್ಧ ಹಗುರವಾಗಿ ಮಾತನಾಡಿದ ಚೈತ್ರ ಕೋಟೂರುಗೆ ಬುದ್ಧಿ ಕಲಿಸಲು ನವೆಂಬರ್ 9 ರಂದು ಬಿಡದಿ ಬಳಿಯ ಬಿಗ್ ಬಾಸ್ ಮನೆ ಮುಂದೆ ಪ್ರತಿಭಟನೆ ನಡೆಸಲು ಅಂಬೇಡ್ಕರ್ ಸೇನೆ ಸಜ್ಜಾಗಿದೆ.

ಕೀಳು ಮನಸ್ಥಿತಿಯ ಪ್ರತಿರೂಪ

ಕೀಳು ಮನಸ್ಥಿತಿಯ ಪ್ರತಿರೂಪ

ಅಸ್ಪೃಶ್ಯತೆ ಬಗೆಗಿನ ಮಾತುಗಳು ಆಕೆಯ ಕೀಳು ಮನಸ್ಥಿತಿಯ ಪ್ರತಿರೂಪ ಎಂದು ನೆಟ್ಟಿಗರೊಬ್ಬರು ಚೈತ್ರ ಕೋಟೂರುಗೆ ಛೀಮಾರಿ ಹಾಕಿದ್ದಾರೆ. ''ದೊಡ್ಡ ಬರಹಗಾರ್ತಿ ಆಗಿ, ನಟಿಯಾಗಿ ಆಕೆ ಈ ಮಾತು ಹೇಳಬಾರದಿತ್ತು. ಹೇಳಿದ ಮೇಲೆ ಸಂವೇದನಾಶೀಲ ಬರಹಗಾರ್ತಿಗೆ ಸ್ವಲ್ಪ ಅಳುಕಾಗಬೇಕಿತ್ತು. ತನ್ನ ಬಗ್ಗೆ ನಾಚಿಕೆಯಾಗಬೇಕಿತ್ತು'' ಎಂಬುದು ದಿವಾಕರ್ ಆಜಾದ್ ಅವರ ಅಭಿಪ್ರಾಯ.

ಈ ಕೂಡಲೆ ಹೊರಗೆ ಹಾಕಿ...

ಈ ಕೂಡಲೆ ಹೊರಗೆ ಹಾಕಿ...

ಚೈತ್ರ ಕೋಟೂರು ಅವರನ್ನು ಈ ಕೂಡಲೆ ಹೊರಗೆ ಹಾಕಿ. ಇಲ್ಲದಿದ್ದರೆ ಬಿಗ್ ಬಾಸ್ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದಾಗಿ ಕೆಲ ಸಂಘಟನೆಗಳು ಎಚ್ಚರಿಕೆ ಕೊಟ್ಟಿವೆ. ಇದನ್ನ 'ಬಿಗ್ ಬಾಸ್' ಗಂಭೀರವಾಗಿ ಪರಿಗಣಿಸುತ್ತಾರಾ.? ಚೈತ್ರ ಕೋಟೂರು ರವರಿಂದ 'ಬಿಗ್ ಬಾಸ್' ಕ್ಷಮೆ ಕೇಳಿಸುತ್ತಾರಾ.? ಇಲ್ಲದಿದ್ದರೆ ಈ ವಿವಾದ ಎಲ್ಲಿಗೆ ಹೋಗಿ ತಲುಪುತ್ತೋ.?

More from Filmibeat

English summary
Bigg Boss Kannada 7: Ambedkar Sene is annoyed with Chaitra Kotur for her comments on Untouchables.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X