Don't Miss!
- News ರಜನಿಕಾಂತ್, ವಿಜಯ್ ಸೇತುಪಥಿ, ಧನುಷ್.. ಯಾರೆಲ್ಲಾ ವೋಟ್ ಹಾಕಿದ್ರು?
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ಗೆ ಸಿಟ್ಟು ತರಿಸಿದ ಚೈತ್ರ ಕೋಟೂರು.!
ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ, ಬರಹಗಾರ್ತಿ ಆಗಿ ಚೈತ್ರ ಕೋಟೂರು ಗುರುತಿಸಿಕೊಂಡಿದ್ದಾರೆ. 'ಬಿಗ್ ಬಾಸ್' ಮನೆಯಲ್ಲಂತೂ ಚೈತ್ರ ಕೋಟೂರು ಗಲಾಟೆಗಳಿಂದಲೇ ಫೇಮಸ್ ಆಗಿದ್ದಾರೆ.
'ಬಿಗ್ ಬಾಸ್' ಮನೆಯೊಳಗೆ ಕಾಲಿಡುತ್ತಿದ್ದಂತೆಯೇ ನಾಮಿನೇಟ್ ಆದ ಚೈತ್ರ ಕೋಟೂರು, ಶೈನ್ ಶೆಟ್ಟಿ ಜೊತೆ ಲವ್ ಆಂಗಲ್ ಆರಂಭಿಸಿದರು. ಬಳಿಕ ಮದುವೆ ಕಥೆ, ಆಪಲ್ ಕಿತ್ತಾಟದಿಂದ ಫುಟೇಜ್ ಪಡೆದ ಚೈತ್ರ ಕೋಟೂರು ಮೂರನೇ ವಾರ ಸೇಫ್ ಆಗಿದ್ದಾರೆ.
ಮೂರನೇ ವಾರ ನಾಮಿನೇಟ್ ಆಗದ ಕಾರಣಕ್ಕೋ ಏನೋ.. ಚೈತ್ರ ಕೋಟೂರು ಸೈಲೆಂಟ್ ಆಗಿ ಸೈಡ್ ನಲ್ಲಿದ್ದರು. ಇದನ್ನೇ ಕಿಚ್ಚ ಸುದೀಪ್ 'ವಾರದ ಕಥೆ ಕಿಚ್ಚನ ಜೊತೆ' ಸಂಚಿಕೆಯಲ್ಲಿ ಪ್ರಶ್ನಿಸಿದರು.
ಸುದೀಪ್ ಅರಿವಿಗೆ ಬಂತು ಚೈತ್ರ ಕೋಟೂರು ಗೇಮ್ ಪ್ಲಾನ್.!
ಆಗ, ''ಎರಡು ವಾರ ನಾನು ನಾಮಿನೇಟ್ ಆಗಿದ್ದರಿಂದ ಒಂದು ಆಸೆ ಬಂದಿತ್ತು. ಒಂದು ವಾರ ನಾಮಿನೇಟ್ ಆಗದೇ ಇರಬೇಕು ಅಂತ ತುಂಬಾ ಅನಿಸಿತ್ತು. ನನ್ನ ಇಚ್ಛೆಯಂತೆ ಈ ವಾರ ಆಯ್ತು. ಈ ವಾರ ನಾನು ಹೆಚ್ಚು ತೊಡಗಿಸಿಕೊಳ್ಳುವುದಕ್ಕಿಂತ ಎಲ್ಲರನ್ನೂ ಗಮನಿಸುತ್ತಿದ್ದೆ'' ಎಂದು ಚೈತ್ರ ಕೋಟೂರು ವಾದ ಮಾಡಿದರು.
'ಮಜಾ'ಕ್ಕಾಗಿ ಚೈತ್ರ ಕೋಟೂರು ಹೀಗೆಲ್ಲ ಮಾಡ್ತಿದ್ದಾರಾ.?
''ವ್ಯತ್ಯಾಸ ಎದ್ದು ಕಾಣುತ್ತಿದೆ'' ಅಂತ ಸುದೀಪ್ ತಮ್ಮ ಅಭಿಪ್ರಾಯವನ್ನು ಹೇಳುವಷ್ಟರಲ್ಲಿ ಪದೇ ಪದೇ ಚೈತ್ರ ಕೋಟೂರು ಕೈ ಎತ್ತುತ್ತಿದ್ದರು. ಇದರಿಂದ ಸಿಟ್ಟಿಗೆದ್ದ ಸುದೀಪ್ ಮೊದಲು ಚೈತ್ರ ಕೋಟೂರು ಅವರನ್ನ ಮಾತನಾಡಲು ಬಿಟ್ಟು ಕೊನೆಗೆ ''ಬೇರೆಯವರಿಗೆ ಪೂರ್ತಿ ಮಾತನಾಡಲು ನೀವು ಅವಕಾಶವೇ ಕೊಡಲ್ಲ. ಇದು ಸರಿಯಲ್ಲ'' ಎನ್ನುತ್ತ ಸುದೀಪ್ ಸಿಟ್ಟು ಮಾಡಿಕೊಂಡರು.
ಇದು ಕಾಳ್ ಹಾಕ್ತಿರೋದಾ ಇಲ್ಲ ಗೇಮ್ ಸ್ಟ್ರಾಟೆಜಿನಾ.? ಚೈತ್ರ ತಲೆಯಲ್ಲಿ ಏನಿದೆ.?
ತಮ್ಮನ್ನ ತಾವು ಎಷ್ಟೇ ಸಮರ್ಥಿಸಿಕೊಂಡರೂ, ಚೈತ್ರ ಕೋಟೂರು ಗೇಮ್ ಪ್ಲಾನ್ ಮಾತ್ರ ವೀಕ್ಷಕರಿಗೆ ಗೊತ್ತಾಗಿದೆ.