Don't Miss!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್ ಕನ್ನಡ-7': ಮೊದಲ ವಾರವೇ ಔಟ್ ಆದ ಗುರುಲಿಂಗ ಸ್ವಾಮೀಜಿ
'ಬಿಗ್ ಬಾಸ್ ಕನ್ನಡ-7' ಕಾರ್ಯಕ್ರಮದ ಮೊದಲ ವಾರ ಗುರುಲಿಂಗ ಸ್ವಾಮೀಜಿ ಔಟ್ ಆಗಿದ್ದಾರೆ. 'ಬಿಗ್ ಬಾಸ್' ಮನೆಯಲ್ಲಿ ಬಹುತೇಕ ಸೈಲೆಂಟ್ ಆಗಿದ್ದ ಗುರುಲಿಂಗ ಸ್ವಾಮೀಜಿ ಮಡಿ-ಮೈಲಿಗೆ ಬಗ್ಗೆ ಹೆಚ್ಚು ಗಮನ ಕೊಟ್ಟರು ಅನ್ನೋದು ಬಿಟ್ಟರೆ ಯಾವುದೇ ವಿವಾದಕ್ಕೆ, ಜಗಳಕ್ಕೆ ಸಾಕ್ಷಿ ಆಗಲಿಲ್ಲ.
ಟಾಸ್ಕ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ, ಗುರುಲಿಂಗ ಸ್ವಾಮೀಜಿಗೆ ಅದ್ಯಾಕೋ ವೀಕ್ಷಕರಿಂದ ಬೆಂಬಲ ವ್ಯಕ್ತವಾಗಿಲ್ಲ. 'ಬಿಗ್ ಬಾಸ್' ಕಡೆಯಿಂದ ಬರುವ ಹಣವನ್ನು ನೆರೆ ಪರಿಹಾರಕ್ಕೆ ನೀಡುವುದಾಗಿ ಗುರುಲಿಂಗ ಸ್ವಾಮೀಜಿ ಘೋಷಿಸಿದ್ದರು. ಆದರೆ ಒಂದೇ ವಾರಕ್ಕೆ ಗುರುಲಿಂಗ ಸ್ವಾಮೀಜಿ ಹೊರಬಂದಿರುವುದು ಬೇಸರದ ಸಂಗತಿ.
ಬಿಗ್ ಬಾಸ್: ಮೊದಲ ದಿನವೇ ರವಿ ಬೆಳಗೆರೆಗೆ ಶಾಕ್.!
ಗುರುಲಿಂಗ ಸ್ವಾಮೀಜಿ ಪ್ರಸ್ತುತ ಅಗಡಿ ಅಕ್ಕಿ ಮಠದ ಪೀಠಾಧಿಪತಿ. ಇಲ್ಲಿಯವರೆಗೂ 'ಬಿಗ್ ಬಾಸ್' ಶೋ ನೋಡದ ಸ್ವಾಮೀಜಿ, ಒಂದೊಳ್ಳೆ ಉದ್ದೇಶ ಇಟ್ಟುಕೊಂಡು 'ಬಿಗ್ ಬಾಸ್' ಮನೆಯೊಳಗೆ ಬಂದಿದ್ದರು. ಆದರೆ ಮೊದಲ ವಾರಕ್ಕೆ ಅವರ ಜರ್ನಿ ಮುಕ್ತಾಯಗೊಂಡಿದೆ.
ಅಂದ್ಹಾಗೆ, ಮೊದಲ ವಾರ 'ಬಿಗ್ ಬಾಸ್' ಮನೆಯಿಂದ ಹೊರಗೆ ಹೋಗಲು ಆರು ಮಂದಿ ನಾಮಿನೇಟ್ ಆಗಿದ್ದರು. ಗುರುಲಿಂಗ ಸ್ವಾಮೀಜಿ ಜೊತೆಗೆ ಚೈತ್ರ ವಾಸುದೇವನ್, ಚೈತ್ರ ಕೊಟ್ಟೂರ್, ರಾಜು ತಾಳಿಕೋಟೆ, ಕುರಿ ಪ್ರತಾಪ್ ಮತ್ತು ರವಿ ಬೆಳಗೆರೆ ಡೇಂಜರ್ ಝೋನ್ ನಲ್ಲಿದ್ದರು.
ಬಿಗ್ ಬಾಸ್ ಮನೆಗೆ ಬಂದಿರುವ ಗುರುಲಿಂಗ ಸ್ಮಾಮೀಜಿ ಯಾರು?
ಅನಾರೋಗ್ಯದ ಕಾರಣ ವೈದ್ಯರ ಸಲಹೆ ಮೇರೆಗೆ ರವಿ ಬೆಳಗೆರೆ ಯವರನ್ನ ಆಟದಲ್ಲಿ ಮುಂದುವರೆಸದಿರಲು 'ಬಿಗ್ ಬಾಸ್' ನಿರ್ಧರಿಸಿದರು. ಹೀಗಾಗಿ ಸ್ಪರ್ಧಿಯಾಗಿದ್ದ ರವಿ ಬೆಳಗೆರೆ ಸ್ಥಾನ ಅತಿಥಿಯಾಗಿ ಬದಲಾಯಿತು. ಉಳಿದ ಐದು ಮಂದಿಯ ಪೈಕಿ ಗುರುಲಿಂಗ ಸ್ವಾಮೀಜಿ ಅವರಿಗೆ ಕಮ್ಮಿ ವೋಟ್ಸ್ ಬಂದ ಪರಿಣಾಮ ಎವಿಕ್ಟ್ ಮಾಡಲಾಗಿದೆ.
ಅತ್ತ ಗೆಸ್ಟ್ ಆಗಿದ್ದ ರವಿ ಬೆಳಗೆರೆ ಕೂಡ 'ಬಿಗ್ ಬಾಸ್' ಮನೆಯಿಂದ ಹೊರಬಂದಿದ್ದಾರೆ.