Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್ ಕನ್ನಡ-7': ಮೊದಲ ವಾರವೇ ಔಟ್ ಆದ ಗುರುಲಿಂಗ ಸ್ವಾಮೀಜಿ
'ಬಿಗ್ ಬಾಸ್ ಕನ್ನಡ-7' ಕಾರ್ಯಕ್ರಮದ ಮೊದಲ ವಾರ ಗುರುಲಿಂಗ ಸ್ವಾಮೀಜಿ ಔಟ್ ಆಗಿದ್ದಾರೆ. 'ಬಿಗ್ ಬಾಸ್' ಮನೆಯಲ್ಲಿ ಬಹುತೇಕ ಸೈಲೆಂಟ್ ಆಗಿದ್ದ ಗುರುಲಿಂಗ ಸ್ವಾಮೀಜಿ ಮಡಿ-ಮೈಲಿಗೆ ಬಗ್ಗೆ ಹೆಚ್ಚು ಗಮನ ಕೊಟ್ಟರು ಅನ್ನೋದು ಬಿಟ್ಟರೆ ಯಾವುದೇ ವಿವಾದಕ್ಕೆ, ಜಗಳಕ್ಕೆ ಸಾಕ್ಷಿ ಆಗಲಿಲ್ಲ.
ಟಾಸ್ಕ್ ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ, ಗುರುಲಿಂಗ ಸ್ವಾಮೀಜಿಗೆ ಅದ್ಯಾಕೋ ವೀಕ್ಷಕರಿಂದ ಬೆಂಬಲ ವ್ಯಕ್ತವಾಗಿಲ್ಲ. 'ಬಿಗ್ ಬಾಸ್' ಕಡೆಯಿಂದ ಬರುವ ಹಣವನ್ನು ನೆರೆ ಪರಿಹಾರಕ್ಕೆ ನೀಡುವುದಾಗಿ ಗುರುಲಿಂಗ ಸ್ವಾಮೀಜಿ ಘೋಷಿಸಿದ್ದರು. ಆದರೆ ಒಂದೇ ವಾರಕ್ಕೆ ಗುರುಲಿಂಗ ಸ್ವಾಮೀಜಿ ಹೊರಬಂದಿರುವುದು ಬೇಸರದ ಸಂಗತಿ.
ಬಿಗ್ ಬಾಸ್: ಮೊದಲ ದಿನವೇ ರವಿ ಬೆಳಗೆರೆಗೆ ಶಾಕ್.!
ಗುರುಲಿಂಗ ಸ್ವಾಮೀಜಿ ಪ್ರಸ್ತುತ ಅಗಡಿ ಅಕ್ಕಿ ಮಠದ ಪೀಠಾಧಿಪತಿ. ಇಲ್ಲಿಯವರೆಗೂ 'ಬಿಗ್ ಬಾಸ್' ಶೋ ನೋಡದ ಸ್ವಾಮೀಜಿ, ಒಂದೊಳ್ಳೆ ಉದ್ದೇಶ ಇಟ್ಟುಕೊಂಡು 'ಬಿಗ್ ಬಾಸ್' ಮನೆಯೊಳಗೆ ಬಂದಿದ್ದರು. ಆದರೆ ಮೊದಲ ವಾರಕ್ಕೆ ಅವರ ಜರ್ನಿ ಮುಕ್ತಾಯಗೊಂಡಿದೆ.
ಅಂದ್ಹಾಗೆ, ಮೊದಲ ವಾರ 'ಬಿಗ್ ಬಾಸ್' ಮನೆಯಿಂದ ಹೊರಗೆ ಹೋಗಲು ಆರು ಮಂದಿ ನಾಮಿನೇಟ್ ಆಗಿದ್ದರು. ಗುರುಲಿಂಗ ಸ್ವಾಮೀಜಿ ಜೊತೆಗೆ ಚೈತ್ರ ವಾಸುದೇವನ್, ಚೈತ್ರ ಕೊಟ್ಟೂರ್, ರಾಜು ತಾಳಿಕೋಟೆ, ಕುರಿ ಪ್ರತಾಪ್ ಮತ್ತು ರವಿ ಬೆಳಗೆರೆ ಡೇಂಜರ್ ಝೋನ್ ನಲ್ಲಿದ್ದರು.
ಬಿಗ್ ಬಾಸ್ ಮನೆಗೆ ಬಂದಿರುವ ಗುರುಲಿಂಗ ಸ್ಮಾಮೀಜಿ ಯಾರು?
ಅನಾರೋಗ್ಯದ ಕಾರಣ ವೈದ್ಯರ ಸಲಹೆ ಮೇರೆಗೆ ರವಿ ಬೆಳಗೆರೆ ಯವರನ್ನ ಆಟದಲ್ಲಿ ಮುಂದುವರೆಸದಿರಲು 'ಬಿಗ್ ಬಾಸ್' ನಿರ್ಧರಿಸಿದರು. ಹೀಗಾಗಿ ಸ್ಪರ್ಧಿಯಾಗಿದ್ದ ರವಿ ಬೆಳಗೆರೆ ಸ್ಥಾನ ಅತಿಥಿಯಾಗಿ ಬದಲಾಯಿತು. ಉಳಿದ ಐದು ಮಂದಿಯ ಪೈಕಿ ಗುರುಲಿಂಗ ಸ್ವಾಮೀಜಿ ಅವರಿಗೆ ಕಮ್ಮಿ ವೋಟ್ಸ್ ಬಂದ ಪರಿಣಾಮ ಎವಿಕ್ಟ್ ಮಾಡಲಾಗಿದೆ.
ಅತ್ತ ಗೆಸ್ಟ್ ಆಗಿದ್ದ ರವಿ ಬೆಳಗೆರೆ ಕೂಡ 'ಬಿಗ್ ಬಾಸ್' ಮನೆಯಿಂದ ಹೊರಬಂದಿದ್ದಾರೆ.