Don't Miss!
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಘು ಗೌಡಗೆ ಬಿಗ್ ಗಿಫ್ಟ ಕೊಟ್ಟು ಮನೆಯಿಂದ ಹೊರಬಂದ ಧನುಶ್ರೀ
'ಬಿಗ್ ಬಾಸ್ ಕನ್ನಡ 8'ರಿಂದ ಮೊದಲ ಸ್ಪರ್ಧಿ ಮನೆಯಿಂದ ಹೊರಬಂದಿದ್ದಾರೆ. ಈ ಬಾರಿ ಬಿಗ್ ಬಾಸ್ ಗೆ ಮೊದಲ ಸ್ಪರ್ಧಿಯಾಗಿ ಧನುಶ್ರೀ ಮನೆಯೊಳಗೆ ಕಾಲಿಟ್ಟಿದ್ದರು. ಆದರೆ ಧನುಶ್ರೀ ಮನೆಯೊಳಗೆ ಹೋದ ವೇಗದಲ್ಲೇ ಹೊರಬಂದಿದ್ದಾರೆ.
Recommended Video
ಟಿಕ್ ಟಾಕ್ ಸ್ಟಾರ್ ಆಗಿದ್ದ ಧನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗಿದ್ದವರು. ಬಿಗ್ ಮನೆಯಲ್ಲೂ ಧನುಶ್ರೀ ಅವರಿಂದ ಸಿಕ್ಕಾಪಟ್ಟೆ ಮನರಂಜನೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಮೊದಲ ವಾರದಲ್ಲೇ ಧನುಶ್ರೀ ಮನೆಯವರ ಮತ್ತು ಪ್ರೇಕ್ಷಕರ ಮನಗೆಲ್ಲುವಲ್ಲಿ ವಿಫಲರಾಗಿದ್ದಾರೆ.
ಬಿಗ್ಬಾಸ್ ಕನ್ನಡ 8 ರಿಂದ ಹೊರ ಹೋದ ಮೊದಲ ಸ್ಪರ್ಧಿ ಧನುಶ್ರಿ
ಈ ಬಾರಿ ಮನೆಯಿಂದ ಧನುಶ್ರೀ ಹೊರ ಬಂದಿದ್ದಾರೆ. ನಿರ್ಮಲಾ, ರಘು ಗೌಡ ಮತ್ತು ಧನುಶ್ರೀ ಈ ವಾರ ಮನೆಯಿಂದ ಹೊರಬರಲು ನಾಮಿನೇಟ್ ಆಗಿದ್ದರು. ಕೊನೆಯದಾಗಿ ಬಿಗ್ ಮನೆಯಿಂದ ಧನುಶ್ರೀ ಹೊರಬಂದಿದ್ದಾರೆ. ಬರುವಾಗ ಬಿಗ್ ಬಾಸ್ ನೀಡಿದ ವಿಶೇಷ ಅಧಿಕಾರವನ್ನು ಬಳಿಸಿಕೊಂಡು ಧನುಶ್ರೀ ರಘು ಗೌಡ ಅವರಿಗೆ ವಿಶೇಷ ಗಿಫ್ಟ್ ನೀಡಿದ್ದಾರೆ.
ಈ ವಾರ ಬಿಗ್ ಬಾಸ್ ನಾಮಿನೇಷನ್ ನಿಂದ ರಘು ಗೌಡ ಅವರನ್ನು ಬಚಾವ್ ಮಾಡಿದ್ದಾರೆ. ಈ ಮೂಲಕ ರಘು ಗೌಡ ಈ ವಾರ ನೇಮಿನೇಷನ್ ನಿಂದ ಸೇಫ್ ಆಗಿದ್ದಾರೆ.
ಮೊದಲ ವಾರದಲ್ಲೇ ಧನುಶ್ರೀ ಕಳಪೆ ಪ್ರದರ್ಶನ ನೀಡಿ ಜೈಲು ಸೇರಿದ್ದರು. ಈ ಬಾರಿಯ ಬಿಗ್ ಬಾಸ್ ನಲ್ಲಿ ಜೈಲು ಸೇರಿದ ಮೊದಲ ಸ್ಪರ್ಧಿ ಧನುಶ್ರೀ ಆಗಿದ್ದರು. ಮೇಕಪ್ ವಿಚಾರಕ್ಕೆ ಧನುಶ್ರೀ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಮನೆಯೊಳಗೂ ಮೇಕಪ್ ವಿಚಾರವಾಗಿ ಉಳಿದ ಸ್ಪರ್ಧಿಗಳು ಕಾಲೆಳೆಯುತ್ತಿದ್ದರು. ಆದರೆ ಧನುಶ್ರೀ ಯಾವುದಕ್ಕೂ ತಲೆಕೆಡಿಸಿಕೊಂಡಿರಲಿಲ್ಲ. ಸದ್ಯ ಮನೆಯಲ್ಲಿ 16 ಸ್ಪರ್ಧಿಗಳಿದ್ದು ಮುಂದಿನ ವಾರ ಯಾರು ಮನೆಯಿಂದ ಹೊರಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.