Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ಬಾಸ್ ಕನ್ನಡ 8 ರಿಂದ ಹೊರ ಹೋದ ಮೊದಲ ಸ್ಪರ್ಧಿ ಧನುಶ್ರಿ
ಬಿಗ್ ಬಾಸ್ ಕನ್ನಡ 8 ರ ಮೊದಲ ವಾರ ಒಬ್ಬ ಸ್ಪರ್ಧಿ ಹೊರಗೆ ಹೋಗಿದ್ದಾರೆ. ಬಿಗ್ಬಾಸ್ ಸೀಸನ್ನ ಮೊದಲ ಎಲಿಮಿನೇಶನ್ನಲ್ಲಿ ಟಿಕ್ಟಾಕ್ ಸ್ಟಾರ್ ಧನುಶ್ರಿ ಮನೆಯಿಂದ ಹೊರಗೆ ಹೋಗಿದ್ದಾರೆ.
Recommended Video
ಮೊದಲ ವಾರ ಐದು ಮಂದಿ ನಾಮಿನೇಟ್ ಆಗಿದ್ದರು, ನಿರ್ಮಲಾ, ರಘು ಗೌಡ, ವಿಶ್ವ ಹಾಗೂ ಶುಭಾ ಪೂಂಜಾ. ಇದರಲ್ಲಿ ಶನಿವಾರದ ಎಪಿಸೋಡ್ನಲ್ಲಿ ಶುಭಾ ಪೂಂಜಾ ಹಾಗೂ ವಿಶ್ವ ಅವರುಗಳು ಸೇಫ್ ಆಗಿದ್ದರು.
ಭಾನುವಾರದ ಸಂಚಿಕೆ ಆರಂಭಿಸಿದ ಸುದೀಪ್ ಅವರು ಮೊದಲು ರಘು ಗೌಡ ಅವರನ್ನು ಸೇಫ್ ಮಾಡಿದರು. ಆ ನಂತರ ಉಳಿದ ಇಬ್ಬರಲ್ಲಿ ಧನುಶ್ರಿ ಅವರನ್ನು ಹೊರಗೆ ಹೋಗಲು ಬಿಗ್ಬಾಸ್ ಸೂಚಿಸಿದರು ಅಂತೆಯೇ ಧನುಶ್ರಿ ಮೊದಲ ಸ್ಪರ್ಧಿಯಾಗಿ ಹೊರಗೆ ಬಂದರು.
ಹೊರಗೆ ಹೋಗುವ ಮುನ್ನ ಧನುಶ್ರಿ ಅವರಿಗೆ ವಿಶೇಷ ಅಧಿಕಾರವೊಂದನ್ನು ಬಿಗ್ಬಾಸ್ ನೀಡಿದರು. ಒಬ್ಬರನ್ನು ನಾಮಿನೇಷನ್ನಿಂದ ಉಳಿಸುವ ಅಧಿಕಾರ ನೀಡಿದರು. ಆ ಅಧಿಕಾರವನ್ನು ಬಳಸಿಕೊಂಡ ಧನುಶ್ರಿ ಅವರು ರಘು ಗೌಡ ಅವರನ್ನು ನಾಮಿನೇಷನ್ ನಿಂದ ಉಳಿಸಿದರು.
ಟಿಕ್ಟಾಕ್ ಸ್ಟಾರ್ ಆಗಿದ್ಧ ಧನುಶ್ರಿ ಅವರು ಒಳ್ಳೆಯ ಸ್ಪರ್ಧಿ ಎಂದೇ ಎಣಿಸಲಾಗಿತ್ತು. ಆದರೆ ಅವರು ಮೊದಲನೇಯ ವಾರದಲ್ಲಿಯೇ ಮನೆಯಿಂದ ಹೊರಗೆ ಹೋಗಿದ್ದಾರೆ.
ಶುಭಾ ಪೂಂಜಾ ಅವರು ಬಿಗ್ಬಾಸ್ ಮನೆಯಿಂದ ಹೊರಗೆ ಹೋಗುತ್ತಾರೆ ಎಂದು ಸುದ್ದಿಗಳು ಹರಿದಾಡಿತ್ತು, ಆದರೆ ಧನುಶ್ರಿ ಅವರು ಮೊದಲನೇ ಸ್ಪರ್ಧಿ ಆಗಿ ಹೊರಹೋಗಿದ್ದಾರೆ.