Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಅವತಾರದಲ್ಲಿ ಸುದೀಪ್: ಬಿಗ್ ಬಾಸ್ ಭವಿಷ್ಯ ಹೇಳಲು ಬಂದ್ರು ಕಿಚ್ಚ ಜೋಯಿಸರು
ದುಬೈನಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿಚ್ಚ ಸುದೀಪ್ ತಮ್ಮ ಗೆಟಪ್ ಬದಲಾಯಿಸಿಕೊಂಡಿದ್ದಾರೆ. ಸ್ವಾಮೀಜಿ ಅವತಾರ ತಾಳಿ ಭವಿಷ್ಯ ಹೇಳಲು ಕೂತಿದ್ದಾರೆ. ಯಾರ ಭವಿಷ್ಯ ಹೇಳ್ತಾರೋ ಇಲ್ವೋ ಸದ್ಯಕ್ಕೆ ಬಿಗ್ ಬಾಸ್ ಭವಿಷ್ಯ ಮಾತ್ರ ಹೇಳಲಿದ್ದಾರೆ.
ಕಲರ್ಸ್ ಕನ್ನಡ ವಾಹಿನಿ ಸುದೀಪ್ ಅವರ ಹೊಸ ಫೋಟೋ ಹಂಚಿಕೊಂಡಿದೆ. ಈ ಫೋಟೋದಲ್ಲಿ ಸುದೀಪ್ ಅವರು ಜ್ಯೋತಿಷಿಗಳಂತೆ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ.
Exclusive: ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಆರಂಭದ ದಿನಾಂಕ ಬಹಿರಂಗ?
ಅಭಿನಯ ಚಕ್ರವರ್ತಿಯ ಸ್ವಾಮೀಜಿ ಗೆಟಪ್ನ ಫೋಟೋ ಶೇರ್ ಮಾಡಿರುವ ಕಲರ್ಸ್ ಕನ್ನಡ ''ಲಾಕ್ ಡೌನ್ 8.0ಗೆ ಕಿಚ್ಚ ಜೋಯಿಸರು ಇಟ್ಟಿರೋ ಮುಹೂರ್ತ ಯಾವುದು? ಗೆಸ್ ಮಾಡಿ'' ಎಂದು ಪೋಸ್ಟ್ ಹಾಕಿದೆ.
ಅಂದ್ಹಾಗೆ, ಬಿಗ್ ಬಾಸ್ ಹೊಸ ಆವೃತ್ತಿ ಯಾವಾಗ ಆರಂಭವಾಗುತ್ತದೆ ಎಂಬುದರ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡದ ವಾಹಿನಿ, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ಸದ್ಯದ ಮಾಹಿತಿ ಪ್ರಕಾರ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಫೆಬ್ರವರಿ 28 ರಂದು ಆರಂಭವಾಗಲಿದೆ. ಈಗಾಗಲೇ ಸ್ಪರ್ಧಿಗಳ ಆಯ್ಕೆ ಸಹ ಮುಗಿದಿದೆ. ಅಂತಿಮವಾಗಿ ಆಯ್ಕೆಯಾದ ಸ್ಪರ್ಧಿಗಳನ್ನು ಕೆಲವು ದಿನ ಕ್ವಾರಂಟೈನ್ಗೆ ಒಳಪಡಿಸಲಾಗುವುದು. ಆ ಬಳಿಕ ದೊಡ್ಮನೆಗೆ ಪ್ರವೇಶ ನೀಡಲಾಗುವುದು.