Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಗ್ ಬಾಸ್ ನಲ್ಲಿ ಇಬ್ಬರ ನಡುವೆ ಅಸಲಿ ಪೈಪೋಟಿ
ಇದ್ದದ್ದನ್ನು ಇದ್ದಂಗೆ ತೋರಿಸುತ್ತಿರುವ ಒನ್ ಅಂಡ್ ಓನ್ಲಿ ರಿಯಾಲಿಟಿ ಶೋ 'ಬಿಗ್ ಬಾಸ್' ಶೋಗೆ ತೆರೆಬೀಳಲು ಇನ್ನು ಎರಡೇ ಎರಡು ದಿನ ಬಾಕಿ ಇದೆ. ಮೊದಲ ಸೀಸನ್ ನಲ್ಲಿ ಗೆಲುವು ಯಾರಿಗೆ ಎಂಬ ಬಗ್ಗೆ ತೀವ್ರ ಕುತೂಹಲ ನೆಲೆಸಿದೆ.
ಕಣದಲ್ಲಿ ನಾಲ್ಕು ಮಂದಿ ಉಳಿದಿದ್ದಾರೆ. ವಿಜಯ್ ರಾಘವೇಂದ್ರ, ಅರುಣ್ ಸಾಗರ್, ನರೇಂದ್ರ ಬಾಬು ಶರ್ಮಾ ಹಾಗೂ ನಿಕಿತಾ. ಮೂಲಗಳ ಪ್ರಕಾರ ಅಸಲಿ ಪೈಪೋಟಿ ಇರುವುದು ಅರುಣ್ ಸಾಗರ್ ಹಾಗೂ ವಿಜಯ್ ರಾಘವೇಂದ್ರ ನಡುವೆ ಎನ್ನಲಾಗಿದೆ.
ಇನ್ನು ನಿಕಿತಾ ಹಾಗೂ ನರೇಂದ್ರ ಬಾಬು ಶರ್ಮಾ ಕೆಲವು ವಿಚಾರಗಳಲ್ಲಿ ಸೋತಿದ್ದಾರೆ. ನಿಕಿತಾ ಅವರಿಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂಬ ದೊಡ್ಡ ಅಪವಾದ ಇದೆ. ಈ ಅಪವಾದಕ್ಕೆ ತಕ್ಕಂತೆ ಅವರು ನಡೆದುಕೊಂಡಿದ್ದಾರೆ. ಇನ್ನು ಬ್ರಹ್ಮಾಂಡ ಶರ್ಮಾ ಅವರು ಮನೆಯಲ್ಲಿ ಬಹುತೇಕ ಸಮಯವನ್ನು ನಿದ್ದೆಯಲ್ಲೇ ಕಳೆದಿದ್ದಾರೆ.
ಕೆಲವೊಂದು ಟಾಸ್ಕ್ ಗಳಲ್ಲಿ ಬ್ರಹ್ಮಾಂಡ ಶರ್ಮಾ ಭಾಗವಹಿಸದೇ ಇರುವುದು. ಮೂರು ತಿಂಗಳ ಕಾಲ ಅಪ್ಪಟ ಕನ್ನಡಿಗರ ಜೊತೆಗೆ ಹಾಗೂ ಕನ್ನಡ ವಾತಾವರಣದಲ್ಲಿ ಇದ್ದರೂ ನಿಕಿತಾ ಕನ್ನಡ ಕಲಿಯದೆ ಇರುವುದು ನಿಜಕ್ಕೂ ಬೇಸರದ ಸಂಗತಿ. ಪರಭಾಷೆಯವರಿಗೆ ಕನ್ನಡ ಕಲಿಯುವುದು ಅಷ್ಟು ಕಷ್ಟವೆ? (ಒನ್ಇಂಡಿಯಾ ಕನ್ನಡ)