Don't Miss!
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Sports IPL ಬಿಡಿ, WPLನಲ್ಲಿ ಆರ್ಸಿಬಿಗೆ ಗೆದ್ದ ಮೊತ್ತಕ್ಕೂ ಸಮವಿಲ್ಲ PSL ವಿಜೇತರಿಗೆ ಸಿಕ್ಕ ಬಹುಮಾನ
- Lifestyle ಕೆಜಿಎಫ್ ಎಲ್ ಡೊರಾಡೊ ಕಥೆ ಕೇಳಿದ್ದೀರಾ? ಇದು ಸಮುದ್ರದಲ್ಲಿ ಮುಳುಗಿದ ಎಲ್ ಡೊರಾಡೊ ಹಡಗಿನ ಕಥೆ..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ದು 'ನಿದ್ದೆ' ಬಗ್ಗೆ ಲೇವಡಿ ಮಾಡುವ ಮುನ್ನ ಈ ವಿಷ್ಯ ನೆನಪಿರಲಿ.!
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲ, ಬದಲಾಗಿ 'ನಿದ್ದರಾಮಯ್ಯ' ಎಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕೇಳಿ ಬರುತ್ತವೆ. ಕಾರಣ, ವಿಧಾನ ಮಂಡಲ ಅಧಿವೇಶನ ಸೇರಿದಂತೆ ಅನೇಕ ಸಭೆ, ಸಮಾರಂಭಗಳಲ್ಲಿ ಸಿದ್ದರಾಮಯ್ಯ ನಿದ್ದೆ ಮಾಡಿ ಮಾಧ್ಯಮಗಳ ಕ್ಯಾಮೆರಾಗಳಿಗೆ ಸಿಕ್ಕಿಬಿದ್ದಿದ್ದಾರೆ.
ಅಷ್ಟಕ್ಕೂ, ಸಿದ್ದರಾಮಯ್ಯ ಸಾಹೇಬ್ರು ಆಗಾಗ ನಿದ್ದೆಗೆ ಜಾರಲು ಕಾರಣ 'ಸ್ಲೀಪ್ ಆಪ್ನಿಯಾ'. ಹಾಗಂತ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಹೇಳಿದವರು ಸಿದ್ದರಾಮಯ್ಯ ರವರಿಗೆ ಟ್ರೀಟ್ ಮೆಂಟ್ ಕೊಡುತ್ತಿರುವ ವೈದ್ಯ ಡಾ.ರವಿ ಕುಮಾರ್.
ಕಾರ್ ಮೇಲೆ ಕಾಗೆ ಕೂತರೂ ಸಿದ್ದರಾಮಯ್ಯ 'ಸಿ.ಎಂ' ಕುರ್ಚಿಗೆ ಕುತ್ತು ಬರಲೇ ಇಲ್ಲ.!
''ನಾಡಿನ ಜನತೆ ಹಾಗೂ ದೇಶದ ಉದ್ದಗಲಕ್ಕೂ ಸಿದ್ದರಾಮಯ್ಯ ಯಾವಾಗಲೂ ನಿದ್ದೆ ಮಾಡುತ್ತಿರುತ್ತಾರೆ ಎಂಬ ಆಪಾದನೆಯನ್ನು ಕೇಳಿದ್ದೇವೆ. ಇದಕ್ಕೆ ಮೂಲ ಸಮಸ್ಯೆ ಸ್ಲೀಪ್ ಆಪ್ನಿಯಾ'' ಎನ್ನುತ್ತಾರೆ ಡಾ.ರವಿ ಕುಮಾರ್.
''ನಿದ್ದೆ ಮಾಡುವಾಗ ನಾಲಿಗೆ ಹಿಂದಕ್ಕೆ ಹೋಗಿ ತುಂಬಾ ದಣಿವಾದಾಗ ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಬ್ರೇನ್ ಗೆ ಹೋಗಬೇಕಾದ ಆಕ್ಸಿಜನ್ ಪ್ರಮಾಣ ಕಡಿಮೆ ಆಗಿ
ಬೆಳಗ್ಗೆ ಎದ್ದಾಗ ಲವಲವಿಕೆ ಕಾಣಿಸುವುದಿಲ್ಲ. ನಿದ್ದೆ ಸಾಲದೆ, ಇನ್ನೂ ನಿದ್ದೆ ಮಾಡಬೇಕು ಎಂದು ಅನಿಸುತ್ತದೆ. ಆ ಸಮಸ್ಯೆಯಿಂದ ಸಿದ್ದರಾಮಯ್ಯ ಬಳಲುತ್ತಿದ್ದಾರೆ. ಈ ಸಮಸ್ಯೆ ಹೋಗಲಾಡಿಸಲು ಯೋಗಾ ಥೆರಪಿ ಪ್ರಾರಂಭ ಮಾಡಿದ್ದೇವೆ. ಇದರಿಂದ ಅವರಿಗೆ ತುಂಬಾ ಸಹಕಾರಿ ಆಗಿದೆ ಎಂದು ನಾನು ಭಾವಿಸುತ್ತೇನೆ'' ಎನ್ನುತ್ತಾರೆ ಡಾ.ರವಿ ಕುಮಾರ್.
'ವೀಕೆಂಡ್..' ಕಾರ್ಯಕ್ರಮಕ್ಕೆ ಸಿ.ಎಂ ಸಿದ್ಧರಾಮಯ್ಯ ಪತ್ನಿ ಬರ್ಲಿಲ್ಲ.! ಯಾಕೆ.?
ಹೀಗಾಗಿ, ಸಿದ್ದರಾಮಯ್ಯ ರವರ ನಿದ್ದೆ ಬಗ್ಗೆ ಇನ್ಮುಂದೆ ಲೇವಡಿ ಮಾಡುವ ಮೊದಲು ಸ್ವಲ್ಪ ಯೋಚಿಸಿ...