Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಗ್ಗೆ ಸಿದ್ದರಾಮಯ್ಯ ಏನಂದರು.?
ವರ್ಷಗಳ ಹಿಂದಿನ ರಾಜಕೀಯ ವೈರತ್ವ ಏನೇ ಇರಬಹುದು... ತಮ್ಮ ನಿಲುವುಗಳ ಬಗ್ಗೆ ಭಿನ್ನಾಭಿಪ್ರಾಯ ಉಂಟಾಗಿರಬಹುದು... ರಾಜಕೀಯವಾಗಿ ಒಬ್ಬರ ವಿರುದ್ಧ ಇನ್ನೊಬ್ಬರು ಸೆಡ್ಡು ಹೊಡೆದಿರಬಹುದು... ಏನೇ ಆಗಿದ್ದರೂ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ರವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಗೌರವ, ಹೆಮ್ಮೆ ಇದೆ.
ಈ ಸಂಗತಿ ಬಯಲಾಗಿದ್ದು, ಜೀ ಕನ್ನಡ ವಾಹಿನಿಯ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ.!
ಕಾರ್ ಮೇಲೆ ಕಾಗೆ ಕೂತರೂ ಸಿದ್ದರಾಮಯ್ಯ 'ಸಿ.ಎಂ' ಕುರ್ಚಿಗೆ ಕುತ್ತು ಬರಲೇ ಇಲ್ಲ.!
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾಧಕರ ಸೀಟ್ ಮೇಲೆ ಕುಳಿತ ಸಿ.ಎಂ. ಸಿದ್ದರಾಮಯ್ಯ ನವರಿಗೆ ರಮೇಶ್ ಅರವಿಂದ್, ''ನೀವು ಗೌರವಿಸುವಂತಹ ಎದುರಾಳಿ ಯಾರು.?'' ಎಂದು ಪ್ರಶ್ನೆ ಕೇಳಿದರು.
ಅದಕ್ಕೆ ಹಿಂದು ಮುಂದು ಯೋಚನೆ ಮಾಡದ ಸಿದ್ದರಾಮಯ್ಯ,''ಎಚ್.ಡಿ.ದೇವೇಗೌಡರು'' ಎಂದು ಉತ್ತರ ಕೊಟ್ಟು, ''ಮೊದಲಿನಿಂದಲೂ ನಾನು ದೇವೇಗೌಡ ರವರನ್ನು ಗೌರವಿಸುತ್ತೇನೆ'' ಎಂದರು.
'ವೀಕೆಂಡ್..' ಕಾರ್ಯಕ್ರಮಕ್ಕೆ ಸಿ.ಎಂ ಸಿದ್ಧರಾಮಯ್ಯ ಪತ್ನಿ ಬರ್ಲಿಲ್ಲ.! ಯಾಕೆ.?
''ದೇವೇಗೌಡರಿಗೆ ಬೇರೆ ಯಾವುದೇ ಅಭ್ಯಾಸ ಇಲ್ಲ. ಇಪ್ಪತ್ನಾಲ್ಕು ಗಂಟೆ ರಾಜಕೀಯ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ. ಅವರ ಮಗ ರೇವಣ್ಣ ಕೂಡ ಅದೇ ರೀತಿ ಮಾಡುತ್ತಿದ್ದಾರೆ'' ಎಂದರು ಸಿ.ಎಂ. ಸಿದ್ದರಾಮಯ್ಯ.