Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನವರಿ 16 ರಿಂದ ಕಲರ್ಸ್ ಕನ್ನಡದಲ್ಲಿ 'ರಾಧಾ ರಮಣ'
ಸದಾ ಹೊಸತನದ, ಸೃಜನಾತ್ಮಕ ಕತೆಗಳನ್ನು ಪರಿಚಯಿಸುತ್ತಾ ಕನ್ನಡ ಕಿರುತೆರೆ ಲೋಕದಲ್ಲಿ ಸಂಚಲನ ಮೂಡಿಸಿರುವ ಕಲರ್ಸ್ ಕನ್ನಡ ವಾಹಿನಿ ಇದೀಗ ಮತ್ತೊಂದು ವಿನೂತನ ಕತೆಯನ್ನು ಪರಿಚಯಿಸುತ್ತಿದೆ, ಅದುವೇ 'ರಾಧಾರಮಣ'.
'ರಾಧಾರಮಣ' ಧಾರವಾಹಿ ಇದೇ ಜನವರಿ 16ರಿಂದ ನಿಮ್ಮ ನೆಚ್ಚಿನ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದ್ದು, ಸೋಮವಾರದಿಂದ ಶುಕ್ರವಾರವರೆಗೂ ರಾತ್ರಿ 9ಗಂಟೆಗೆ ನಿಮ್ಮ ಮನೆಗೆ ಬರಲಿದೆ.
ಹೌದು, 'ಬಿಗ್ ಬಾಸ್ ಕನ್ನಡ 4' ರಿಯಾಲಿಟಿ ಶೋ ಸೋಮವಾರದಿಂದ ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ಆ ಜಾಗವನ್ನು ತುಂಬಲು 'ರಾಧಾ ರಮಣ' ಸಿದ್ಧವಾಗಿದೆ.
ಅಂದ್ಹಾಗೆ, 'ರಾಧಾ ರಮಣ' ಒಡಹುಟ್ಟಿದವರ ಬಾಂಧವ್ಯ ಬೆಸೆಯುವ ಕತೆ. ಹುಟ್ಟುತ್ತಾ ಒಡಹುಟ್ಟಿದವರು, ಬೆಳೆಯುತ್ತಾ ದಾಯಾದಿಗಳು ಎಂಬ ಮಾತು ಸದಾ ಸತ್ಯ ಎಂಬ ಕಥಾಹಂದರವನ್ನಿಟ್ಟು ಕಥೆ ಮಾಡಲಾಗಿದೆ.
ಕಲರ್ಸ್ ಕನ್ನಡ ಮತ್ತು ಸೂಪರ್ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ ಗುಂಡ್ಕಲ್ ಅವರು ಹೇಳುವಂತೆ ''ರಾಧಾ ರಮಣ' ಒಂದು ಧನಾತ್ಮಕ ಕತೆ. ಸಂಬಂಧಗಳು ಮೌಲ್ಯವನ್ನು ಕಳೆದುಕೊಳುತ್ತಿರುವ ಸಂದರ್ಭದಲ್ಲಿ, ಜವಾಬ್ದಾರಿಗಳಿಂದ ದೂರ ಸರಿಯುವ ಒಡಹುಟ್ಟಿದವರಿಗೊಂದು ಸೂಕ್ತ ಪಾಠವಾಗಬಲ್ಲದು ಈ ಧಾರಾವಾಹಿ. ಕಲರ್ಸ್ ಕನ್ನಡ ವಾಹಿನಿಯು ಇಲ್ಲಿಯವರೆಗೂ ಫ್ರೆಶ್ ಕಂಟೆಂಟ್ ನೀಡಿದೆ. ಈಗಲೂ ಅದೇ ಹಾದಿಯಲ್ಲಿ ಮುಂದುವರೆಯುತ್ತಿದೆ'' ಎನ್ನುತ್ತಾರೆ.
ರಾಧರಮಣ ಧಾರವಾಹಿಯ ಮುಖ್ಯ ಭೂಮಿಕೆಯಲ್ಲಿ ಆರಾಧನ ಪಾತ್ರದಲ್ಲಿ ಶ್ವೇತಾ ಪ್ರದೀಪ್, ರಮಣ್ ಪಾತ್ರದಲ್ಲಿ ಸ್ಕಂದ್, ಸೇರಿದಂತೆ ರಕ್ಷಾ, ಸಿಬ್ಬು, ಸುಜಾತ, ಸುಚಿತ್ರಾ, ರಾಜ್ ಗೋಪಾಲ್ ಜೋಶಿ ಅಭಿನಯಿಸಿದ್ದಾರೆ.