Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಶ್ಚಿತಾರ್ಥ ಮಾಡಿಕೊಂಡ 'ಕಾಮಿಡಿ ಕಿಲಾಡಿ'ಗಳಾದ ದಿವ್ಯಶ್ರೀ-ಗೋವಿಂದೇ ಗೌಡ
ಒಟ್ಟಿಗೆ ತೆರೆ ಹಂಚಿಕೊಂಡ ಸಿನಿಮಾ ನಟ-ನಟಿಯರು, ಕಿರುತೆರೆ ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುವುದು ಕಾಮನ್. ಆದರಿಲ್ಲಿ ರಿಯಾಲಿಟಿ ಶೋನಲ್ಲಿ ಒಟ್ಟಿಗೆ ಸ್ಪರ್ಧಿಸಿದ್ದ ಇಬ್ಬರು ಸ್ಪರ್ಧಿಗಳು ಹೊಸ ಜೀವನಕ್ಕೆ ಕಾಲಿಡಲು ಮನಸ್ಸು ಮಾಡಿದ್ದಾರೆ.
ಆ ಇಬ್ಬರು ಸ್ಪರ್ಧಿಗಳು ಬೇರೆ ಯಾರೂ ಅಲ್ಲ. ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಗೋವಿಂದೇಗೌಡ ಮತ್ತು ದಿವ್ಯಶ್ರೀ.
ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಒಟ್ಟಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದ ಗೋವಿಂದೇಗೌಡ ಮತ್ತು ದಿವ್ಯಶ್ರೀ ಪರಸ್ಪರ ಪ್ರೀತಿಸುತ್ತಿದ್ದಾರೆ. ಮದುವೆಯಾಗಲು ಮುಂದಾಗಿರುವ ಇವರಿಬ್ಬರ ನಿಶ್ಚಿತಾರ್ಥ ನಿನ್ನೆಯಷ್ಟೇ ನೆರವೇರಿದೆ.
ದಿವ್ಯಶ್ರೀ ಮತ್ತು ಗೋವಿಂದೇಗೌಡ ರವರ ನಿಶ್ಚಿತಾರ್ಥ ಸಮಾರಂಭದ ಫೋಟೋಗಳು ನಿಮ್ಮ 'ಫಿಲ್ಮಿಬೀಟ್ ಕನ್ನಡ'ಗೆ ಲಭ್ಯವಾಗಿದೆ ನೋಡಿರಿ...
ಉಂಗುರ ಬದಲಿಸಿಕೊಂಡ ಜೋಡಿ
ಕಾಮಿಡಿ ಕಿಲಾಡಿಗಳಾದ ಗೋವಿಂದೇಗೌಡ ಮತ್ತು ದಿವ್ಯಶ್ರೀ ನಿಶ್ಚಿತಾರ್ಥ ಸಮಾರಂಭ ನಿನ್ನೆ.. ಅಂದರೆ ಭಾನುವಾರ ಬೆಂಗಳೂರಿನ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ಕುಟುಂಬಸ್ಥರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ದಿವ್ಯಶ್ರೀ ಮತ್ತು ಗೋವಿಂದೇಗೌಡ ಉಂಗುರ ಬದಲಾಯಿಸಿಕೊಂಡರು.
ಮದುವೆ ಆಗ್ತಿದ್ದಾರೆ 'ಕಾಮಿಡಿ ಕಿಲಾಡಿ' ಜೋಡಿ : ಖುಷಿ ಹಂಚಿಕೊಂಡ ಜಿಜಿ
ಕಾಮಿಡಿ ಕಿಲಾಡಿಗಳು ಸಾಕ್ಷಿ
ದಿವ್ಯಶ್ರೀ ಮತ್ತು ಗೋವಿಂದ ಗೌಡ ನಿಶ್ಚಿತಾರ್ಥ ಸಮಾರಂಭಕ್ಕೆ ಅನೀಶ್ ಸೇರಿದಂತೆ ಕಾಮಿಡಿ ಕಿಲಾಡಿಗಳ ದಂಡೇ ಸಾಕ್ಷಿಯಾಗಿತ್ತು. ನವ ಜೋಡಿಗೆ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಿರ್ದೇಶಕ ಶರಣಯ್ಯ ಶುಭ ಹಾರೈಸಿದರು.
ಸ್ನೇಹದಿಂದ ಪ್ರೀತಿ
ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಲ್ಲಿ ಪರಿಚಯವಾದ ದಿವ್ಯಶ್ರೀ ಮತ್ತು ಗೋವಿಂದೇಗೌಡ ಉತ್ತಮ ಸ್ನೇಹಿತರಾಗಿದ್ದರು. ಸ್ನೇಹ ಪ್ರೀತಿಗೆ ತಿರುಗಿ ಈಗ ಪ್ರೀತಿ ಮದುವೆ ಹಂತದವರೆಗೂ ಬಂದಿದೆ.
ಕುಟುಂಬದ ಸಮ್ಮತಿ ಮೇರೆಗೆ ನಿಶ್ಚಿತಾರ್ಥ
ದಿವ್ಯಶ್ರೀ ಮತ್ತು ಗೋವಿಂದೇಗೌಡ ಪ್ರೀತಿಗೆ ಉಭಯ ಕುಟುಂಬದವರು ಹಿಂದೆ ಮುಂದೆ ನೋಡದೆ ಸಮ್ಮತಿ ಕೊಟ್ಟಿದ್ದಾರೆ. ಕುಟುಂಬಗಳ ಮಧ್ಯೆ ಕಳೆದ ಸೆಪ್ಟೆಂಬರ್ ನಲ್ಲಿ ಮಾತುಕತೆ ನಡೆದಿದ್ದು ಇದೀಗ ನಿಶ್ಚಿತಾರ್ಥ ನೆರವೇರಿದೆ.
ಮದುವೆ ಯಾವಾಗ.?
ಇನ್ನೆರಡು ತಿಂಗಳಲ್ಲಿ ಅಂದರೆ ಮಾರ್ಚ್ 14 ರಂದು ದಿವ್ಯಶ್ರೀ-ಗೋವಿಂದೇಗೌಡ ಮದುವೆ ನಡೆಯಲಿದೆ. ಶೃಂಗೇರಿಯಲ್ಲಿ ವಿವಾಹ ಮಹೋತ್ಸವ ನಡೆಯಲಿದ್ದು, ಶಾರದಾಂಬೆಯ ಆಶೀರ್ವಾದ ಪಡೆದು ಹೊಸ ಜೀವನಕ್ಕೆ ಈ ಜೋಡಿ ಕಾಲಿಡಲಿದ್ದಾರೆ.
ಸಿನಿಮಾಗಳಲ್ಲಿ ಅವಕಾಶ
ಕಾಮಿಡಿ ಕಿಲಾಡಿಗಳು ಕಾರ್ಯಕ್ರಮ ಮುಗಿದ ಮೇಲೆ ದಿವ್ಯಶ್ರೀ ಮತ್ತು ಗೋವಿಂದೇಗೌಡಗೆ ಸ್ಯಾಂಡಲ್ ವುಡ್ ನಿಂದ ಹಲವು ಆಫರ್ ಗಳು ಹುಡುಕಿಕೊಂಡು ಬಂದವು. 'ಪುಣ್ಯತ್ ಗಿತ್ತಿಯರು' ಚಿತ್ರದಲ್ಲಿ ದಿವ್ಯಶ್ರೀ ಅಭಿನಯಿಸಿದ್ದಾರೆ. ಇನ್ನು ಗೋವಿಂದೇಗೌಡ 'ಕೆಜಿಎಫ್' ಮತ್ತು 'ಭರಾಟೆ' ಚಿತ್ರಗಳಲ್ಲಿ ನಟಿಸಿದ್ದಾರೆ.