Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ದರ್ಶನ್ ಬರಲೇ ಇಲ್ಲ
Recommended Video
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮ ಕೊನೆಯ ಹಂತಕ್ಕೆ ಬಂದಿದೆ. ಕಾರ್ಯಕ್ರಮದ ಒಂದೇ ಒಂದು ಸಂಚಿಕೆ ಈಗ ಬಾಕಿ ಇದೆ.
ಈ ಕಾರ್ಯಕ್ರಮಕ್ಕೆ ಈಗಾಗಲೇ ನಟರಾದ ಉಪೇಂದ್ರ, ರಮೇಶ್, ಧನಂಜಯ್, ಯೋಗಿ, ಶರಣ್ ಸೇರಿದಂತೆ ಅನೇಕರು ಬಂದಿದ್ದಾರೆ. ಜೊತೆಗೆ ಕಿಚ್ಚ ಸುದೀಪ್ ಅವರ ಸಂಚಿಕೆ ಈ ಶನಿವಾರ ಪ್ರಸಾರ ಆಗಲಿದೆ. ಆದರೆ ದರ್ಶನ್ ಕಾರ್ಯಕ್ರಮದ ಅತಿಥಿ ಆಗುತ್ತಾರೆ ಎಂಬ ಅಭಿಮಾನಿಗಳ ಆಸೆ ನಿರಾಸೆ ಆಗಿದೆ. ಕಾರ್ಯಕ್ರಮ ಈ ವಾರ ಅಂತ್ಯ ಆಗಲಿದ್ದು, ಸುದೀಪ್ ಮತ್ತು ಜೋಗಿ ಪ್ರೇಮ್ ಅವರ ಸಂಚಿಕೆಯ ಮೂಲಕ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ.
ಈ ಹಿಂದೆ 'ಫಿಲ್ಮಿಬೀಟ್ ಕನ್ನಡ' ಸಹ ಈ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ ಯಾವ ನಟರನ್ನು ನೋಡಲು ಬಯಸುತ್ತಿರಾ ಎಂಬ ಪ್ರಶ್ನೆಯ ಪೋಲ್ ಏರ್ಪಡಿಸಿತ್ತು. ಆಗ ಅಧಿಕ ಸಂಖ್ಯೆಯ ಓದುಗರು ದರ್ಶನ್ ಅವರ ಹೆಸರನ್ನು ಹೇಳಿದ್ದರು ಇನ್ನು ಸ್ಟಾರ್ ಸುವರ್ಣ ವಾಹಿನಿಯ ಫೇಸ್ ಬುಕ್ ಫೇಜ್ ನಲ್ಲಿ ಕೂಡ ಸಾಕಷ್ಟು ಅಭಿಮಾನಿಗಳ ದರ್ಶನ್ ಅವರನ್ನು ಕರೆ ತರುವಂತೆ ಮನವಿ ಮಾಡಿದ್ದರು. ಆದರೆ ಅಂತಹ ಅಭಿಮಾನಿಗಳು ಕೊನೆಗೂ ದರ್ಶನ್ ಅವರನ್ನು ಕಾರ್ಯಕ್ರಮದಲ್ಲಿ ನೋಡಲು ಸಾಧ್ಯ ಆಗಲಿಲ್ಲ.
'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ 13 ಸಂಚಿಕೆಗಳನ್ನು ಪ್ಲಾನ್ ಮಾಡಿದ್ದು, ಸುದೀಪ್ ಅವರದ್ದೆ ಕೊನೆಯ ಸಂಚಿಕೆ ಆಗಿದೆ. ಈ ಸಂಚಿಕೆ ಇದೇ ಶನಿವಾರ ರಾತ್ರಿ 8 ಗಂಟೆಗೆ ಪ್ರಸಾರ ಆಗಲಿದೆ.