Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ದರ್ಶನ್ ಬರಲೇ ಇಲ್ಲ
Recommended Video
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮ ಕೊನೆಯ ಹಂತಕ್ಕೆ ಬಂದಿದೆ. ಕಾರ್ಯಕ್ರಮದ ಒಂದೇ ಒಂದು ಸಂಚಿಕೆ ಈಗ ಬಾಕಿ ಇದೆ.
ಈ ಕಾರ್ಯಕ್ರಮಕ್ಕೆ ಈಗಾಗಲೇ ನಟರಾದ ಉಪೇಂದ್ರ, ರಮೇಶ್, ಧನಂಜಯ್, ಯೋಗಿ, ಶರಣ್ ಸೇರಿದಂತೆ ಅನೇಕರು ಬಂದಿದ್ದಾರೆ. ಜೊತೆಗೆ ಕಿಚ್ಚ ಸುದೀಪ್ ಅವರ ಸಂಚಿಕೆ ಈ ಶನಿವಾರ ಪ್ರಸಾರ ಆಗಲಿದೆ. ಆದರೆ ದರ್ಶನ್ ಕಾರ್ಯಕ್ರಮದ ಅತಿಥಿ ಆಗುತ್ತಾರೆ ಎಂಬ ಅಭಿಮಾನಿಗಳ ಆಸೆ ನಿರಾಸೆ ಆಗಿದೆ. ಕಾರ್ಯಕ್ರಮ ಈ ವಾರ ಅಂತ್ಯ ಆಗಲಿದ್ದು, ಸುದೀಪ್ ಮತ್ತು ಜೋಗಿ ಪ್ರೇಮ್ ಅವರ ಸಂಚಿಕೆಯ ಮೂಲಕ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ.
ಈ ಹಿಂದೆ 'ಫಿಲ್ಮಿಬೀಟ್ ಕನ್ನಡ' ಸಹ ಈ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ ಯಾವ ನಟರನ್ನು ನೋಡಲು ಬಯಸುತ್ತಿರಾ ಎಂಬ ಪ್ರಶ್ನೆಯ ಪೋಲ್ ಏರ್ಪಡಿಸಿತ್ತು. ಆಗ ಅಧಿಕ ಸಂಖ್ಯೆಯ ಓದುಗರು ದರ್ಶನ್ ಅವರ ಹೆಸರನ್ನು ಹೇಳಿದ್ದರು ಇನ್ನು ಸ್ಟಾರ್ ಸುವರ್ಣ ವಾಹಿನಿಯ ಫೇಸ್ ಬುಕ್ ಫೇಜ್ ನಲ್ಲಿ ಕೂಡ ಸಾಕಷ್ಟು ಅಭಿಮಾನಿಗಳ ದರ್ಶನ್ ಅವರನ್ನು ಕರೆ ತರುವಂತೆ ಮನವಿ ಮಾಡಿದ್ದರು. ಆದರೆ ಅಂತಹ ಅಭಿಮಾನಿಗಳು ಕೊನೆಗೂ ದರ್ಶನ್ ಅವರನ್ನು ಕಾರ್ಯಕ್ರಮದಲ್ಲಿ ನೋಡಲು ಸಾಧ್ಯ ಆಗಲಿಲ್ಲ.
'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ 13 ಸಂಚಿಕೆಗಳನ್ನು ಪ್ಲಾನ್ ಮಾಡಿದ್ದು, ಸುದೀಪ್ ಅವರದ್ದೆ ಕೊನೆಯ ಸಂಚಿಕೆ ಆಗಿದೆ. ಈ ಸಂಚಿಕೆ ಇದೇ ಶನಿವಾರ ರಾತ್ರಿ 8 ಗಂಟೆಗೆ ಪ್ರಸಾರ ಆಗಲಿದೆ.