Don't Miss!
- News
Vande Bharat Express ರೈಲಿನಲ್ಲಿ ಕಂಡುಬಂದ ಕಸದ ರಾಶಿ: ಫೋಟೊ ವೈರಲ್, ಕರ್ತವ್ಯ ಮರೆತ ಜನ ಎಂದ ನೆಟ್ಟಿಗರು
- Finance
ವಿಶ್ವದ ಶ್ರೀಮಂತ ವ್ಯಕ್ತಿ: 3ರಿಂದ 7ನೇ ಸ್ಥಾನಕ್ಕೆ ಇಳಿದ ಅದಾನಿ, ಹೂಡಿಕೆದಾರರ ನಂಬಿಕೆ ಗಳಿಸುವಲ್ಲಿ ಸೋತರೇ?
- Technology
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕನಸಿನಲ್ಲಿ ಕಾಡಿದ 'ನಾಗಕನ್ನಿಕೆ' ಈಕೆಯೇ... ದರುಶನ ಮಾಡಿ...
ವಿಭಿನ್ನ ಕಾರ್ಯಕ್ರಮಗಳ ಮೂಲಕ ದಿನದಿಂದ ದಿನಕ್ಕೆ ಕಲರ್ಸ್ ಸೂಪರ್ ವಾಹಿನಿ ವೀಕ್ಷಕರ ಮನಗೆಲ್ಲುವಲ್ಲಿ ಯಶಸ್ವಿ ಆಗುತ್ತಿದೆ. 'ಮಜಾ ಭಾರತ', 'ಶಾಂತಂ ಪಾಪಂ', 'ಸೂಪರ್ ಟಾಕ್ ಟೈಮ್' ಅಂತಹ ಕಾರ್ಯಕ್ರಮಗಳ ಮೂಲಕ ಅಸಂಖ್ಯಾತ ವೀಕ್ಷಕರನ್ನು ಸಂಪಾದಿಸಿರುವ ಕಲರ್ಸ್ ಸೂಪರ್ ವಾಹಿನಿಯಲ್ಲಿ ಇದೀಗ ಹೊಸ ಧಾರಾವಾಹಿ ಶುರು ಆಗುತ್ತಿದೆ. ಅದೇ 'ನಾಗಕನ್ನಿಕೆ'.
ಇಲ್ಲಿಯವರೆಗೂ 'ನಾಗಕನ್ನಿಕೆ' ಧಾರಾವಾಹಿಯ ಹಲವು ಪ್ರೋಮೋಗಳು 'ಕಲರ್ಸ್ ಸೂಪರ್' ವಾಹಿನಿಯಲ್ಲಿ ಪ್ರಸಾರ ಆಗಿದೆ. ಆದ್ರೆ, 'ನಾಗಕನ್ನಿಕೆ' ಆಗಿ ಬುಸುಗುಡುವ ನಾರಿ ಯಾರು ಎಂಬುದು ಮಾತ್ರ ಯಾರಿಗೂ ಗೊತ್ತಾಗಿರಲಿಲ್ಲ.
'ಸಂಜು
ಮತ್ತು
ನಾನು'
ವಾರಾಂತ್ಯದ
ಕತೆಯಲ್ಲಿ
'ಕಾರ್ತಿಕ್':
ಯಾರಿದು.?
ಇಲ್ಲಿಯವರೆಗೂ ಸಸ್ಪೆನ್ಸ್ ಆಗಿದ್ದ 'ನಾಗಕನ್ನಿಕೆ'ಯ ದರ್ಶನ ಇಂದು ಎಲ್ಲರಿಗೂ ಆಗಿದೆ. 'ನಾಗಕನ್ನಿಕೆ' ಧಾರಾವಾಹಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿರುವ ನಾರಿ ಅಧಿತಿ ಪ್ರಭುದೇವ್ ಎಂಬಾಕೆ.
ಯಾರೀ ಅಧಿತಿ ಪ್ರಭುದೇವ್ ಎಂದು ನೀವು ಯೋಚಿಸುತ್ತಿದ್ದರೆ, ಒಮ್ಮೆ 'ಧೈರ್ಯಂ' ಚಿತ್ರದ ಟ್ರೈಲರ್ ಹಾಗೂ ಸಾಂಗ್ ಗಳತ್ತ ಮೊದಲು ಕಣ್ಣಾಡಿಸಿ.
ಅಜೇಯ್ ರಾವ್ ಅಭಿನಯದ ಶಿವ ತೇಜಸ್ ನಿರ್ದೇಶನದ 'ಧೈರ್ಯಂ' ಚಿತ್ರದಲ್ಲಿ ನಾಯಕಿ ಅಗಿ ಅಧಿತಿ ಪ್ರಭುದೇವ್ ಕಾಣಿಸಿಕೊಂಡಿದ್ದಾರೆ. 'ಧೈರ್ಯಂ' ಸಿನಿಮಾ ಬಿಡುಗಡೆ ಆಗುವ ಮುನ್ನವೇ 'ನಾಗಕನ್ನಿಕೆ' ಧಾರಾವಾಹಿಯ ಪ್ರಮುಖ ಪಾತ್ರಕ್ಕೆ ಅಧಿತಿ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ.
ಜೂನ್ 26 ರಿಂದ ರಾತ್ರಿ 7.30ಕ್ಕೆ 'ನಾಗಕನ್ನಿಕೆ' ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರ ಆಗಲಿದೆ.