Don't Miss!
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಿಗಮಪ' ವೇದಿಕೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ
Recommended Video
ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ 'ಸರಿಗಮಪ ಲಿಟ್ಸ್ ಚಾಂಪ್ಸ್' ಮತ್ತೊಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ. ನಾದಬ್ರಹ್ಮ ಹಂಸಲೇಖ, ಎಸ್.ಪಿ ಬಾಲಸುಬ್ರಮಣ್ಯಂ, ಎಸ್.ಜಾನಕಿ ಅಂತಹ ದಿಗ್ಗಜ ಕಲಾವಿದರ ಸಮ್ಮುಖದಲ್ಲಿ ಸಂಗೀತ ರಸಮಂಜರಿ ನೀಡುತ್ತಿದ್ದ 'ಸರಿಗಮಪ' ಈಗ ಮತ್ತೊಬ್ಬ ದಿಗ್ಗಜ ವ್ಯಕ್ತಿಯನ್ನ ಅತಿಥಿಯಾಗಿ ಆಹ್ವಾನಿಸಿದೆ.
ಹೌದು, ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರು ಸರಿಗಮಪ ಲಿಟ್ಲ್ ಚಾಂಪ್ಸ್ 14ನೇ ಸೀಸನ್ ನಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಈಗಾಗಲೇ ಕಾರ್ಯಕ್ರಮದ ಚಿತ್ರೀಕರಣ ಮುಗಿದಿದ್ದು, ಮುಂದಿನ ಶನಿವಾರ ಹಾಗೂ ಭಾನುವಾರ ವಿರೇಂದ್ರ ಹೆಗ್ಗಡೆ ಅವರು ಭಾಗವಹಿಸಿರುವ ಎಪಿಸೋಡ್ ಟಿವಿಯಲ್ಲಿ ಪ್ರಸಾರವಾಗಲಿದೆ.
ವಿಶೇಷವಾಗಿ ಆ ಎರಡೂ ಎಪಿಸೋಡ್ ಗಳನ್ನು ವಿರೇಂದ್ರ ಹೆಗ್ಗಡೆ ಅವರಿಗೆ ಸಮರ್ಪಿಸಲಾಗಿದೆ. ಈ ಎಪಿಸೋಡ್ ಸಂಪೂರ್ಣವಾಗಿ ಭಕ್ತಿಗೀತೆಗೆ ಮೀಸಲಾಗಿದ್ದು, ಈ ವಾರ ಸ್ಪರ್ಧಿಗಳೆಲ್ಲ ಭಕ್ತಿಸಾಗರದಲ್ಲಿ ಮುಳುಗಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಮುಖ್ಯ ತೀರ್ಪುಗಾರರಾಗಿದ್ದಾರೆ. ಅನುಶ್ರೀ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.