Don't Miss!
- News ಕನ್ನಡ ನಾಮಫಲಕ: ಬಲವಂತದ ಕ್ರಮ ಬೇಡ ಎಂದ ಕೋರ್ಟ್
- Finance ತನ್ನ 4 ವರ್ಷದ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರುಗಳನ್ನು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಿನಕರ್ ತೂಗುದೀಪ ಅಡ್ಡದಿಂದ ಇದೀಗಷ್ಟೇ ಹೊರಬಂದ ಸುದ್ದಿಯಿದು...
ಎಲ್ಲವೂ ಪ್ಲಾನ್ ಪ್ರಕಾರ ನಡೆದಿದ್ದರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 50ನೇ ಚಿತ್ರ 'ಸರ್ವಾಂತರ್ಯಾಮಿ'ಗೆ ದಿನಕರ್ ತೂಗುದೀಪ ಆಕ್ಷನ್ ಕಟ್ ಹೇಳಬೇಕಿತ್ತು. ಆದ್ರೀಗ, ಪ್ಲಾನ್ ನಲ್ಲಿ ಕೊಂಚ ಬದಲಾವಣೆ ಆಗಿರುವುದರಿಂದ 'ಕುರುಕ್ಷೇತ್ರ' ದರ್ಶನ್ ರವರ 50ನೇ ಚಿತ್ರವಾಗಿದೆ. ಹಾಗೇ, ದಿನಕರ್ ಕೈಗೆ ಹೊಸ ಸ್ಕ್ರಿಪ್ಟ್ ಸೇರಿದೆ.
'ಚಕ್ರವರ್ತಿ' ಸಿನಿಮಾದಲ್ಲಿ ಖತರ್ನಾಕ್ ಕೇಡಿ ಪಾತ್ರದಲ್ಲಿ ಮಿಂಚಿದ್ದ ದಿನಕರ್ ತೂಗುದೀಪ ಇದೀಗ ಮತ್ತೆ ನಿರ್ದೇಶನದ ಕಡೆ ಮುಖ ಮಾಡಿದ್ದಾರೆ.
ದಿನಕರ್ ಆಕ್ಟಿಂಗ್ ಬಗ್ಗೆ ಚಾಲೆಂಜಿಂಗ್ ಸ್ಟಾರ್ ಹೇಳಿದ್ದೇನು?
ದಿನಕರ್ 'ಕ್ಯಾಪ್ಟನ್ ಆಫ್ ದಿ ಶಿಪ್' ಆಗಲು ಹೊರಟಿರುವ ಸಿನಿಮಾ ಯಾವುದು, ಚಿತ್ರದ ತಾರಾಬಳಗದಲ್ಲಿ ಯಾರೆಲ್ಲ ಇದ್ದಾರೆ ಎಂಬ ಮಾಹಿತಿ ಇಲ್ಲಿದೆ ಓದಿರಿ...
ದಿನಕರ್ ತೂಗುದೀಪ ಮುಂದಿನ ಸಿನಿಮಾ ಯಾವುದು.?
ದರ್ಶನ್ ಸಹೋದರ ದಿನಕರ್ ತೂಗುದೀಪ ನಿರ್ದೇಶನ ಮಾಡಲು ಹೊರಟಿರುವ ಹೊಸ ಚಿತ್ರಕ್ಕೆ 'ಲೈಫ್ ಜೊತೆ ಒಂದು ಸೆಲ್ಫಿ' ಎಂಬ ಶೀರ್ಷಿಕೆ ಇಡಲಾಗಿದೆ.
ಕಥೆ ಬರೆದಿರುವವರು ಯಾರು ಗೊತ್ತಾ.?
'ಲೈಫ್ ಜೊತೆ ಒಂದು ಸೆಲ್ಫಿ' ಕಥೆ ಬರೆದಿರುವವರು ಮಾನಸ ದಿನಕರ್. ಅದೇ ಕಥೆಗೆ ಚಿತ್ರಕಥೆ ಹೆಣೆದು ಇದೀಗ ಸಿನಿಮಾ ಮಾಡಲು ಹೊರಟಿದ್ದಾರೆ ದಿನಕರ್ ತೂಗುದೀಪ.
ಮುಖ್ಯಭೂಮಿಕೆಯಲ್ಲಿ ಯಾರ್ಯಾರು.?
'ಲೈಫ್ ಜೊತೆ ಒಂದು ಸೆಲ್ಫಿ' ಚಿತ್ರದ ಮುಖ್ಯಭೂಮಿಕೆಯಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಕಾಣಿಸಿಕೊಳ್ಳಲಿದ್ದಾರೆ.
ಯಾವಾಗ್ಲಿಂದ ಸಿನಿಮಾ ಶುರು.?
'ಲೈಫ್ ಜೊತೆ ಒಂದು ಸೆಲ್ಫಿ' ಚಿತ್ರಕ್ಕೆ ಸಮೃದ್ಧಿ ಮಂಜುನಾಥ್ ಬಂಡವಾಳ ಹಾಕಲಿದ್ದಾರೆ. ಈ ಚಿತ್ರಕ್ಕೆ ಆಗಸ್ಟ್ ಕೊನೆಯ ವಾರದಲ್ಲಿ ಚಾಲನೆ ಸಿಗಲಿದ್ದು, ಸೆಪ್ಟೆಂಬರ್ 15 ರಿಂದ ಶೂಟಿಂಗ್ ಶುರು ಆಗಲಿದೆ.