Don't Miss!
- News ಕಾಂಗ್ರೆಸ್ನಿಂದಲೇ 'ನೇಹಾ ಕೊಲೆ' ತನಿಖೆ ದಾರಿ ತಪ್ಪಿಸಲು ಯತ್ನ: ತಂದೆಯನ್ನೇ ಕೊಲ್ಲಲು ಹೋಗಿದ್ದ ಫಯಾಜ್: ನಿರಂಜನ್ ಹಿರೇಮಠ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಅಮೀರ್ ಖಾನ್ ವಿರುದ್ಧ ತಿರುಗಿಬಿದ್ದ ವೈದ್ಯರು
ತಮ್ಮ ಕಾರ್ಯಕ್ರದಲ್ಲಿ ವೈದ್ಯರನ್ನು ಅಮೀರ್ ಕೆಟ್ಟದಾಗಿ ಬಿಂಬಿಸಿದ್ದಾರೆ. 'ಸತ್ಯಮೇವ ಜಯತೆ' ನಾಲ್ಕನೆ ಕಂತು ವೈದ್ಯರ ಅನುಚಿತ ವರ್ತನೆ ಬಗ್ಗೆ ಬೆಳಕು ಚೆಲ್ಲಿತ್ತು. ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವೈದ್ಯರು ಅಮೀರ್ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವೈದ್ಯ ಇಲಾಖೆಯಲ್ಲಿನ ಭ್ರಷ್ಟಾಚಾರ, ಅನೈತಿಕತೆ, ನಿರ್ಲಕ್ಷ್ಯ ಹಾಗೂ ದೌರ್ಜನ್ಯದ ಬಗ್ಗೆ 'ಸತ್ಯಮೇವ ಜಯತೆ' ನಾಲ್ಕನೆ ಕಂತಿನಲ್ಲಿ ಪ್ರಸಾರ ಮಾಡಲಾಗಿತ್ತು. ಅಮೀರ್ ಖಾನ್ ಈ ರೀತಿ ವೈದ್ಯರನ್ನು ತೋರಿಸಿದ್ದು ಸರಿಯಲ್ಲ ಎಂದು 21 ವೈದ್ಯಕೀಯ ಕಾಲೇಜುಗಳ ಒಕ್ಕೂಟ 'ಮೆಡ್ ಸ್ಕೇಪ್ ಇಂಡಿಯಾ' ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
"ಅಮೀರ್ ಖಾನ್ ನನ್ನ ಮೆಚ್ಚಿನ ನಟ. ಅವರು ಚಿತ್ರನಿರ್ಮಾಣಕ್ಕಷ್ಟೇ ಸೀಮಿತವಾದರೆ ಚೆನ್ನಾಗಿರುತ್ತದೆ. ವೈದ್ಯರ ಮೇಲೆ ಹಲ್ಲೆ ನಡೆದಂತಹ ಸಂದರ್ಭಗಳಲ್ಲಿ ಅಮೀರ್ ಖಾನ್ ಎಲ್ಲಿ ಹೋಗಿದ್ದರು" " ಎಂದು ಮೆಡ್ಸ್ಕೇಪ್ ಅಧ್ಯಕ್ಷೆ ಸುನಿತಾ ದುಬೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ವೈದ್ಯರು ತೀವ್ರ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲೂ ಅವರು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಅವರ ಕರ್ತವ್ಯ ಲೋಪ ಏನೂ ಇಲ್ಲದಿದ್ದರೂ ಅವರ ಮೇಲೆ ಹಲ್ಲೆಗಳಾಗುತ್ತಿವೆ. ಎಷ್ಟೋ ಸಂದರ್ಭಗಳಲ್ಲಿ ವೈದ್ಯರು ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಅಮೀರ್ ಖಾನ್ಗೆ ಇವೆಲ್ಲಾ ಕಣ್ಣಿಗೆ ಬೀಳದಿರುವುದು ಶೋಚನೀಯ ಎಂದಿದ್ದಾರೆ ವೈದ್ಯರು. (ಏಜೆನ್ಸೀಸ್)