Don't Miss!
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- News ವಸೂಲಿ ಟೈಟಾನ್ಸ್, ಇಂಪ್ಯಾಕ್ಟ್ ಪ್ಲೇಯರ್ ಇ.ಡಿ; ಮೋದಿ, ಬಿಜೆಪಿಯನ್ನು ಅಣಕಿಸಿದ ಮಹಿಳಾ ಕ್ರಿಕೆಟರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮ ಕುಟುಂಬದ ನೆಮ್ಮದಿ ಹಾಳುಮಾಡಿದ್ದೇ ಅವನು
ಇನ್ನು ಮಾಧ್ಯಮಗಳಲ್ಲಿ ಹೇಮಶ್ರೀ ಅವರ ಗೆಳತಿಯೆಂದು ಹೇಳಿಕೊಂಡು ಹಲವಾರು ಮಂದಿ ಮಾತನಾಡುತ್ತಿರುವುದು ಅಚ್ಚರಿ ತಂದಿದೆ. ಮಾಧ್ಯಮಗಳಲ್ಲಿ ಪ್ರಸಾರವಾದ ಹೇಮಶ್ರೀ ಧ್ವನಿಮುದ್ರಣದ ಬಗ್ಗೆ ನನಗೇನು ಗೊತ್ತಿಲ್ಲ. ಆ ಸಿಡಿಯಲ್ಲಿರುವ ಧ್ವನಿ ಹೇಮಶ್ರೀ ಅವರದು ಎಂಬ ಬಗ್ಗೆ ನನಗೆ ಅನುಮಾನವಿದೆ.
ಆ ಸಿಡಿಯನ್ನು ಮಾಧ್ಯಮಗಳಿಗೆ ತಂದುಕೊಟ್ಟವರು ಪೊಲೀಸರಿಗೂ ಕೊಡಬಹುದಾಗಿತ್ತು ಅಲ್ಲವೇ? ಹಾಗೇಕೆ ಮಾಡಲಿಲ್ಲ ಎಂದು ರೂಪಶ್ರೀ ಪ್ರಶ್ನಿಸಿದರು. ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರಗಳು ನಡೆಯುತ್ತಲೇ ಇವೆ. ಇದರಲ್ಲಿ ಅವರ ಕೈವಾಡ ಇರುವ ಸಾಧ್ಯತೆಗಳಿವೆ ಎಂದು ಅವರು ಅನುಮಾನ ವ್ಯಕ್ತಪಡಿಸಿದರು.
ಇನ್ನು ಮಂಜುನಾಥ್ ಎಂಬುವವರ ಜೊತೆಗೆ ಹೇಮಶ್ರೀಗೆ ಗೆಳೆತನವಿತ್ತು ಎಂಬ ಬಗ್ಗೆ ಮಾತನಾಡಿದ ಅವರು, ಹೇಮಶ್ರೀಯನ್ನು ಪ್ರೀತಿಸುತ್ತಿದ್ದೇನೆ ಎಂದು ಆತ ಎಂದೂ ಹೇಳಿರಲಿಲ್ಲ. ಅವರಿಬ್ಬರ ನಡುವೆ ಸ್ನೇಹದ ಜೊತೆಗೆ ಸಲುಗೆಯೂ ಇತ್ತು. ನಮ್ಮ ಕುಟುಂಬದ ನೆಮ್ಮದಿ ಹಾಳುಮಾಡಿದ್ದು ಆತನೇ ಎಂದರು.
ರೂಪಶ್ರೀ ಮಾಡಿರುವ ಈ ಎಲ್ಲಾ ಆರೋಪಗಳನ್ನು ಅವರ ದೊಡ್ಡಮ್ಮನ ಮಗ ಕೇಶವಬಾಬು ಎಂಬುವವರು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಆಕೆ ಹೇಳುತ್ತಿರುವ ಮಾತುಗಳಲ್ಲಿ ಹುರುಳಿಲ್ಲ. ಅವರು ವೈದ್ಯರಾದರೂ ಎಲ್ಲೂ ಪ್ರಾಕ್ಟೀಸ್ ಮಾಡುತ್ತಿಲ್ಲ ಎಂದಿದ್ದಾರೆ. ಈ ಮೂಲಕ ಹೇಮಶ್ರೀ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. (ಒನ್ಇಂಡಿಯಾ ಕನ್ನಡ)