Don't Miss!
- News ಕಾಂಗ್ರೆಸ್ನಿಂದಲೇ 'ನೇಹಾ ಕೊಲೆ' ತನಿಖೆ ದಾರಿ ತಪ್ಪಿಸಲು ಯತ್ನ: ತಂದೆಯನ್ನೇ ಕೊಲ್ಲಲು ಹೋಗಿದ್ದ ಫಯಾಜ್: ನಿರಂಜನ್ ಹಿರೇಮಠ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮ ಕುಟುಂಬದ ನೆಮ್ಮದಿ ಹಾಳುಮಾಡಿದ್ದೇ ಅವನು
ಇನ್ನು ಮಾಧ್ಯಮಗಳಲ್ಲಿ ಹೇಮಶ್ರೀ ಅವರ ಗೆಳತಿಯೆಂದು ಹೇಳಿಕೊಂಡು ಹಲವಾರು ಮಂದಿ ಮಾತನಾಡುತ್ತಿರುವುದು ಅಚ್ಚರಿ ತಂದಿದೆ. ಮಾಧ್ಯಮಗಳಲ್ಲಿ ಪ್ರಸಾರವಾದ ಹೇಮಶ್ರೀ ಧ್ವನಿಮುದ್ರಣದ ಬಗ್ಗೆ ನನಗೇನು ಗೊತ್ತಿಲ್ಲ. ಆ ಸಿಡಿಯಲ್ಲಿರುವ ಧ್ವನಿ ಹೇಮಶ್ರೀ ಅವರದು ಎಂಬ ಬಗ್ಗೆ ನನಗೆ ಅನುಮಾನವಿದೆ.
ಆ ಸಿಡಿಯನ್ನು ಮಾಧ್ಯಮಗಳಿಗೆ ತಂದುಕೊಟ್ಟವರು ಪೊಲೀಸರಿಗೂ ಕೊಡಬಹುದಾಗಿತ್ತು ಅಲ್ಲವೇ? ಹಾಗೇಕೆ ಮಾಡಲಿಲ್ಲ ಎಂದು ರೂಪಶ್ರೀ ಪ್ರಶ್ನಿಸಿದರು. ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರಗಳು ನಡೆಯುತ್ತಲೇ ಇವೆ. ಇದರಲ್ಲಿ ಅವರ ಕೈವಾಡ ಇರುವ ಸಾಧ್ಯತೆಗಳಿವೆ ಎಂದು ಅವರು ಅನುಮಾನ ವ್ಯಕ್ತಪಡಿಸಿದರು.
ಇನ್ನು ಮಂಜುನಾಥ್ ಎಂಬುವವರ ಜೊತೆಗೆ ಹೇಮಶ್ರೀಗೆ ಗೆಳೆತನವಿತ್ತು ಎಂಬ ಬಗ್ಗೆ ಮಾತನಾಡಿದ ಅವರು, ಹೇಮಶ್ರೀಯನ್ನು ಪ್ರೀತಿಸುತ್ತಿದ್ದೇನೆ ಎಂದು ಆತ ಎಂದೂ ಹೇಳಿರಲಿಲ್ಲ. ಅವರಿಬ್ಬರ ನಡುವೆ ಸ್ನೇಹದ ಜೊತೆಗೆ ಸಲುಗೆಯೂ ಇತ್ತು. ನಮ್ಮ ಕುಟುಂಬದ ನೆಮ್ಮದಿ ಹಾಳುಮಾಡಿದ್ದು ಆತನೇ ಎಂದರು.
ರೂಪಶ್ರೀ ಮಾಡಿರುವ ಈ ಎಲ್ಲಾ ಆರೋಪಗಳನ್ನು ಅವರ ದೊಡ್ಡಮ್ಮನ ಮಗ ಕೇಶವಬಾಬು ಎಂಬುವವರು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಆಕೆ ಹೇಳುತ್ತಿರುವ ಮಾತುಗಳಲ್ಲಿ ಹುರುಳಿಲ್ಲ. ಅವರು ವೈದ್ಯರಾದರೂ ಎಲ್ಲೂ ಪ್ರಾಕ್ಟೀಸ್ ಮಾಡುತ್ತಿಲ್ಲ ಎಂದಿದ್ದಾರೆ. ಈ ಮೂಲಕ ಹೇಮಶ್ರೀ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. (ಒನ್ಇಂಡಿಯಾ ಕನ್ನಡ)