Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈಟಿವಿ ಕನ್ನಡದಲ್ಲಿ ಅಣ್ಣಾವ್ರ 'ಸಂಪತ್ತಿಗೆ ಸವಾಲ್' ಚಿತ್ರ
ವರನಟ ಡಾ.ರಾಜ್ ಕುಮಾರ್ ಅವರಿಗೆ ಅಪಾರ ಹೆಸರು, ಕೀರ್ತಿ, ಹೊಸ ಇಮೇಜ್ ತಂದುಕೊಟ್ಟಂತಹ ಚಿತ್ರ 'ಸಂಪತ್ತಿಗೆ ಸವಾಲ್' (1974). ಉತ್ತರ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಈ ನಾಟಕವನ್ನು ಬರೆದವರು ಹೆಸರಾಂತ ನಾಟಕಕಾರರಾದ ಪಿ.ಬಿ.ಧುತ್ತರಗಿ.
ಶ್ರೀಮಂತರ ಸೊಕ್ಕು ಅಡಗಿಸುವ ಅವರ ಅಹಂಕಾರ, ದೌರ್ಜನ್ಯದ ವಿರುದ್ಧ ಸಿಡಿದೇಳುವ ನಾಯಕ ಹೇಗೆ ಸಂಪತ್ತಿಗೆ ಸವಾಲ್ ಒಡ್ಡುತ್ತಾನೆ ಎಂಬುದೇ ಚಿತ್ರದ ಕಥಾವಸ್ತು. ಸಂಪತ್ತಿಗೆ ಸವಾಲ್ ನಾಟಕವನ್ನು ನೋಡಿದ ರಾಜಕುಮಾರ್ ಮತ್ತು ಕುಟುಂಬ ಇದೇ ಹೆಸರಿನಲ್ಲಿ ಚಿತ್ರ ಮಾಡಲು ನಿರ್ಧರಿಸಿದರು.
ಪದ್ಮಶ್ರೀ ಬ್ಯಾನಲ್ ಲಾಂಛನದಲ್ಲಿ ನಿರ್ಮಾಣವಾದ ಈ ಚಿತ್ರದಲ್ಲಿ ರಾಜ್ ಕುಮಾರ್ ಗೆ ಮಂಜುಳಾ ಜೋಡಿ. ಪೋಷಕ ಪಾತ್ರಗಳಲ್ಲಿ ಎಂ.ವಿ.ರಾಜಮ್ಮ, ವಜ್ರಮುನಿ, ರಾಜಾಶಂಕರ್, ಬಾಲಕೃಷ್ಣ, ಜೋಕರ್ ಶ್ಯಾಮ್, ಬಿ.ಜಯ ಮುಂತಾದವರಿದ್ದಾರೆ.
ಜಿ.ಕೆ.ವೆಂಕಟೇಶ್ ಅವರ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ, ಚಿಟ್ಟಿಬಾಬು ಛಾಯಾಗ್ರಹಣವಿರುವ ಚಿತ್ರವನ್ನು ಎ.ವಿ.ಶೇಷಗಿರಿರಾವ್ ನಿರ್ದೇಶಿಸಿದ್ದಾರೆ. ಚಿತ್ರದ ನಿರ್ಮಾಪಕರು ಎ.ಎನ್.ಮೂರ್ತಿ. ಈಟಿವಿ ಕನ್ನಡದಲ್ಲಿ ಇದೇ ಭಾನುವಾರ (ನವೆಂಬರ್ 24) ಸಂಜೆ 5ಕ್ಕೆ ವೀಕ್ಷಿಸಬಹುದು. (ಒನ್ಇಂಡಿಯಾ ಕನ್ನಡ)