Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದಿನಿಂದ ಮತ್ತೆ 'ಡ್ರಾಮಾ' ಶುರುವಾಗ್ತಿದೆ.!
'ಕಾಮಿಡಿ ಕಿಲಾಡಿಗಳು ಚಾಂಪಿಯನ್ ಷಿಪ್' ಮುಗಿತು ಮುಂದೇನು ಎನ್ನುವಷ್ಟರಲ್ಲಿ ಈಗ ಮತ್ತೊಂದು ಜನಪ್ರಿಯ ರಿಯಾಲಿಟಿ ಶೋ ನಿಮ್ಮ ಮುಂದೆ ಬರ್ತಿದೆ. ನಗು, ಅಳು, ಕೋಪ, ಪ್ರೇಮ, ಪ್ರೀತಿ, ತರಲೆ, ಹೀಗೆ ಎಲ್ಲವೂ ಈ ಕಾರ್ಯಕ್ರಮದಲ್ಲಿ ಇರಲಿದೆ.
ಹೌದು, ಜೀ-ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾದ 'ಡ್ರಾಮಾ ಜೂನಿಯರ್ಸ್' ಮತ್ತೆ ಬರ್ತಿದೆ. ಈಗಾಗಲೇ ಎರಡು ಸೀಸನ್ ಗಳಲ್ಲಿ ಸಕ್ಸಸ್ ಫುಲ್ ಆಗಿ ಮುಗಿಸಿರುವ ಈ ಶೋ ಈಗ ಮೂರನೇ ಆವೃತ್ತಿ ಮೂಲಕ ನಿಮ್ಮನ್ನೆಲ್ಲ ರಂಜಿಸಲು ಸಜ್ಜಾಗಿದೆ.
ಕಾಮಿಡಿ ಕಿಲಾಡಿಗಳು ಚಾಂಪಿಯನ್ ಷಿಪ್ ಗೆದ್ದ 'ದಿನೇಶ್ ದಿಗ್ಗಜರು'
ರಾಜ್ಯಾದ್ಯಂತ 30 ಜಿಲ್ಲೆಗಳಲ್ಲಿ ಆಡಿಷನ್ ಪ್ರಕ್ರಿಯೆ ಮಾಡಿ, ಅದರಲ್ಲಿ ಅಭಿನಯ ಕೌಶಲ್ಯವುಳ್ಳ 30 ಮಕ್ಕಳನ್ನ ಆಯ್ಕೆ ಮಾಡಲಾಗಿದೆ. ಈ ಮೂವತ್ತು ಮಕ್ಕಳು ಮೆಗಾ ಆಡಿಷನ್ ನಲ್ಲಿ ಭಾಗಿಯಾಗಲಿದ್ದಾರೆ. ಅದರಲ್ಲಿ ಅತ್ಯುತ್ತಮವೆನಿಸುವ ಕೆಲವು ಮಕ್ಕಳನ್ನ ಮಾತ್ರ ಆಯ್ಕೆ ಮಾಡಿಕೊಳ್ಳಲಾಗುವುದು.
ಕನ್ನಡ ಕಿರುತೆರೆ ಕಾರ್ಯಕ್ರಮಕ್ಕೆ ಬರ್ತಾರೆ ಇಳಯರಾಜ
5 ರಿಂದ 13 ವಯಸ್ಸಿನ ಮಕ್ಕಳು ಈ ಶೋನಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಕಾರ್ಯಕ್ರಮದ ಪ್ರೋಮೋಗಳು ಬಿಡುಗಡೆಯಾಗಿದ್ದು, ಇಂದಿನಿಂದ ನಿಜವಾದ ಡ್ರಾಮಾ ಆರಂಭವಾಗ್ತಿದೆ.
ಈ ಧಾರಾವಾಹಿಗಳ ಯಶಸ್ಸಿನ ಹಿಂದೆ ಇವರಿದ್ದಾರೆ
ಇದೇ ಶನಿವಾರ ರಾತ್ರಿ 9 ಗಂಟಗೆ 'ಡ್ರಾಮಾ ಜೂನಿಯರ್ಸ್ ಸೀಸನ್ 3' ಆರಂಭವಾಗುತ್ತಿದ್ದು, ಈ ಕಾರ್ಯಕ್ರಮವನ್ನ ಈ ಹಿಂದಿನ ಆವೃತ್ತಿಗಳಂತೆ ಮಾಸ್ಟರ್ ಆನಂದ್ ಅವರೇ ನಿರೂಪಣೆ ಮಾಡಲಿದ್ದಾರೆ. ಹಿರಿಯ ನಟಿ ಜೂಲಿ ಲಕ್ಷ್ಮಿ, ಮುಖ್ಯಮಂತ್ರಿ ಚಂದ್ರು ಹಾಗೂ ವಿಜಯ ರಾಘವೇಂದ್ರ ಈ ಶೋಗೆ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.