Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿ ಬೆಳಗೆರೆಗೆ ಆ ಸಮಯದಲ್ಲಿ ಶಾಪ ಹಾಕಿದ್ದರಂತೆ ದುನಿಯಾ ರಶ್ಮಿ
Recommended Video
ದುನಿಯಾ ರಶ್ಮಿ ಕುರಿತು ಪತ್ರಕರ್ತ ರವಿ ಬೆಳಗೆರೆ ತಮ್ಮ 'ಹಾಯ್ ಬೆಂಗಳೂರು' ಪತ್ರಿಕೆಯಲ್ಲಿ ಕೆಟ್ಟದಾಗಿ ಬರೆದಿದ್ದರು ಎಂದು ಸ್ವತಃ ರಶ್ಮಿ ಹೇಳಿಕೊಂಡಿದ್ದರು. ಈಗ ದೊಡ್ಮನೆಯಿಂದ ರಶ್ಮಿ ಎಲಿಮಿನೇಟ್ ಆಗಿದ್ದಾರೆ.
ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ, ನಟಿ ದುನಿಯಾ ರಶ್ಮಿ, ಫಿಲ್ಮಿಬೀಟ್ ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ಜರ್ನಿ ಬಗ್ಗೆ ಅಲ್ಲಿನ ಸಹ ಸ್ಪರ್ಧಿಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.
ಈ ಸಂದರ್ಶನದಲ್ಲಿ ರವಿ ಬೆಳಗೆರೆ ಕುರಿತು ಮಾತನಾಡಿದ ರಶ್ಮಿ ''ಆಗೊಂದು ಸಲ ನನ್ನ ಬಗ್ಗೆ ಕೆಟ್ಟದಾಗಿ ಬರೆದಿದ್ದರು. ಆಗ ತುಂಬಾ ಕೋಪವಿತ್ತು. ಬಹಳ ಬೈಯ್ದುಕೊಂಡಿದ್ದೆ. ಶಾಪ ಕೂಡ ಹಾಕಿದ್ದೆ. ಬಳಿಕ ಬಿಗ್ ಬಾಸ್ ಮನೆಯಲ್ಲಿ ನಮ್ಮ ಜೊತೆ ಮಾತನಾಡಿದ್ಮೇಲೆ ವಾಹ್ ಎನಿಸಿತು'' ಎಂದು ಖುಷಿ ವ್ಯಕ್ತಪಡಿಸಿದ್ದಾರೆ.
'ಅವರು ನನ್ನನ್ನೂ ಬಿಟ್ಟಿಲ್ಲ': ರವಿ ಬೆಳಗೆರೆ ಬಗ್ಗೆ ದುನಿಯಾ ರಶ್ಮಿ ಹೇಳಿದ್ದೇನು.?
''ರವಿ ಬೆಳಗೆರೆ ತಮ್ಮ ಕುಟುಂಬದ ಬಗ್ಗೆ, ಅವರ ಕಥೆಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಹೆಚ್ಚು ಸಮಯ ನಮ್ಮೊಂದಿಗೆ ಕಳೆಯುತ್ತಿದ್ದರು. ಏನಾದರೂ ಕಷ್ಟ ಬಂದಾಗ ನನ್ನ ಬಳಿ ಬಾ ಎಂದು ಧೈರ್ಯ ನೀಡಿದ್ದರು. ಈಗ ಹೊರಗೆ ಬಂದಿದ್ದೇನೆ. ಅವರನ್ನು ಭೇಟಿ ಮಾಡುತ್ತೇನೆ'' ಎಂದು ರಶ್ಮಿ ತಿಳಿಸಿದರು.
2007ರಲ್ಲಿ 'ದುನಿಯಾ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ರಶ್ಮಿ, ಮೊದಲ ಸಿನಿಮಾದಲ್ಲೇ ಯಶಸ್ಸು ಕಂಡರು. ಅಲ್ಲಿಂದ ದುನಿಯಾ ರಶ್ಮಿ ಎಂದೇ ಖ್ಯಾತಿ ಗಳಿಸಿಕೊಂರು. ಹಲವು ಸಿನಿಮಾಗಳಲ್ಲಿ ನಟಿಸಿದರು. ಆದರೆ, ಹೇಳಿಕೊಳ್ಳುವ ಯಶಸ್ಸು ಸಿಕ್ಕಿಲ್ಲ. ಈಗ ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೆ ಒಳ್ಳೆಯ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಕೊನೆಯದಾಗಿ ಕಾರ್ನಿ ಸಿನಿಮಾದಲ್ಲಿ ರಶ್ಮಿ ನಟಿಸಿದ್ದರು.