Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿ ಬೆಳಗೆರೆಗೆ ಆ ಸಮಯದಲ್ಲಿ ಶಾಪ ಹಾಕಿದ್ದರಂತೆ ದುನಿಯಾ ರಶ್ಮಿ
Recommended Video
ದುನಿಯಾ ರಶ್ಮಿ ಕುರಿತು ಪತ್ರಕರ್ತ ರವಿ ಬೆಳಗೆರೆ ತಮ್ಮ 'ಹಾಯ್ ಬೆಂಗಳೂರು' ಪತ್ರಿಕೆಯಲ್ಲಿ ಕೆಟ್ಟದಾಗಿ ಬರೆದಿದ್ದರು ಎಂದು ಸ್ವತಃ ರಶ್ಮಿ ಹೇಳಿಕೊಂಡಿದ್ದರು. ಈಗ ದೊಡ್ಮನೆಯಿಂದ ರಶ್ಮಿ ಎಲಿಮಿನೇಟ್ ಆಗಿದ್ದಾರೆ.
ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ, ನಟಿ ದುನಿಯಾ ರಶ್ಮಿ, ಫಿಲ್ಮಿಬೀಟ್ ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ಜರ್ನಿ ಬಗ್ಗೆ ಅಲ್ಲಿನ ಸಹ ಸ್ಪರ್ಧಿಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.
ಈ ಸಂದರ್ಶನದಲ್ಲಿ ರವಿ ಬೆಳಗೆರೆ ಕುರಿತು ಮಾತನಾಡಿದ ರಶ್ಮಿ ''ಆಗೊಂದು ಸಲ ನನ್ನ ಬಗ್ಗೆ ಕೆಟ್ಟದಾಗಿ ಬರೆದಿದ್ದರು. ಆಗ ತುಂಬಾ ಕೋಪವಿತ್ತು. ಬಹಳ ಬೈಯ್ದುಕೊಂಡಿದ್ದೆ. ಶಾಪ ಕೂಡ ಹಾಕಿದ್ದೆ. ಬಳಿಕ ಬಿಗ್ ಬಾಸ್ ಮನೆಯಲ್ಲಿ ನಮ್ಮ ಜೊತೆ ಮಾತನಾಡಿದ್ಮೇಲೆ ವಾಹ್ ಎನಿಸಿತು'' ಎಂದು ಖುಷಿ ವ್ಯಕ್ತಪಡಿಸಿದ್ದಾರೆ.
'ಅವರು ನನ್ನನ್ನೂ ಬಿಟ್ಟಿಲ್ಲ': ರವಿ ಬೆಳಗೆರೆ ಬಗ್ಗೆ ದುನಿಯಾ ರಶ್ಮಿ ಹೇಳಿದ್ದೇನು.?
''ರವಿ ಬೆಳಗೆರೆ ತಮ್ಮ ಕುಟುಂಬದ ಬಗ್ಗೆ, ಅವರ ಕಥೆಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. ಹೆಚ್ಚು ಸಮಯ ನಮ್ಮೊಂದಿಗೆ ಕಳೆಯುತ್ತಿದ್ದರು. ಏನಾದರೂ ಕಷ್ಟ ಬಂದಾಗ ನನ್ನ ಬಳಿ ಬಾ ಎಂದು ಧೈರ್ಯ ನೀಡಿದ್ದರು. ಈಗ ಹೊರಗೆ ಬಂದಿದ್ದೇನೆ. ಅವರನ್ನು ಭೇಟಿ ಮಾಡುತ್ತೇನೆ'' ಎಂದು ರಶ್ಮಿ ತಿಳಿಸಿದರು.
2007ರಲ್ಲಿ 'ದುನಿಯಾ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ರಶ್ಮಿ, ಮೊದಲ ಸಿನಿಮಾದಲ್ಲೇ ಯಶಸ್ಸು ಕಂಡರು. ಅಲ್ಲಿಂದ ದುನಿಯಾ ರಶ್ಮಿ ಎಂದೇ ಖ್ಯಾತಿ ಗಳಿಸಿಕೊಂರು. ಹಲವು ಸಿನಿಮಾಗಳಲ್ಲಿ ನಟಿಸಿದರು. ಆದರೆ, ಹೇಳಿಕೊಳ್ಳುವ ಯಶಸ್ಸು ಸಿಕ್ಕಿಲ್ಲ. ಈಗ ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೆ ಒಳ್ಳೆಯ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಕೊನೆಯದಾಗಿ ಕಾರ್ನಿ ಸಿನಿಮಾದಲ್ಲಿ ರಶ್ಮಿ ನಟಿಸಿದ್ದರು.