Don't Miss!
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- News Mukhtar Ansari: ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿಂದೂ ಭಾವನೆಗೆ ಧಕ್ಕೆ ತಂದ ಆರೋಪ; ಅಮಿತಾಬ್ ಬಚ್ಚನ್ ವಿರುದ್ಧ FIR
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಿಂದಿ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ 'ಕೌನ್ ಬನೇಗಾ ಕರೋಡ್ ಪತಿ 12'ರಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಸಂಬಂಧಿಸಿದಂತೆ ಲಖನೌ ಪೊಲೀಸ್ ಸ್ಟೇಷನ್ ನಲ್ಲಿ ಅಮಿತಾಬ್ ಮತ್ತು ಸೋನಿ ಟಿವಿಯ ಕಾರ್ಯಕ್ರಮ ಆಯೋಜಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಸೋಮವಾರ 'ಕೌನ್ ಬನೇಗಾ ಕರೋಡ್ ಪತಿ 12'ರ ಕರ್ಮವೀರ್ ವಿಶೇಷ ಸಂಚಿಕೆಯಲ್ಲಿ ಕೇಳಲಾದ ಪ್ರಶ್ನೆಯೊಂದು ಹಿಂದೂ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಮಹಾರಾಷ್ಟ್ರ ಬಿಜೆಪಿ ಶಾಸಕ ಅಭಿಮನ್ಯು ಪವಾರ್ ದೂರು ದಾಖಲಿಸಿದ್ದಾರೆ.
ಮೋಸ್ಟ್ ಬ್ಯೂಟಿಫುಲ್ ಸೆಲೆಬ್ರಿಟಿ ದೀಪಿಕಾ, ಗೌರವಾನ್ವಿತ ವ್ಯಕ್ತಿ ಅಮಿತಾಭ್
ಸೋಮವಾರದ ಎಪಿಸೋಡ್ ನಲ್ಲಿ ನಟ ಅನೂಪ್ ಸೋನಿ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜ್ವಾಡಾ ವಿಲ್ಸನ್ ಹಾಟ್ ಸೀಟಿನಲ್ಲಿದ್ದರು. 6,40,000 ನಗದು ಪ್ರಶ್ನೆ ವಿವಾದ ಸೃಷ್ಟಿ ಮಾಡಿದೆ.
ಪ್ರಶ್ನೆ ಹೀಗಿದೆ: 1927ರ ಡಿಸೆಂಬರ್ 25ರಂದು ಡಾ.ಬಿ ಆರ್ ಅಂಬೇಡ್ಕರ್ ಮತ್ತು ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿ ಸುಟ್ಟುಹಾಕಿದ್ದರು?
ಆಯ್ಕೆಗಳು: ಎ) ವಿಷ್ಣು ಪುರಾಣ, ಬಿ) ಭಗವದ್ಗೀತೆ, ಸಿ) ಖಗ್ವೇದ, ಡಿ) ಮನುಸ್ಮೃತಿ
ಉತ್ತರ: ಮನುಸ್ಮೃತಿ. ಈ ಬಗ್ಗೆ ವಿವರಿಸಿದ ಅಮಿತಾಬ್ ಡಾ.ಅಂಬೇಡ್ಕರ್ ಪ್ರಾಚೀನ ಹಿಂದೂ ಪಠ್ಯದ ಪ್ರತಿಗಳನ್ನು ಖಂಡಿಸಿ ಸುಟ್ಟುಹಾಕಿದರು ಎಂದು ವಿವರಿಸಿದರು. 'ಇಲ್ಲಿ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಮಾತ್ರ ಆಯ್ಕೆಯಲ್ಲಿ ನೀಡಲಾಗಿದೆ. ಈ ಪ್ರಶ್ನೆ ಹಿಂದಿನ ಉದ್ದೇಶ ಹಿಂದೂಗಳ ಭಾವನೆಗಳನ್ನು ನೋಯಿಸುವುದು ಎಂಬುದು ಸ್ಪಷ್ಟವಾಗಿದೆ' ಎನ್ನುವ ಆರೋಪ ಕೇಳಿಬಂದಿದೆ.
ಈ ಪ್ರಶ್ನೆ ಹಿಂದೂ ಧಾರ್ಮಿಕ ಗ್ರಂಥಗಳನ್ನು ಸುಡುವ ಉದ್ದೇಶವನ್ನು ಹೊಂದಿದೆ ಮತ್ತು ಹಿಂದೂಗಳು ಹಾಗೂ ಬೌದ್ಧ ಧರ್ಮದ ಅನುಯಾಯಿಗಳ ನಡುವೆ ಧ್ವೇಷ ಉಂಟುಮಾಡುವ ಸಂದೇಶ ಹರಡುತ್ತಿದೆ ಎಂದು ಅಭಿಮನ್ಯು ಪವಾರ್ ದೂರಿದ್ದಾರೆ.