Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದ ಪ್ರಪ್ರಥಮ ಇನ್ಫೋಟೈನ್ಮೆಂಟ್ ವಾಹಿನಿ ಲೋಕಾರ್ಪಣೆ
ಸುದ್ದಿಮನೆ, ಧಾರವಾಹಿ, ಮನೋರಂಜನೆಯಿಂದ ಹೊರತಾಗಿ ವಿಭಿನ್ನ ರೀತಿಯ ಕಾರ್ಯಕ್ರಮ ವೀಕ್ಷಿಸಲು ಬಯಸುವ ಕನ್ನಡ ಟಿವಿ ವೀಕ್ಷಕರ ಆಶೋತ್ತರ ಈಡೇರಿಸುವ ಉದ್ದೇಶದಿಂದ ಹೊಸ ವಾಹಿನಿಯೊಂದು ಸದ್ಯದಲ್ಲೇ ಲೋಕಾರ್ಪಣೆಗೊಳ್ಳಲಿದೆ.
ರಾಜ್ಯದ ಪ್ರಪ್ರಥಮ ಇನ್ಫೋಟೈನ್ಮೆಂಟ್ ವಾಹಿನಿ "ಸರಳ ಜೀವನ" ಎನ್ನುವ ಹೆಸರಿನಲ್ಲಿ ಇದೇ ಬರುವ ಶುಕ್ರವಾರ(ಫೆಬ್ರವರಿ 19ರಂದು) ಕನ್ನಡ ಟಿವಿ ವೀಕ್ಷಕರ ಮುಂದೆ ಬರಲಿದೆ.
ಭಾರತೀಯ ಸಂಸ್ಕೃತಿ, ನಮ್ಮ ಪರಂಪರೆಗಳನ್ನು ಪ್ರತಿಬಿಂಬಿಸುವ, ಸದಭಿರುಚಿಯ ಮತ್ತು ಸಕಾರಾತ್ಮಕ ಚಿಂತನೆಗಳನ್ನೊಳಗೊಂಡ ಹಲವು ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಸದುದ್ದೇಶದಿಂದ ಈ ವಾಹಿನಿ ಆರಂಭಿಸುತ್ತಿದ್ದೇವೆ ಎನ್ನುವುದು ವಾಹಿನಿಯ ಕಮಿಟ್ಮೆಂಟ್.
ದೈನಂದಿನ ಸುದ್ಧಿ, ಧಾರವಾಹಿ ನೋಡಿ.. ನೋಡಿ 'ಜನ ಚೇಂಜ್ ಕೇಳ್ತಾ ಇದ್ದಾರೆ' ಎನ್ನುವ ವರ್ಗದ ಟಿವಿ ವೀಕ್ಷಕರಿಗೆ ಭರಪೂರ ಮನೋರಂಜನೆ ನೀಡುತ್ತೇವೆ ಎನ್ನುವ ಭರವಸೆಯ ಮಾತಿನೊಂದಿಗೆ ವಾಹಿನಿ ಸದ್ಯದಲ್ಲೇ ಆರಂಭವಾಗಲಿದೆ.
ಹಿರಿಯರು, ಮಕ್ಕಳು, ಯುವಕ, ಯುವತಿಯರು ಹೀಗೆ ಪ್ರತಿಯೊಬ್ಬರಿಗೂ ಉಪಯುಕ್ತವೆನಿಸುವ ಮಾಹಿತಿಯನ್ನು ಮನೋನರಂಜನೆಯ ಮೂಲಕ ನೀಡುವ ಪ್ರಾಮಾಣಿಕ ಪ್ರಯತ್ನ ನಮ್ಮದು ಎನ್ನುತ್ತಾರೆ ವಾಹಿನಿಯ ಬಳಗದವರು.
ನಮ್ಮ ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳನ್ನು ಮೆರೆಸುವ ನಿಟ್ಟಿನಲ್ಲಿ, ಸರಳ ವಾಸ್ತು ಸಂಸ್ಥಾಪಕ ಡಾ.ಚಂದ್ರಶೇಖರ ಗುರೂಜಿಯವರ ಮಾರ್ಗದರ್ಶನದಲ್ಲಿ, ಮನುಕುಲದ ಒಳಿತಿಗಾಗಿ ಎಂಬ ಧ್ಯೇಯ ವಾಕ್ಯದೊಂದಿಗೆ ಕನ್ನಡದ ಮೊಟ್ಟಮೊದಲ ನ್ಫೋಟೈನ್ಮೆಂಟ್ ಚಾನೆಲ್ 'ಸರಳ ಜೀವನ' ಇದೇ ಫೆಬ್ರವರಿ 19ರಿಂದ ನಿಮ್ಮ ಮನೆ ಮತ್ತು ಮನಗಳನ್ನು ತಲುಪಲಿದೆ.