twitter
    For Quick Alerts
    ALLOW NOTIFICATIONS  
    For Daily Alerts

    ವಿಭಿನ್ನ ಪಾತ್ರದ ಮೂಲಕ ತೆಲುಗು ಕಿರುತೆರೆಗೆ ಕಾಲಿಟ್ಟ 'ಗಟ್ಟಿಮೇಳ' ಖ್ಯಾತಿಯ ನಟಿ ಅಶ್ವಿನಿ

    |

    ಕನ್ನಡ ಕಿರುತೆರೆಯ ಖ್ಯಾತ ನಟಿ ಅಶ್ವಿನಿ ಈಗ ಪರಭಾಷೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಹೌದು, ಅಶ್ವಿನಿ ತೆಲುಗು ಕಿರುತೆರೆ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. 'ಗಟ್ಟಿಮೇಳ' ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರನ್ನು ರಂಜಿಸುತ್ತಿರುವ ನಟಿ ಅಶ್ವಿನಿ ಈಗ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚುವ ಮೂಲಕ ತೆಲುಗು ಕಿರುತೆರೆ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ.

    'ಗಟ್ಟಿಮೇಳ' ಧಾರಾವಾಹಿಯಲ್ಲಿ ಆರತಿ ಪಾತ್ರದ ಅಶ್ವಿನಿ ಕನ್ನಡಿಗರ ಮನೆಮಾತಾಗಿದ್ದಾರೆ. ಸಂಪ್ರದಾಯಸ್ಥ ಕುಟುಂಬದ ಹೆಣ್ಣು ಮಗಳಾಗಿ ಆರತಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಅಶ್ವಿನಿ 'ನಾಗಭೈರವಿ'ಯ ಅವತಾರದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಮುಂದೆ ಓದಿ...

    'ದಿಲ್ ಬರ್' ನಟಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ರಾ ಕೊರಿಯೋಗ್ರಾಫರ್?: ಪ್ರತಿಕ್ರಿಯೆ ನೀಡಿದ ನೋರಾ ಫತೇಹಿ'ದಿಲ್ ಬರ್' ನಟಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ರಾ ಕೊರಿಯೋಗ್ರಾಫರ್?: ಪ್ರತಿಕ್ರಿಯೆ ನೀಡಿದ ನೋರಾ ಫತೇಹಿ

    ಎರಡು ಶೇಡ್ ಗಳಲ್ಲಿ ಅಶ್ವಿನಿ ಮಿಂಚಿಂಗ್

    ಎರಡು ಶೇಡ್ ಗಳಲ್ಲಿ ಅಶ್ವಿನಿ ಮಿಂಚಿಂಗ್

    ತೆಲುಗಿನ 'ನಾಗಭೈರವಿ' ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅಶ್ವಿನಿ ಎರಡು ಶೇಡ್ ನಲ್ಲಿ ಮಿಂಚುತ್ತಿದ್ದಾರೆ. ನಾಗದೇವತೆ ಮತ್ತು ಬುಡಕಟ್ಟು ಜನಾಂಗದ ಹುಡುಗಿಯಾಗಿ ಅಭಿನಯಿಸುತ್ತಿದ್ದಾರೆ. ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿರುವ ಆರತಿ, 6 ಕೆಜಿ ತೂಕವನ್ನು ಇಳಿಸಿಕೊಂಡು ಸಣ್ಣಗಾಗಿದ್ದಾರೆ.

    ಪ್ರಮುಖ ಪಾತ್ರದಲ್ಲಿ ರಮ್ಯಾ ಕೃಷ್ಣ

    ಪ್ರಮುಖ ಪಾತ್ರದಲ್ಲಿ ರಮ್ಯಾ ಕೃಷ್ಣ

    ವಿಶೇಷ ಅಂದರೆ ಈ ಧಾರಾವಾಹಿಯಲ್ಲಿ ಖ್ಯಾತ ನಟಿ ರಮ್ಯಾ ಕೃಷ್ಮ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟಾಲಿವುಡ್ ಗೆ ಎಂಟ್ರಿ ಕೊಟ್ಟ ಮಾತ್ರಕ್ಕೆ ಕನ್ನಡ ಕಿರುತೆರೆಯಿಂದ ದೂರ ಆಗಲ್ಲ ಎನ್ನುತ್ತಿದ್ದಾರೆ ಅಶ್ವಿನಿ. ಅಲ್ಲದೆ ದೊಡ್ಡ ಪರದೆ ಮೇಲೆ ಮಿಂಚುವ ದೊಡ್ಡ ಕನಸು ಇಟ್ಟುಕೊಂಡಿದ್ದಾರೆ. ಈ ಧಾರಾವಾಹಿ ಬಣ್ಣದ ಬದುಕಿಗೆ ದೊಡ್ಡ ತಿರುವು ನೀಡುವ ನಿರೀಕ್ಷೆಯಲ್ಲಿದ್ದಾರೆ.

    ಸೂಪರ್-ಡೂಪರ್ ಹಿಟ್ ಧಾರಾವಾಹಿ ನಿರ್ದೇಶಕ ಈಗ ತರಕಾರಿ ವ್ಯಾಪಾರಿಸೂಪರ್-ಡೂಪರ್ ಹಿಟ್ ಧಾರಾವಾಹಿ ನಿರ್ದೇಶಕ ಈಗ ತರಕಾರಿ ವ್ಯಾಪಾರಿ

    ಧಾರಾವಾಹಿಯಲ್ಲಿ ಸಾಹಸ ಮತ್ತು ನೃತ್ಯ ದೃಶ್ಯಗಳೇ ಜಾಸ್ತಿ

    ಧಾರಾವಾಹಿಯಲ್ಲಿ ಸಾಹಸ ಮತ್ತು ನೃತ್ಯ ದೃಶ್ಯಗಳೇ ಜಾಸ್ತಿ

    ಭಾಷೆ ಬೇರೆಯಾಗಿರಬಹುದು ಭಾವವೊಂದೇ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಅಶ್ವಿನಿ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಸಾಕಷ್ಟು ಸಾಹಸ ದೃಶ್ಯಗಳಿವೆಯಂತೆ. ವಿಶೇಷ ಅಂದರೆ ನಟಿ ಅನುಷ್ಕಾ ಶೆಟ್ಟಿಗೆ ಸಾಹಸ ಹೇಳಿಕೊಟ್ಟ ಫೈಟ್ ಮಾಸ್ಟರ್, ಅಶ್ವಿನಿಗೂ ಸಾಹಸ ದೃಶ್ಯ ಹೇಳಿಕೊಟ್ಟಿದ್ದಾರಂತೆ. ಸಾಹಸ ಮತ್ತು ನೃತ್ಯ ದೃಶ್ಯಗಳು ಜಾಸ್ತಿ ಇರುವ ಕಾರಣ ಅಶ್ವಿನಿ ಈ ಧಾರಾವಾಹಿಗೆ ಹೆಚ್ಚು ಸಮಯ ನೀಡುತ್ತಿದ್ದಾರಂತೆ.

    Recommended Video

    ಅಭಿಮಾನಿ ತೋರಿದ ಪ್ರೀತಿಗೆ ಮೂಕನಂತಾದ ಅಪ್ಪು | Filmibeat Kannada
    ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿದ್ದ ಅಶ್ವಿನಿ

    ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿದ್ದ ಅಶ್ವಿನಿ

    ನಟಿ ಅಶ್ವಿನಿ 'ಗಟ್ಟಿಮೇಳ' ಧಾರಾವಾಹಿಯಲ್ಲಿ ಅಭಿನಯಿಸುವ ಮೊದಲು 'ರಾಧಾ ರಮಣ' ಧಾರಾವಾಹಿಯಲ್ಲಿ ನಟಿಸಿದ್ದರು. ಈ ಧಾರಾವಾಹಿಯಲ್ಲಿ ಅಶ್ವಿನಿ, ಪ್ರಮುಖ ಪಾತ್ರಧಾರಿ ರಮಣನ ತಂಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮುಗ್ದ ಹುಡುಗಿ ಪಾತ್ರದಲ್ಲಿ ಮಿಂಚಿದ್ದರು. ಇದೀಗ 'ನಾಗ ಬೈರವಿ' ಮೂಲಕ ಇದುವರೆಗೂ ಮಾಡಿದ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    English summary
    Kannada Gattimela serial Actress Ashwini playing lead role in Telugu serial Naga Bhairavi.
    Wednesday, October 7, 2020, 17:31
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X