Don't Miss!
- News ರಾಯಚೂರಿನಲ್ಲಿ ಭಿನ್ನಮತ ಸ್ಫೋಟ: ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ..!
- Automobiles ಇದು ಮಹೀಂದ್ರಾ ಥಾರ್ ಹೊಸ ಅಧ್ಯಾಯ: ಸ್ವಾತಂತ್ರ್ಯ ದಿನದಂದು 5-ಡೋರ್ ಅವತಾರದಲ್ಲಿ ಲಗ್ಗೆ
- Sports IPL 2024: 14 ವರ್ಷಗಳ ಹಿಂದಿನ ಬೃಹತ್ ಐಪಿಎಲ್ ದಾಖಲೆಯನ್ನು ಮುರಿದ SRH vs MI ಪಂದ್ಯ
- Finance ಲೋಕಸಭಾ ಚುನಾವಣೆ ಟಿಕೆಟ್ ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಂಸದ?
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಮಿಡಿ ಕಿಲಾಡಿಗಳು' ಶೋನಲ್ಲಿ ರಕ್ಷಿತಾ ಜಾಗಕ್ಕೆ ಗಣೇಶ್ ಎಂಟ್ರಿ.!
Recommended Video
ಕನ್ನಡ ಕಿರುತೆರೆಯ ಖ್ಯಾತ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಸೀಸನ್-3 ಪ್ರಾರಂಭವಾಗಿದೆ. ಇತ್ತೀಚಿಗಷ್ಟೆ ಅದ್ದೂರಿಯಾಗಿ ಪ್ರಾರಂಭವಾಗಿದೆ ಕಾಮಿಡಿ ಕಿಲಾಡಿಗಳು ಮೂರನೆ ಸೀಸನ್. ಕಳೆದ ಎರಡು ಸೀಸನ್ ನಂತೆ ಈ ಸೀಸನ್ ನಲ್ಲಿಯೂ ಜಡ್ಜ್ ಸೀಟಿನಲ್ಲಿ ನಿರ್ದೇಶಕ ಯೋಗರಾಜ್ ಭಟ್, ಜಗ್ಗೇಶ್ ಮತ್ತು ನಟಿ ರಕ್ಷಿತಾ ಕಾಣಿಸಿಕೊಳ್ಳುತ್ತಿದ್ದಾರೆ.
ಆದ್ರೆ ವಿಶೇಷ ಅಂದ್ರೆ ಈಗ ರಕ್ಷಿತಾ ಜಾಗಕ್ಕೆ ನಟ ಗೋಲ್ಡನ್ ಸ್ಟಾರ್ ಗಣೇಶ್ ಎಂಟ್ರಿ ಕೊಟ್ಟಿದ್ದಾರೆ. ಅಂದ್ರೆ ರಕ್ಷಿತಾ ಕಾಮಿಡಿ ಕಿಲಾಡಿಗಳು ಶೋನಿಂದ ಹೊರಬಂದ್ರ ಅಂತ ಅಚ್ಚರಿ ಪಡಬೇಡಿ. ರಕ್ಷಿತಾ ಜಾಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕೂತಿದ್ದಾರೆ ಅಷ್ಟೆ, ರಕ್ಷಿತಾ ಹೊರಹೋಗಿಲ್ಲ. ಕಾರಣ ರಕ್ಷಿತಾ ಅನಾರೋಗ್ಯದ ಕಾರಣ ಈ ವಾರದ ಶೋನಲ್ಲಿ ಹಾಜರಾಗುತ್ತಿಲ್ಲ.
ಧಾರಾವಾಹಿ ಪ್ರಪಂಚಕ್ಕೆ ರೀ ಎಂಟ್ರಿ ಕೊಟ್ಟ ವಿಷ್ಣು ದಾದನ ಅಳಿಯ ಅನಿರುದ್ಧ್
ಹಾಗಾಗಿ ಗೈರಾದ ರಕ್ಷಿತಾ ಜಾಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕಾಣಿಸಿಕೊಂಡಿದ್ದಾರೆ. ಈ ಬಾರಿಯ ಕಾಮಿಡಿ ಕಿಲಾಡಿ ಸ್ಪರ್ಧಿಗಳಿಗೆ ಗಣೇಶ್ ಮುಂದೆ ಪರ್ಫಾಮ್ ಮಾಡುವ ಅವಕಾಶ ಸಿಕ್ಕಿದೆ. ಗಣೇಶ್ ಕೂಡ ಕಾಮಿಡಿ ಮೂಲಕವೆ ಕಿರುತೆರೆಯಲ್ಲಿ ಖ್ಯಾತಿಗಳಿಸಿದ್ದರು. ಈಗ ದೊಡ್ಡ ನಟನಾಗಿ ಬೆಳೆದು ನಿಂತಿದ್ದಾರೆ.
ಗಣೇಶ್ ಜಡ್ಜ್ ಆಗಿ ಕೂತಿರುವ ಕಾಮಿಡಿ ಕಿಲಾಡಿಗಳು ಶೋ ಇದೆ ವಾರ 21 ಮತ್ತು 22ರಂದು ಪ್ರಸಾರವಾಗಲಿದೆ. ಸದ್ಯ ಗಣೇಶ್ ಗೀತಾ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಈಗಾಗಲೆ ಟ್ರೈಲರ್ ಮತ್ತು ಹಾಡುಗಳ ಮೂಲಕ ಕನ್ನಡ ಚಿತ್ರಾಭಿಮಾನಿಗಳ ಗಮನ ಸೆಳೆದಿರುವ ಗೀತಾ ಇದೆ ತಿಂಗಳು 27ಕ್ಕೆ ತೆರೆಗೆ ಬರುತ್ತಿದೆ.